ಸಾಹಿತಿ ಸತೀಶ ಕುಲಕರ್ಣಿ ಮತ್ತು ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ ಮಾತನಾಡಿದರು.ಗಾನಲಹರಿ ಕಲಾ ಸಂಸ್ಥೆಯ ಕಾರ್ಯದರ್ಶಿ ವೀರನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಎಚ್. ಮಂಜುನಾಥಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆ ಆಶ್ರಯ ಕಮಿಟಿ ಸದಸ್ಯೆ ಲಲಿತಾ ಗುಂಡೇನಹಳ್ಳಿ, ನಗರಸಭೆ ಸದಸ್ಯ ಗಿರೀಶ ತುಪ್ಪದ, ರೈತ ಸೇನಾ ಕರ್ನಾಟಕ ಜಿಲ್ಲಾ ಘಟಕದ ಅಧ್ಯಕ್ಷ ವರುಣಗೌಡ ಪಾಟೀಲ, ಬಸವರಾಜ ಕುರಗೋಡಿ ಇದ್ದರು.