ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸಂಗೂರ ಸಕ್ಕರೆ ಕಾರ್ಖಾನೆಯ ಗುತ್ತಿಗೆದಾರರಾದ ಜಿ.ಎಂ.ಶುಗರ್ಸ್ನವರು, ಸಕ್ಕರೆ ಇಳುವರಿಯನ್ನು ಕಡಿಮೆ ತೋರಿಸುತ್ತಾರೆ. ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ಇದ್ದಾಗ ಶೇ 10ರಷ್ಟು ಸಕ್ಕರೆ ಇಳುವರಿ ಬರುತ್ತಿತ್ತು. ಆದರೆ, 2007–08ರಿಂದ ಶೇ 9.5ರಷ್ಟು ಮಾತ್ರ ಇಳುವರಿ ತೋರಿಸುತ್ತಿದ್ದಾರೆ. ಇದರಿಂದ ಕಬ್ಬಿನ ದರದಲ್ಲಿ ವ್ಯತ್ಯಾಸವಾಗುತ್ತಿದೆ ಮತ್ತು ರೈತರಿಗೆ ಅನ್ಯಾಯವಾಗುತ್ತಿದೆ’ ಎಂದು ಆರೋಪ ಮಾಡಿದರು.