<p><strong>ಹಾವೇರಿ:</strong> ಕೇಂದ್ರ ಸರ್ಕಾರದ ಮುದ್ರಾ ಯೋಜನೆಯಡಿ ₹47 ಲಕ್ಷ ಸಾಲ ಕೊಡಿಸುವ ಆಮಿಷವೊಡ್ಡಿ ಮಹಿಳೆಯೊಬ್ಬರಿಂದ ₹5.14 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಕುಮಾರಪಟ್ಟಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ರಾಣೆಬೆನ್ನೂರು ತಾಲ್ಲೂಕಿನ ಕೋಡಿಯಾಲ ಹೊಸೊಪೇಟೆಯ ನಿವಾಸಿಯಾಗಿರುವ 39 ವರ್ಷದ ಮಹಿಳೆಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವೈದ್ಯಕೀಯ ವೃತ್ತಿಯಲ್ಲಿರುವ ಮಹಿಳೆಗೆ ಮೊಬೈಲ್ಗೆ ಸಂದೇಶ ಬಂದಿತ್ತು. ‘ನೀವು ಮುದ್ರಾ ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದೀರಾ. ನಿಮಗೆ ₹ 47 ಲಕ್ಷ ಸಾಲ ಸಿಗುತ್ತದೆ’ ಎಂಬುದಾಗಿ ಸಂದೇಶದಲ್ಲಿ ಬರೆಯಲಾಗಿತ್ತು. ಇದನ್ನು ನಂಬಿದ್ದ ಮಹಿಳೆ, ಸಾಲ ಪಡೆಯಲು ಮುಂದಾಗಿದ್ದರು.’</p>.<p>‘ಯೋಜನೆಯಡಿ ಸಾಲ ಪಡೆಯಲು ನೋಂದಣಿ ಮಾಡಿಸಬೇಕು. ಇದಕ್ಕಾಗಿ ಕೆಲ ಶುಲ್ಕಗಳನ್ನು ಪಾವತಿಸಬೇಕೆಂದು ಆರೋಪಿ ಹೇಳಿದ್ದ. ಅದನ್ನು ನಂಬಿದ್ದ ಮಹಿಳೆ, ಮಾರ್ಚ್ 13ರಿಂದ ಜುಲೈ 13ರವರೆಗೆ ಹಂತ ಹಂತವಾಗಿ ₹ 5.14 ಲಕ್ಷ ಪಾವತಿಸಿದ್ದರು. ಇದಾದ ನಂತರ ಯಾವುದೇ ಸಾಲ ಮಂಜೂರಾಗಿಲ್ಲ. ಆರೋಪಿಯೂ ನಾಪತ್ತೆಯಾಗಿದ್ದಾನೆ. ಹಣ ಕಳೆದುಕೊಂಡ ಮಹಿಳೆ ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಕೇಂದ್ರ ಸರ್ಕಾರದ ಮುದ್ರಾ ಯೋಜನೆಯಡಿ ₹47 ಲಕ್ಷ ಸಾಲ ಕೊಡಿಸುವ ಆಮಿಷವೊಡ್ಡಿ ಮಹಿಳೆಯೊಬ್ಬರಿಂದ ₹5.14 ಲಕ್ಷ ಪಡೆದು ವಂಚಿಸಲಾಗಿದ್ದು, ಈ ಬಗ್ಗೆ ಕುಮಾರಪಟ್ಟಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.</p>.<p>‘ರಾಣೆಬೆನ್ನೂರು ತಾಲ್ಲೂಕಿನ ಕೋಡಿಯಾಲ ಹೊಸೊಪೇಟೆಯ ನಿವಾಸಿಯಾಗಿರುವ 39 ವರ್ಷದ ಮಹಿಳೆಯೊಬ್ಬರು ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ವೈದ್ಯಕೀಯ ವೃತ್ತಿಯಲ್ಲಿರುವ ಮಹಿಳೆಗೆ ಮೊಬೈಲ್ಗೆ ಸಂದೇಶ ಬಂದಿತ್ತು. ‘ನೀವು ಮುದ್ರಾ ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದೀರಾ. ನಿಮಗೆ ₹ 47 ಲಕ್ಷ ಸಾಲ ಸಿಗುತ್ತದೆ’ ಎಂಬುದಾಗಿ ಸಂದೇಶದಲ್ಲಿ ಬರೆಯಲಾಗಿತ್ತು. ಇದನ್ನು ನಂಬಿದ್ದ ಮಹಿಳೆ, ಸಾಲ ಪಡೆಯಲು ಮುಂದಾಗಿದ್ದರು.’</p>.<p>‘ಯೋಜನೆಯಡಿ ಸಾಲ ಪಡೆಯಲು ನೋಂದಣಿ ಮಾಡಿಸಬೇಕು. ಇದಕ್ಕಾಗಿ ಕೆಲ ಶುಲ್ಕಗಳನ್ನು ಪಾವತಿಸಬೇಕೆಂದು ಆರೋಪಿ ಹೇಳಿದ್ದ. ಅದನ್ನು ನಂಬಿದ್ದ ಮಹಿಳೆ, ಮಾರ್ಚ್ 13ರಿಂದ ಜುಲೈ 13ರವರೆಗೆ ಹಂತ ಹಂತವಾಗಿ ₹ 5.14 ಲಕ್ಷ ಪಾವತಿಸಿದ್ದರು. ಇದಾದ ನಂತರ ಯಾವುದೇ ಸಾಲ ಮಂಜೂರಾಗಿಲ್ಲ. ಆರೋಪಿಯೂ ನಾಪತ್ತೆಯಾಗಿದ್ದಾನೆ. ಹಣ ಕಳೆದುಕೊಂಡ ಮಹಿಳೆ ಠಾಣೆಗೆ ದೂರು ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>