<p>ಹಾವೇರಿ: ‘ಸಂಗೂರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಫೆ.1ರಿಂದ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಮೆ.ಟನ್ಗೆ ₹200ರಂತೆ ಹೆಚ್ಚುವರಿಯಾಗಿ ಕಬ್ಬು ಕಟಾವು ಮತ್ತು ನೀರು ನಿರ್ವಹಣೆ ಸಹಾಯಧನವನ್ನು ನೀಡುವುದಾಗಿ ಆಡಳಿತ ಮಂಡಳಿ ತಿಳಿಸಿದೆ. ಈ ಸಹಾಯಧನವನ್ನು2020–21ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ಎಲ್ಲ ರೈತರಿಗೂ ನೀಡಬೇಕು’ ಎಂದು ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಿವಾನಂದ ಗುರುಮಠ ಒತ್ತಾಯಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2020ರ ಅಕ್ಟೋಬರ್ 12ರಂದು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರ ನಿಗದಿಪಡಿಸಿದ ಎಫ್ಆರ್ಪಿ ದರ ₹2750 ಅನ್ನು ಪ್ರತಿ ಟನ್ಗೆ ಕೊಡುವುದಾಗಿ ಆಡಳಿತ ಮಂಡಳಿ ಒಪ್ಪಿಕೊಂಡಿತ್ತು. ಕಾರ್ಖಾನೆ ₹7ರಿಂದ ₹8 ಕೋಟಿ ನಷ್ಟದಲ್ಲಿದೆ ಎಂಬ ಕಾರಣ ಹೇಳಿ, ₹50 ಅನ್ನು ರೈತರಿಗೆ ಹೆಚ್ಚುವರಿಯಾಗಿ ನೀಡಲು ನಿರಾಕರಿಸಿತ್ತು. ಆದರೆ ಈಗ ₹200 ಹೆಚ್ಚುವರಿಯಾಗಿ ನೀಡಲು ಮುಂದಾಗಿರುವುದು ಕಾರ್ಖಾನೆಯ ಲಾಭಾಂಶವನ್ನು ತೋರಿಸುತ್ತದೆ ಎಂದು ಹೇಳಿದರು.</p>.<p>ಸಕ್ಕರೆ ಇಳುವರಿಯಲ್ಲಿ ಕಾರ್ಖಾನೆ ಮೋಸ ಮಾಡುತ್ತಿರುವುದರಿಂದ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಬೇಕು. ಅದರಲ್ಲಿ ಇಬ್ಬರು ಕಬ್ಬು ಬೆಳೆಗಾರರಿರಬೇಕು ಎಂಬ ಬೇಡಿಕೆ ಇದುವರೆಗೂ ಈಡೇರಿಲ್ಲ. ಕಬ್ಬು ಕಟಾವು ಮಾಡುವ ಗ್ಯಾಂಗ್ನವರು 1 ಟನ್ ಕಬ್ಬು ಕಡಿಯಲು ₹1000 ರಿಂದ ₹1100 ತೆಗೆದುಕೊಳ್ಳುತ್ತಿರುವುದರಿಂದ ರೈತರಿಗೆ ಮೋಸವಾಗುತ್ತಿದೆ. ಈ ಬಗ್ಗೆ ರೈತ ಪ್ರತಿನಿಧಿಗಳ ಸಮಿತಿ ಇದುವರೆಗೂ ರಚನೆಯಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೇಂದ್ರ ಸರ್ಕಾರ ₹3500 ಕೋಟಿಯನ್ನು ಬಿಡುಗಡೆ ಮಾಡಿದ್ದು, ಕಬ್ಬು ಬೆಳಗಾರರ ಖಾತೆಗೆ ನೇರ ಜಮೆ ಎಂದು ಹೇಳಲಾಗುತ್ತಿದೆ. ಆ ಹಣ ಯಾವ ರೈತರಿಗೆ ಮತ್ತು ಎಷ್ಟು ಜಮೆಯಾಗುತ್ತದೆ ಎಂಬ ಬಗ್ಗೆ ಸಂಸದರು ಕಬ್ಬು ಬೆಳೆಗಾರರಿಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಘದ ಸದಸ್ಯ ಎಸ್.ಎಂ. ಚಿಕ್ಕಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ‘ಸಂಗೂರ ಸಹಕಾರಿ ಸಕ್ಕರೆ ಕಾರ್ಖಾನೆಗೆ ಫೆ.1ರಿಂದ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಮೆ.ಟನ್ಗೆ ₹200ರಂತೆ ಹೆಚ್ಚುವರಿಯಾಗಿ ಕಬ್ಬು ಕಟಾವು ಮತ್ತು ನೀರು ನಿರ್ವಹಣೆ ಸಹಾಯಧನವನ್ನು ನೀಡುವುದಾಗಿ ಆಡಳಿತ ಮಂಡಳಿ ತಿಳಿಸಿದೆ. ಈ ಸಹಾಯಧನವನ್ನು2020–21ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ಎಲ್ಲ ರೈತರಿಗೂ ನೀಡಬೇಕು’ ಎಂದು ಅಖಿಲ ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಿವಾನಂದ ಗುರುಮಠ ಒತ್ತಾಯಿಸಿದರು.</p>.<p>ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2020ರ ಅಕ್ಟೋಬರ್ 12ರಂದು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರ ನಿಗದಿಪಡಿಸಿದ ಎಫ್ಆರ್ಪಿ ದರ ₹2750 ಅನ್ನು ಪ್ರತಿ ಟನ್ಗೆ ಕೊಡುವುದಾಗಿ ಆಡಳಿತ ಮಂಡಳಿ ಒಪ್ಪಿಕೊಂಡಿತ್ತು. ಕಾರ್ಖಾನೆ ₹7ರಿಂದ ₹8 ಕೋಟಿ ನಷ್ಟದಲ್ಲಿದೆ ಎಂಬ ಕಾರಣ ಹೇಳಿ, ₹50 ಅನ್ನು ರೈತರಿಗೆ ಹೆಚ್ಚುವರಿಯಾಗಿ ನೀಡಲು ನಿರಾಕರಿಸಿತ್ತು. ಆದರೆ ಈಗ ₹200 ಹೆಚ್ಚುವರಿಯಾಗಿ ನೀಡಲು ಮುಂದಾಗಿರುವುದು ಕಾರ್ಖಾನೆಯ ಲಾಭಾಂಶವನ್ನು ತೋರಿಸುತ್ತದೆ ಎಂದು ಹೇಳಿದರು.</p>.<p>ಸಕ್ಕರೆ ಇಳುವರಿಯಲ್ಲಿ ಕಾರ್ಖಾನೆ ಮೋಸ ಮಾಡುತ್ತಿರುವುದರಿಂದ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಮಿತಿ ರಚಿಸಬೇಕು. ಅದರಲ್ಲಿ ಇಬ್ಬರು ಕಬ್ಬು ಬೆಳೆಗಾರರಿರಬೇಕು ಎಂಬ ಬೇಡಿಕೆ ಇದುವರೆಗೂ ಈಡೇರಿಲ್ಲ. ಕಬ್ಬು ಕಟಾವು ಮಾಡುವ ಗ್ಯಾಂಗ್ನವರು 1 ಟನ್ ಕಬ್ಬು ಕಡಿಯಲು ₹1000 ರಿಂದ ₹1100 ತೆಗೆದುಕೊಳ್ಳುತ್ತಿರುವುದರಿಂದ ರೈತರಿಗೆ ಮೋಸವಾಗುತ್ತಿದೆ. ಈ ಬಗ್ಗೆ ರೈತ ಪ್ರತಿನಿಧಿಗಳ ಸಮಿತಿ ಇದುವರೆಗೂ ರಚನೆಯಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕೇಂದ್ರ ಸರ್ಕಾರ ₹3500 ಕೋಟಿಯನ್ನು ಬಿಡುಗಡೆ ಮಾಡಿದ್ದು, ಕಬ್ಬು ಬೆಳಗಾರರ ಖಾತೆಗೆ ನೇರ ಜಮೆ ಎಂದು ಹೇಳಲಾಗುತ್ತಿದೆ. ಆ ಹಣ ಯಾವ ರೈತರಿಗೆ ಮತ್ತು ಎಷ್ಟು ಜಮೆಯಾಗುತ್ತದೆ ಎಂಬ ಬಗ್ಗೆ ಸಂಸದರು ಕಬ್ಬು ಬೆಳೆಗಾರರಿಗೆ ಮಾಹಿತಿ ನೀಡಬೇಕು ಎಂದು ಒತ್ತಾಯಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಸಂಘದ ಸದಸ್ಯ ಎಸ್.ಎಂ. ಚಿಕ್ಕಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>