<p><strong>ಗುತ್ತಲ:</strong> ಒಂಟಿ ಸಲಗ ಸೆರೆ ಹಿಡಿಯಲು ತಾಲ್ಲೂಕಿನ ಕೂರಗೂಂದ, ಗುತ್ತಲ ಮತ್ತು ಬಸಾಪುರ ಅರಣ್ಯ ಪ್ರದೇಶದಲ್ಲಿ ಬುಧವಾರ ಮುಂಜಾನೆಯಿಂದಲೇ ಅರಣ್ಯ ಇಲಾಖೆ ಸಿಬ್ಬಂದಿ ಮೂರು ಸಾಕಾನೆಗಳೊಂದಿಗೆ ಕಾರ್ಯಚರಣೆ ನಡೆಸಿದರು.</p>.<p>ಸಂಜೆ ಬಸಾಪೂರ ಅರಣ್ಯ ಕಾಡಂಚಿನ ಪ್ರದೇಶದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಯಿತು. 200 ಮೀಟರ್ ದೂರದಲ್ಲಿ ಮನುಷ್ಯರ ಕಂಡ ಆನೆ ತನ್ನ ಪುಂಡಾಟವನ್ನು ಮುಂದುವರಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸತತ ಪ್ರಯತ್ನ ನಡೆಸಿದರೂ ಒಂಟಿ ಸಲಗ ಸೆರೆಗೆ ಸಿಲುಕಲಿಲ್ಲ.</p>.<p>ಒಂಟಿ ಸಲಗದ ಪುಂಡಾಟ ನೋಡಿದರೆ ಮನುಷ್ಯರ ಮೇಲೆ, ಸಕ್ರೆಬೈಲ್ನ ಸಾಕಾನೆಗಳ ಮೇಲೆ ಹಾಗೂ ಮಾವುತರ ಮೇಲೂ ದಾಳಿ ಮಾಡುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಸಕ್ರೆಬೈಲು ಆನೆ ಬಿಡಾರದಿಂದ ಮತ್ತೆರಡು ಸಾಕಾನೆಗಳನ್ನು ತರಲು ಸಿಬ್ಬಂದಿಯನ್ನು ಕಳಿಸಲಾಗಿದೆ. ಒಟ್ಟು 5 ಸಾಕಾನೆಗಳ ಮೂಲಕ ಕಾಡಾನೆಯನ್ನು ಸೆರೆ ಹಿಡಿಯಲಾಗುವುದು’ ಎಂದು ವಲಯ ಅರಣ್ಯ ಅಧಿಕಾರಿ ರಾಮಪ್ಪ ಪೂಜಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಬಸಾಪೂರ ಅರಣ್ಯ ಪ್ರದೇಶಕ್ಕೆ ಕ್ಯಾಂಪ್ ಅನ್ನು ಬದಲಿಸಲಾಯಿತು. ಪ್ರತ್ಯಕ್ಷವಾದ ಕಾಡಾನೆ ಬುಧವಾರ ರಾತ್ರಿ ಸ್ಥಳ ಬದಲಾವಣೆ ಮಾಡಿದರೆ ಮತ್ತೆ ಆನೆ ಪತ್ತೆ ಹಚ್ಚುವದು ಕಷ್ಟದ ಕೆಲಸ ಎಂದು ಅರಣ್ಯ ಅಧಿಕಾರಿಗಳು ಅಭಿಪ್ರಾಯಪಟ್ಟರು.</p>.<p>ಗುರುವಾರದಂದು 5 ಆನೆಗಳಿಂದ ಕಾರ್ಯಾಚರಣೆ ನಡೆಸಿ, ಒಂಟಿ ಸಲಗ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಲ:</strong> ಒಂಟಿ ಸಲಗ ಸೆರೆ ಹಿಡಿಯಲು ತಾಲ್ಲೂಕಿನ ಕೂರಗೂಂದ, ಗುತ್ತಲ ಮತ್ತು ಬಸಾಪುರ ಅರಣ್ಯ ಪ್ರದೇಶದಲ್ಲಿ ಬುಧವಾರ ಮುಂಜಾನೆಯಿಂದಲೇ ಅರಣ್ಯ ಇಲಾಖೆ ಸಿಬ್ಬಂದಿ ಮೂರು ಸಾಕಾನೆಗಳೊಂದಿಗೆ ಕಾರ್ಯಚರಣೆ ನಡೆಸಿದರು.</p>.<p>ಸಂಜೆ ಬಸಾಪೂರ ಅರಣ್ಯ ಕಾಡಂಚಿನ ಪ್ರದೇಶದಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಯಿತು. 200 ಮೀಟರ್ ದೂರದಲ್ಲಿ ಮನುಷ್ಯರ ಕಂಡ ಆನೆ ತನ್ನ ಪುಂಡಾಟವನ್ನು ಮುಂದುವರಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸತತ ಪ್ರಯತ್ನ ನಡೆಸಿದರೂ ಒಂಟಿ ಸಲಗ ಸೆರೆಗೆ ಸಿಲುಕಲಿಲ್ಲ.</p>.<p>ಒಂಟಿ ಸಲಗದ ಪುಂಡಾಟ ನೋಡಿದರೆ ಮನುಷ್ಯರ ಮೇಲೆ, ಸಕ್ರೆಬೈಲ್ನ ಸಾಕಾನೆಗಳ ಮೇಲೆ ಹಾಗೂ ಮಾವುತರ ಮೇಲೂ ದಾಳಿ ಮಾಡುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಸಕ್ರೆಬೈಲು ಆನೆ ಬಿಡಾರದಿಂದ ಮತ್ತೆರಡು ಸಾಕಾನೆಗಳನ್ನು ತರಲು ಸಿಬ್ಬಂದಿಯನ್ನು ಕಳಿಸಲಾಗಿದೆ. ಒಟ್ಟು 5 ಸಾಕಾನೆಗಳ ಮೂಲಕ ಕಾಡಾನೆಯನ್ನು ಸೆರೆ ಹಿಡಿಯಲಾಗುವುದು’ ಎಂದು ವಲಯ ಅರಣ್ಯ ಅಧಿಕಾರಿ ರಾಮಪ್ಪ ಪೂಜಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>ಬಸಾಪೂರ ಅರಣ್ಯ ಪ್ರದೇಶಕ್ಕೆ ಕ್ಯಾಂಪ್ ಅನ್ನು ಬದಲಿಸಲಾಯಿತು. ಪ್ರತ್ಯಕ್ಷವಾದ ಕಾಡಾನೆ ಬುಧವಾರ ರಾತ್ರಿ ಸ್ಥಳ ಬದಲಾವಣೆ ಮಾಡಿದರೆ ಮತ್ತೆ ಆನೆ ಪತ್ತೆ ಹಚ್ಚುವದು ಕಷ್ಟದ ಕೆಲಸ ಎಂದು ಅರಣ್ಯ ಅಧಿಕಾರಿಗಳು ಅಭಿಪ್ರಾಯಪಟ್ಟರು.</p>.<p>ಗುರುವಾರದಂದು 5 ಆನೆಗಳಿಂದ ಕಾರ್ಯಾಚರಣೆ ನಡೆಸಿ, ಒಂಟಿ ಸಲಗ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗುತ್ತೇವೆ ಎಂಬ ವಿಶ್ವಾಸವನ್ನು ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>