<p><strong>ಗುತ್ತಲ</strong>: ಜುಲೈ 22ರಂದು ಚಂಡಿಗಢದಲ್ಲಿ ಹೃದಯಘಾತದಿಂದ ಮೃತಪಟ್ಟ ತಿಮ್ಮಾಪೂರ ಗ್ರಾಮದ ಬಿಎಸ್ಎಫ್ ಯೋಧ ಮಲ್ಲಿಕಾರ್ಜುನಯ್ಯ ಸುತ್ತೂರಮಠ ಅವರ ಪಾರ್ಥಿವ ಶರೀರವನ್ನು ಶನಿವಾರ ಗ್ರಾಮಕ್ಕೆ ತರಲಾಯಿತು. ಗ್ರಾಮಸ್ಥರು, ಗಣ್ಯರು ಅಂತಿಮ ದರ್ಶನ ಪಡೆದರು.</p>.<p>ಗುತ್ತಲದ ರುದ್ರಮುನಿ ಸ್ವಾಮೀಜಿ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು. ಸಾವಿರಾರು ಮಂದಿ ‘ಅಮರ ರಹೇ ಮಲ್ಲಿಕಾರ್ಜುನಯ್ಯ’ ‘ಭಾರತ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದರು. ಶಾಸಕ ನೆಹರು ಓಲೇಕಾರ, ತಹಶೀಲ್ದಾರ್ ಶಂಕರ ಜಿ.ಎಸ್. ಸೇರಿದಂತೆ ವಿವಿಧ ಮಠಾಧೀಶರು ಅಂತಿಮ ನಮನ ಸಲ್ಲಿಸಿದರು.</p>.<p>ಯೋಧನ ಸ್ವಗ್ರಾಮ ತಿಮ್ಮಾಪೂರದಲ್ಲಿ ಸರತಿಯಲ್ಲಿ ನಿಂತು ಜನರ ಅಂತಿಮ ದರ್ಶನ ಪಡೆದರು.ಬಿಎಸ್ಎಫ್ ಯೋಧರು ಸಕಲ ಸರ್ಕಾರಿ ಗೌರವ ಸಲ್ಲಿಸಿದರು. ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಈ ವೇಳೆ ಪತ್ನಿ,ಪುತ್ರ, ಪುತ್ರಿ ಸೇರಿದಂತೆ ಕುಟುಂಬದವರು ಮತ್ತು ತಿಮ್ಮಾಪೂರ ಗ್ರಾಮಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಮಾಜಿ ಸಚಿವ ರುದ್ರಪ್ಪ ಲಮಾಣಿ, ಸಿಪಿಐ ನಾಗಮ್ಮಕೆ., ಪಿಎಸ್ಐ ಜಗದೀಶ ಜಿ., ಪಿಎಸ್ಐ ಮಹಾಂತೇಶ ಮಣ್ಣನವರ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುತ್ತಲ</strong>: ಜುಲೈ 22ರಂದು ಚಂಡಿಗಢದಲ್ಲಿ ಹೃದಯಘಾತದಿಂದ ಮೃತಪಟ್ಟ ತಿಮ್ಮಾಪೂರ ಗ್ರಾಮದ ಬಿಎಸ್ಎಫ್ ಯೋಧ ಮಲ್ಲಿಕಾರ್ಜುನಯ್ಯ ಸುತ್ತೂರಮಠ ಅವರ ಪಾರ್ಥಿವ ಶರೀರವನ್ನು ಶನಿವಾರ ಗ್ರಾಮಕ್ಕೆ ತರಲಾಯಿತು. ಗ್ರಾಮಸ್ಥರು, ಗಣ್ಯರು ಅಂತಿಮ ದರ್ಶನ ಪಡೆದರು.</p>.<p>ಗುತ್ತಲದ ರುದ್ರಮುನಿ ಸ್ವಾಮೀಜಿ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು. ಸಾವಿರಾರು ಮಂದಿ ‘ಅಮರ ರಹೇ ಮಲ್ಲಿಕಾರ್ಜುನಯ್ಯ’ ‘ಭಾರತ ಮಾತಾ ಕೀ ಜೈ’ ಎಂದು ಘೋಷಣೆ ಕೂಗಿದರು. ಶಾಸಕ ನೆಹರು ಓಲೇಕಾರ, ತಹಶೀಲ್ದಾರ್ ಶಂಕರ ಜಿ.ಎಸ್. ಸೇರಿದಂತೆ ವಿವಿಧ ಮಠಾಧೀಶರು ಅಂತಿಮ ನಮನ ಸಲ್ಲಿಸಿದರು.</p>.<p>ಯೋಧನ ಸ್ವಗ್ರಾಮ ತಿಮ್ಮಾಪೂರದಲ್ಲಿ ಸರತಿಯಲ್ಲಿ ನಿಂತು ಜನರ ಅಂತಿಮ ದರ್ಶನ ಪಡೆದರು.ಬಿಎಸ್ಎಫ್ ಯೋಧರು ಸಕಲ ಸರ್ಕಾರಿ ಗೌರವ ಸಲ್ಲಿಸಿದರು. ವೀರಶೈವ ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಈ ವೇಳೆ ಪತ್ನಿ,ಪುತ್ರ, ಪುತ್ರಿ ಸೇರಿದಂತೆ ಕುಟುಂಬದವರು ಮತ್ತು ತಿಮ್ಮಾಪೂರ ಗ್ರಾಮಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಮಾಜಿ ಸಚಿವ ರುದ್ರಪ್ಪ ಲಮಾಣಿ, ಸಿಪಿಐ ನಾಗಮ್ಮಕೆ., ಪಿಎಸ್ಐ ಜಗದೀಶ ಜಿ., ಪಿಎಸ್ಐ ಮಹಾಂತೇಶ ಮಣ್ಣನವರ ಮೊದಲಾದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>