‘ಕರಡಿಗೆ ಅರಿವಳಿಕೆ ಮದ್ದು ನೀಡಿ, ಬಲೆ ಬೀಸಿದ ಬಳಿಕ ತಂತಿಯಿಂದ ಕರಡಿಯನ್ನು ಬಿಡಿಸಲಾಯಿತು. ಸಣ್ಣಪುಟ್ಟ ಗಾಯಗಳಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದೆ. ಮಧ್ಯಾಹ್ನದ ಹೊತ್ತಿಗೆ ಪ್ರಜ್ಞೆ ಮರುಕಳಿಸಿದ ಬಳಿಕ ಕರಡಿಯ ಆರೋಗ್ಯ ಸ್ಥಿತಿಯ ಪರೀಕ್ಷೆ ನಡೆಸಲಾಗಿದೆ. ನಂತರ ಮುಂಡಗೋಡ ಭಾಗದ ದಟ್ಟ ಅರಣ್ಯಕ್ಕೆ ಕರಡಿಯನ್ನು ಸುರಕ್ಷಿತವಾಗಿ ಬಿಡಲಾಗಿದೆ’ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.