<p><strong>ಹೂವಿನಹಡಗಲಿ:</strong> ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕವನ್ನು ಬೆಸೆಯುವ ಗದಗ– ಹರಪನಹಳ್ಳಿ ರೈಲು ಮಾರ್ಗ ಮಂಜೂರು ಮಾಡಬೇಕು ಎಂದು ರೈಲ್ವೆ ಹೋರಾಟ ಸಮಿತಿ ಆಗ್ರಹಿಸಿದೆ.</p>.<p>ಹೋರಾಟ ಸಮಿತಿ ಸಂಚಾಲಕ ಎಸ್.ಎಸ್.ಪಾಟೀಲ್ ನೇತೃತ್ವದ ತಂಡ ಭಾನುವಾರ ಜಿಂದಾಲ್ ಅತಿಥಿ ಗೃಹದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿ, ಪ್ರಸಕ್ತ ಬಜೆಟ್ನಲ್ಲಿ ಈ ರೈಲ್ವೆ ಯೋಜನೆಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಉಪಸ್ಥಿತರಿದ್ದ ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಈ ರೈಲು ಮಾರ್ಗ ಕುರಿತು ಪ್ರಸ್ತಾಪಿಸಿದರು.</p>.<p>‘95 ಕಿ.ಮೀ. ಉದ್ದದ ಗದಗ– ಹರಪನಹಳ್ಳಿ ರೈಲು ಮಾರ್ಗವನ್ನು ಮುಂಡರಗಿ, ಹೂವಿನಹಡಗಲಿ ಮುಖಾಂತರ ಕೊಟ್ಟೂರು-ಹರಿಹರ ಮಾರ್ಗಕ್ಕೆ ಜೋಡಣೆ ಮಾಡುವುದರಿಂದ ಉತ್ತರ ಕರ್ನಾಟಕದಿಂದ ರಾಜಧಾನಿ ಬೆಂಗಳೂರಿಗೆ ನೇರ ಸಂಪರ್ಕ ಕಲ್ಪಿಸಬಹುದಾಗಿದೆ. ಈಗಿರುವ ರೈಲು ಮಾರ್ಗಗಳಿಗಿಂತ ಬೆಂಗಳೂರು 100 ಕಿ.ಮೀ. ಅಂತರ ಕಡಿಮೆ ಆಗುತ್ತದೆ. ಈ ಮಾರ್ಗ ಕೈಗೆತ್ತಿಕೊಳ್ಳುವುದರಿಂದ ಗದಗ, ವಿಜಯನಗರ ಜಿಲ್ಲೆಗಳ ಹೊಸ ಪ್ರದೇಶಗಳಿಗೆ ರೈಲ್ವೆ ಸೌಲಭ್ಯ ದೊರಕುತ್ತದೆ. ಈ ಭಾಗದ ಕೃಷಿ, ಕೈಗಾರಿಕೆ, ಶೈಕ್ಷಣಿಕ, ವಾಣಿಜ್ಯ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರೇಕ್ಷಣೀಯ ಸ್ಥಳಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲು, ಮೈಲಾರಲಿಂಗೇಶ್ವರ ಸುಕ್ಷೇತ್ರಗಳಿಗೆ ಬರುವ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ಎಸ್.ಎಸ್.ಪಾಟೀಲ್ ಮನವರಿಕೆ ಮಾಡಿಕೊಟ್ಟರು.</p>.<p>ಸಚಿವ ಸೋಮಣ್ಣ ಪ್ರತಿಕ್ರಿಯಿಸಿ, ‘ಈ ಮಾರ್ಗದ ಪ್ರಸ್ತಾವ ಗಮನದಲ್ಲಿದೆ. ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಆಶಯದಂತೆ ಈ ಯೋಜನೆಗೆ ಮಂಜೂರಾತಿ ಕೊಡಿಸಲು ಪ್ರಯತ್ನಿಸುವೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ:</strong> ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕವನ್ನು ಬೆಸೆಯುವ ಗದಗ– ಹರಪನಹಳ್ಳಿ ರೈಲು ಮಾರ್ಗ ಮಂಜೂರು ಮಾಡಬೇಕು ಎಂದು ರೈಲ್ವೆ ಹೋರಾಟ ಸಮಿತಿ ಆಗ್ರಹಿಸಿದೆ.</p>.<p>ಹೋರಾಟ ಸಮಿತಿ ಸಂಚಾಲಕ ಎಸ್.ಎಸ್.ಪಾಟೀಲ್ ನೇತೃತ್ವದ ತಂಡ ಭಾನುವಾರ ಜಿಂದಾಲ್ ಅತಿಥಿ ಗೃಹದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಮನವಿ ಸಲ್ಲಿಸಿ, ಪ್ರಸಕ್ತ ಬಜೆಟ್ನಲ್ಲಿ ಈ ರೈಲ್ವೆ ಯೋಜನೆಯನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಉಪಸ್ಥಿತರಿದ್ದ ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಈ ರೈಲು ಮಾರ್ಗ ಕುರಿತು ಪ್ರಸ್ತಾಪಿಸಿದರು.</p>.<p>‘95 ಕಿ.ಮೀ. ಉದ್ದದ ಗದಗ– ಹರಪನಹಳ್ಳಿ ರೈಲು ಮಾರ್ಗವನ್ನು ಮುಂಡರಗಿ, ಹೂವಿನಹಡಗಲಿ ಮುಖಾಂತರ ಕೊಟ್ಟೂರು-ಹರಿಹರ ಮಾರ್ಗಕ್ಕೆ ಜೋಡಣೆ ಮಾಡುವುದರಿಂದ ಉತ್ತರ ಕರ್ನಾಟಕದಿಂದ ರಾಜಧಾನಿ ಬೆಂಗಳೂರಿಗೆ ನೇರ ಸಂಪರ್ಕ ಕಲ್ಪಿಸಬಹುದಾಗಿದೆ. ಈಗಿರುವ ರೈಲು ಮಾರ್ಗಗಳಿಗಿಂತ ಬೆಂಗಳೂರು 100 ಕಿ.ಮೀ. ಅಂತರ ಕಡಿಮೆ ಆಗುತ್ತದೆ. ಈ ಮಾರ್ಗ ಕೈಗೆತ್ತಿಕೊಳ್ಳುವುದರಿಂದ ಗದಗ, ವಿಜಯನಗರ ಜಿಲ್ಲೆಗಳ ಹೊಸ ಪ್ರದೇಶಗಳಿಗೆ ರೈಲ್ವೆ ಸೌಲಭ್ಯ ದೊರಕುತ್ತದೆ. ಈ ಭಾಗದ ಕೃಷಿ, ಕೈಗಾರಿಕೆ, ಶೈಕ್ಷಣಿಕ, ವಾಣಿಜ್ಯ ಅಭಿವೃದ್ಧಿಗೆ ಪೂರಕವಾಗಲಿದೆ. ಪ್ರೇಕ್ಷಣೀಯ ಸ್ಥಳಗಳಾದ ಬಾದಾಮಿ, ಐಹೊಳೆ, ಪಟ್ಟದಕಲ್ಲು, ಮೈಲಾರಲಿಂಗೇಶ್ವರ ಸುಕ್ಷೇತ್ರಗಳಿಗೆ ಬರುವ ಪ್ರವಾಸಿಗರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ಎಸ್.ಎಸ್.ಪಾಟೀಲ್ ಮನವರಿಕೆ ಮಾಡಿಕೊಟ್ಟರು.</p>.<p>ಸಚಿವ ಸೋಮಣ್ಣ ಪ್ರತಿಕ್ರಿಯಿಸಿ, ‘ಈ ಮಾರ್ಗದ ಪ್ರಸ್ತಾವ ಗಮನದಲ್ಲಿದೆ. ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಆಶಯದಂತೆ ಈ ಯೋಜನೆಗೆ ಮಂಜೂರಾತಿ ಕೊಡಿಸಲು ಪ್ರಯತ್ನಿಸುವೆ’ ಎಂದು ಭರವಸೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>