ಬ್ಯಾಡಗಿ: ತಾಲ್ಲೂಕಿನ ಕಲ್ಲೆದೇವರು ಛತ್ರ ಗ್ರಾಮದ ಕಾಲುದಾರಿಯಲ್ಲಿ ಜೂಜಾಡುತ್ತಿದ್ದ ಐವರನ್ನು ಜ. 16ರಂದು ಸಂಜೆ ಬಂಧಿಸಲಾಗಿದೆ.
ಖಚಿತ ಮಾಹಿತಿ ಆಧರಿಸಿ ಪಿಎಸ್ಐ ಮಂಜುನಾಥ ಕುಪ್ಪೇಲೂರ ನೇತೃತ್ವದ ತಂಡ ದಾಳಿ ನಡೆಸಿತು. ಈ ವೇಳೆ ಆರೋಪಿಗಳಿಂದ ₹ 10,600 ನಗದು ಹಾಗೂ ಜೂಜಾಟಕ್ಕೆ ಬಳಸಿದ್ದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.