<p><strong>ಹಾವೇರಿ</strong>: ಬೆಂಗಳೂರಿನಿಂದ ಧಾರವಾಡಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ ಫ್ಲಿಪ್ಕಾರ್ಟ್ ಕಂಪನಿಗೆ ಸೇರಿದ ₹ 24.91 ಲಕ್ಷ ಮೌಲ್ಯದ ಮೊಬೈಲ್ಗಳ ಕಳವು ಪ್ರಕರಣದ ಸಂಬಂಧ ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಫ್ಲಿಪ್ಕಾರ್ಟ್ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>‘ಜಿಲ್ಲೆಯ ಕಾಕೋಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಫೆ. 1ರಂದು ಹೊರಟಿದ್ದ ಲಾರಿಯ ಬಾಗಿಲಿನ ಬೀಗವನ್ನು ಸಿನಿಮೀಯ ರೀತಿಯಲ್ಲಿ ತೆರೆದು, ಮೊಬೈಲ್ಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳಿದ್ದ 6 ಬಾಕ್ಸ್ಗಳನ್ನು ಕಳವು ಮಾಡಲಾಗಿದೆ’ ಎಂದು ಲಾರಿ ಚಾಲಕ ಮಲಿಕಜಾನ್ ಮುಲ್ಲಾ ಅವರು ಠಾಣೆಗೆ ದೂರು ನೀಡಿದ್ದಾರೆ.</p>.<p>‘ಕಳವು ಬಗ್ಗೆ ಚಾಲಕ ದೂರು ನೀಡಿದ್ದು, ವಸ್ತುಗಳ ಬಗ್ಗೆ ಫ್ಲಿಪ್ಕಾರ್ಟ್ ಸಿಬ್ಬಂದಿಯಿಂದ ಮಾಹಿತಿ ಪಡೆಯಲಾಗುತ್ತಿದೆ. ಯಾವ ವಸ್ತುಗಳು ಕಳುವಾಗಿವೆ? ಮೊಬೈಲ್ಗಳ ಐಎಂಇಐ ಸಂಖ್ಯೆ ಏನು ಎಂಬ ಮಾಹಿತಿ ಕಲೆ ಹಾಕುತ್ತಿದ್ದೇವೆ. ಐಎಂಇಐ ಸಿಕ್ಕರೆ, ಮೊಬೈಲ್ಗಳ ಸುಳಿವು ಸಿಗುತ್ತದೆ’ ಎಂದು ಪೊಲೀಸರು ಹೇಳಿದರು.</p>.<p>‘ಸರಕು ಸಾಗಣೆ ವಾಹನಗಳಲ್ಲಿ ಸುರಕ್ಷತೆಗಾಗಿ ಸಿ.ಸಿ.ಟಿ.ವಿ ಕ್ಯಾಮೆರಾವನ್ನು ಲಾರಿಯಲ್ಲಿ ಅಳವಡಿಸಿಲ್ಲ. ರಾಷ್ಟ್ರೀಯ ಹೆದ್ದಾರಿಯ ಹಲವು ಕಡೆ ಲಾರಿ ನಿಂತಿತ್ತು. ಆದರೆ, ಕಾಕೋಳ ಬಳಿಯೇ ಬಾಗಿಲು ತೆರೆದಿರುವುದಾಗಿ ಕಂಪನಿಯ ತಾಂತ್ರಿಕ ವಿಭಾಗ ತಿಳಿಸಿದೆ. ಸತ್ಯಾಸತ್ಯತೆ ಪತ್ತೆಗೆ ತನಿಖೆ ನಡೆಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಬೆಂಗಳೂರಿನಿಂದ ಧಾರವಾಡಕ್ಕೆ ಲಾರಿಯಲ್ಲಿ ಸಾಗಿಸುತ್ತಿದ್ದ ಫ್ಲಿಪ್ಕಾರ್ಟ್ ಕಂಪನಿಗೆ ಸೇರಿದ ₹ 24.91 ಲಕ್ಷ ಮೌಲ್ಯದ ಮೊಬೈಲ್ಗಳ ಕಳವು ಪ್ರಕರಣದ ಸಂಬಂಧ ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಫ್ಲಿಪ್ಕಾರ್ಟ್ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.</p>.<p>‘ಜಿಲ್ಲೆಯ ಕಾಕೋಳ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಫೆ. 1ರಂದು ಹೊರಟಿದ್ದ ಲಾರಿಯ ಬಾಗಿಲಿನ ಬೀಗವನ್ನು ಸಿನಿಮೀಯ ರೀತಿಯಲ್ಲಿ ತೆರೆದು, ಮೊಬೈಲ್ಗಳು ಹಾಗೂ ಇತರೆ ಬೆಲೆಬಾಳುವ ವಸ್ತುಗಳಿದ್ದ 6 ಬಾಕ್ಸ್ಗಳನ್ನು ಕಳವು ಮಾಡಲಾಗಿದೆ’ ಎಂದು ಲಾರಿ ಚಾಲಕ ಮಲಿಕಜಾನ್ ಮುಲ್ಲಾ ಅವರು ಠಾಣೆಗೆ ದೂರು ನೀಡಿದ್ದಾರೆ.</p>.<p>‘ಕಳವು ಬಗ್ಗೆ ಚಾಲಕ ದೂರು ನೀಡಿದ್ದು, ವಸ್ತುಗಳ ಬಗ್ಗೆ ಫ್ಲಿಪ್ಕಾರ್ಟ್ ಸಿಬ್ಬಂದಿಯಿಂದ ಮಾಹಿತಿ ಪಡೆಯಲಾಗುತ್ತಿದೆ. ಯಾವ ವಸ್ತುಗಳು ಕಳುವಾಗಿವೆ? ಮೊಬೈಲ್ಗಳ ಐಎಂಇಐ ಸಂಖ್ಯೆ ಏನು ಎಂಬ ಮಾಹಿತಿ ಕಲೆ ಹಾಕುತ್ತಿದ್ದೇವೆ. ಐಎಂಇಐ ಸಿಕ್ಕರೆ, ಮೊಬೈಲ್ಗಳ ಸುಳಿವು ಸಿಗುತ್ತದೆ’ ಎಂದು ಪೊಲೀಸರು ಹೇಳಿದರು.</p>.<p>‘ಸರಕು ಸಾಗಣೆ ವಾಹನಗಳಲ್ಲಿ ಸುರಕ್ಷತೆಗಾಗಿ ಸಿ.ಸಿ.ಟಿ.ವಿ ಕ್ಯಾಮೆರಾವನ್ನು ಲಾರಿಯಲ್ಲಿ ಅಳವಡಿಸಿಲ್ಲ. ರಾಷ್ಟ್ರೀಯ ಹೆದ್ದಾರಿಯ ಹಲವು ಕಡೆ ಲಾರಿ ನಿಂತಿತ್ತು. ಆದರೆ, ಕಾಕೋಳ ಬಳಿಯೇ ಬಾಗಿಲು ತೆರೆದಿರುವುದಾಗಿ ಕಂಪನಿಯ ತಾಂತ್ರಿಕ ವಿಭಾಗ ತಿಳಿಸಿದೆ. ಸತ್ಯಾಸತ್ಯತೆ ಪತ್ತೆಗೆ ತನಿಖೆ ನಡೆಸಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>