<p><strong>ಹಾವೇರಿ</strong>: ‘ಸದೃಢ ಭಾರತ ನಿರ್ಮಾಣಕ್ಕೆ ಹಳ್ಳಿ ಹಳ್ಳಿಗಳಿಂದಲೂ ಯುವಕರು ಸನ್ನದ್ಧರಾಗಬೇಕು’ ಎಂದು ಶಾಸಕ ನೆಹರು ಓಲೇಕಾರ ಕರೆ ನೀಡಿದರು.</p>.<p>ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಂಡಿದ್ದ ‘ಫಿಟ್ ಇಂಡಿಯಾ ಫ್ರೀಡಮ್ ರನ್ 2.0’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿಶ್ವದಲ್ಲೇ ಅತಿ ಹೆಚ್ಚು ಯುವಕರನ್ನು ಹೊಂದಿರುವ ರಾಷ್ಟ್ರ ಭಾರತ. ಯುವಶಕ್ತಿ ಒಗ್ಗೂಡಿದರೆ ವಿಶ್ವದಲ್ಲೇ ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮಬಹುದು. ನಮ್ಮ ಭಾರತ ವಿಶ್ವಕ್ಕೆ ಗುರುವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ‘ಪ್ರಧಾನ ಮಂತ್ರಿಗಳ ಫಿಟ್ ಇಂಡಿಯಾ ಆಂದೋಲನ ಯಶಸ್ವಿಗೆ ಯುವಕರೆಲ್ಲ ಸದೃಢರಾಗಬೇಕು ಹಾಗೂ ಸಶಸ್ತ್ರ ಪಡೆಗಳಿಗೆ ಹೆಚ್ಚು ಹೆಚ್ಚು ಸೇರಿಕೊಂಡು ರಾಷ್ಟ್ರ ಸೇವೆಗೆ ಮುಂದಾಗಬೇಕು’ ಎಂದು ಯುವಕರಿಗೆ ಕಿವಿಮಾತು ಹೇಳಿದರು.</p>.<p>ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ರವಿಕುಮಾರ ಅಂಬೋರೆ ಮಾತನಾಡಿ, ನಾವೆಲ್ಲ ಸೋಮಾರಿತನವನ್ನು ಬಿಟ್ಟು ದೈಹಿಕ ಸದೃಢತೆ ಬಗ್ಗೆ ಗಮನ ಹರಿಸಬೇಕು. ಆಗ ಮಾತ್ರ ನಾವು ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಯುವಕರಿಗೆ ಕಿವಿಮಾತು ಹೇಳಿದರು.</p>.<p>ನೆಹರು ಯುವ ಕೇಂದ್ರದ ಜಿಲ್ಲಾ ಅಧಿಕಾರಿ ಭುಕ್ಯಾ ಸಂಜೀವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಸದೃಢ ಭಾರತ ನಿರ್ಮಾಣಕ್ಕೆ ಹಳ್ಳಿ ಹಳ್ಳಿಗಳಿಂದಲೂ ಯುವಕರು ಸನ್ನದ್ಧರಾಗಬೇಕು’ ಎಂದು ಶಾಸಕ ನೆಹರು ಓಲೇಕಾರ ಕರೆ ನೀಡಿದರು.</p>.<p>ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ‘ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ಹಮ್ಮಿಕೊಂಡಿದ್ದ ‘ಫಿಟ್ ಇಂಡಿಯಾ ಫ್ರೀಡಮ್ ರನ್ 2.0’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ವಿಶ್ವದಲ್ಲೇ ಅತಿ ಹೆಚ್ಚು ಯುವಕರನ್ನು ಹೊಂದಿರುವ ರಾಷ್ಟ್ರ ಭಾರತ. ಯುವಶಕ್ತಿ ಒಗ್ಗೂಡಿದರೆ ವಿಶ್ವದಲ್ಲೇ ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮಬಹುದು. ನಮ್ಮ ಭಾರತ ವಿಶ್ವಕ್ಕೆ ಗುರುವಾಗಲಿದೆ’ ಎಂದು ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ‘ಪ್ರಧಾನ ಮಂತ್ರಿಗಳ ಫಿಟ್ ಇಂಡಿಯಾ ಆಂದೋಲನ ಯಶಸ್ವಿಗೆ ಯುವಕರೆಲ್ಲ ಸದೃಢರಾಗಬೇಕು ಹಾಗೂ ಸಶಸ್ತ್ರ ಪಡೆಗಳಿಗೆ ಹೆಚ್ಚು ಹೆಚ್ಚು ಸೇರಿಕೊಂಡು ರಾಷ್ಟ್ರ ಸೇವೆಗೆ ಮುಂದಾಗಬೇಕು’ ಎಂದು ಯುವಕರಿಗೆ ಕಿವಿಮಾತು ಹೇಳಿದರು.</p>.<p>ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ರವಿಕುಮಾರ ಅಂಬೋರೆ ಮಾತನಾಡಿ, ನಾವೆಲ್ಲ ಸೋಮಾರಿತನವನ್ನು ಬಿಟ್ಟು ದೈಹಿಕ ಸದೃಢತೆ ಬಗ್ಗೆ ಗಮನ ಹರಿಸಬೇಕು. ಆಗ ಮಾತ್ರ ನಾವು ಏನನ್ನಾದರೂ ಸಾಧಿಸಲು ಸಾಧ್ಯ ಎಂದು ಯುವಕರಿಗೆ ಕಿವಿಮಾತು ಹೇಳಿದರು.</p>.<p>ನೆಹರು ಯುವ ಕೇಂದ್ರದ ಜಿಲ್ಲಾ ಅಧಿಕಾರಿ ಭುಕ್ಯಾ ಸಂಜೀವ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>