ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಎಲ್ಡಿಬ್ಯಾಂಕ್ ಅಧ್ಯಕ್ಷ ಮಾಲತೇಶ ಗಂಗೋಳ, ರಾಜ್ಯ ಕೃಷಿಕ ಸಮಾಜದ ನಿರ್ದೇಶಕ ಆರ್.ಎನ್. ಗಂಗೋಳ, ಕೆ.ಎಂ.ಎಫ್. ನಿರ್ದೇಶಕ ಹನುಮಂತಗೌಡ ಭರಮಣ್ಣನವರ, ದೊಡ್ಡಗೌಡ ಪಾಟೀಲ, ದೇವರಾಜ ನಾಗಣ್ಣನವರ, ಗುತ್ತಿಗೆದಾರರಾದ ಜಿ.ಪಿ. ಪ್ರಕಾಶಗೌಡ, ರಘುನಾಥ ರಾಮರೆಡ್ಡಿ, ಶಂಕರಗೌಡ ಚನ್ನಗೌಡ್ರ, ಕಾರ್ಯಪಾಲಕ ಎಂಜಿನಿಯರ್ ಆರ್. ನಿತಿನ್, ಕುಡಪಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಅಲ್ಲಾಬಕ್ಷ್ಸಾಬ್ ಇದ್ದರು.ಇಂದಿರಾಗಾಂಧಿ ವಸತಿ ಶಾಲೆ ಪ್ರಾಂಶುಪಾಲ ರಾಜೀವಗೌಡ ಪಾಟೀಲ ಸ್ವಾಗತಿಸಿದರು. ಶಿಕ್ಷಕ ಮಲ್ಲಪ್ಪ ವಂದಿಸಿದರು.