<p><strong>ಚಿನ್ನಮುಳಗುಂದ (ಹಂಸಬಾವಿ):</strong> ‘ಗರ್ಭಿಣಿಯರು ಬೆಳೆಯುವ ಮಗುವಿನ ಆರೋಗ್ಯದ ದೃಷ್ಟಿಯಿಂದ ಸರ್ಕಾರದಿಂದ ನೀಡುವ ಪೌಷ್ಟಿಕ ಆಹಾರವನ್ನು ನಿಯಮಿತವಾಗಿ ಸೇವಿಸಬೇಕು. ಉತ್ತಮ ದಿನಚರಿ ಹೊಂದಬೇಕು’ ಎಂದು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಶ್ರೀನಿವಾಸ ಆಲದರ್ತಿ ಹೇಳಿದರು.</p>.<p>ಸಮೀಪದ ಚಿನ್ನಮುಳಗುಂದ ಗ್ರಾಮದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಪೌಷ್ಟಿಕ ಆಹಾರ ಸೇವನೆಯಿಂದ ಹುಟ್ಟುವ ಮಗುವಿನ ಬೆಳವಣಿಗೆ ಕುಂಠಿತವಾಗುವುದಲ್ಲದೇ, ರಕ್ತಹೀನತೆಯೂ ಕಂಡು ಬರುತ್ತದೆ. ಹೀಗಾಗಿ ಆಗಾಗ ವೈದ್ಯರನ್ನು ಸಂಪರ್ಕಿಸಿ ಪರೀಕ್ಷಿಸಿ ಸೂಕ್ತ ಸಲಹೆ ಪಡೆದುಕೊಳ್ಳಬೇಕು’ ಎಂದರು.</p>.<p>ಸಿಡಿಪಿಒ ಜಯಶ್ರೀ ಪಾಟೀಲ ಮಾತನಾಡಿ, ‘ಬಾಣಂತಿಯರು ಸೇವಿಸುವ ಆಹಾರ ಪೌಷ್ಟಿಕವಾಗಿರಬೇಕು. ಸರ್ಕಾರ ಗರ್ಭಿಣಿಯರಿಗೆ, ಬಾಣಂತಿಯರ ಆರೋಗ್ಯದ ದೃಷ್ಠಿಯಿಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನ ಪಡೆಯಬೇಕು ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಸಂಜೀವಯ್ಯ ಕಬ್ಬಣಿಕಂತಿಮಠ, ಮುತ್ತಪ್ಪ ಜಲಾಟಿ, ಪಿಡಿಒ ನಾಗರಾಜ ಬಣಕಾರ ಮಾತನಾಡಿದರು.</p>.<p>ಹಂಸಬಾವಿ ಮೇಲ್ವಿಚಾರಕಿ ಚನ್ನಮ್ಮಹಿತ್ಲರ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಗೀತಾ ಬಾಳಿಕಾಯಿ, ಶೋಭಾ ಬಿ.ಎಸ್, ಕುಸುಮಾ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿನ್ನಮುಳಗುಂದ (ಹಂಸಬಾವಿ):</strong> ‘ಗರ್ಭಿಣಿಯರು ಬೆಳೆಯುವ ಮಗುವಿನ ಆರೋಗ್ಯದ ದೃಷ್ಟಿಯಿಂದ ಸರ್ಕಾರದಿಂದ ನೀಡುವ ಪೌಷ್ಟಿಕ ಆಹಾರವನ್ನು ನಿಯಮಿತವಾಗಿ ಸೇವಿಸಬೇಕು. ಉತ್ತಮ ದಿನಚರಿ ಹೊಂದಬೇಕು’ ಎಂದು ಮಕ್ಕಳ ಕಲ್ಯಾಣ ಇಲಾಖೆಯ ಜಿಲ್ಲಾ ನಿರ್ದೇಶಕ ಶ್ರೀನಿವಾಸ ಆಲದರ್ತಿ ಹೇಳಿದರು.</p>.<p>ಸಮೀಪದ ಚಿನ್ನಮುಳಗುಂದ ಗ್ರಾಮದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿ ನಡೆದ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಅಪೌಷ್ಟಿಕ ಆಹಾರ ಸೇವನೆಯಿಂದ ಹುಟ್ಟುವ ಮಗುವಿನ ಬೆಳವಣಿಗೆ ಕುಂಠಿತವಾಗುವುದಲ್ಲದೇ, ರಕ್ತಹೀನತೆಯೂ ಕಂಡು ಬರುತ್ತದೆ. ಹೀಗಾಗಿ ಆಗಾಗ ವೈದ್ಯರನ್ನು ಸಂಪರ್ಕಿಸಿ ಪರೀಕ್ಷಿಸಿ ಸೂಕ್ತ ಸಲಹೆ ಪಡೆದುಕೊಳ್ಳಬೇಕು’ ಎಂದರು.</p>.<p>ಸಿಡಿಪಿಒ ಜಯಶ್ರೀ ಪಾಟೀಲ ಮಾತನಾಡಿ, ‘ಬಾಣಂತಿಯರು ಸೇವಿಸುವ ಆಹಾರ ಪೌಷ್ಟಿಕವಾಗಿರಬೇಕು. ಸರ್ಕಾರ ಗರ್ಭಿಣಿಯರಿಗೆ, ಬಾಣಂತಿಯರ ಆರೋಗ್ಯದ ದೃಷ್ಠಿಯಿಂದ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳ ಪ್ರಯೋಜನ ಪಡೆಯಬೇಕು ಎಂದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಸಂಜೀವಯ್ಯ ಕಬ್ಬಣಿಕಂತಿಮಠ, ಮುತ್ತಪ್ಪ ಜಲಾಟಿ, ಪಿಡಿಒ ನಾಗರಾಜ ಬಣಕಾರ ಮಾತನಾಡಿದರು.</p>.<p>ಹಂಸಬಾವಿ ಮೇಲ್ವಿಚಾರಕಿ ಚನ್ನಮ್ಮಹಿತ್ಲರ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಗೀತಾ ಬಾಳಿಕಾಯಿ, ಶೋಭಾ ಬಿ.ಎಸ್, ಕುಸುಮಾ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>