ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ ಮಾತನಾಡಿ, ಬ್ರಿಟಿಷರಿಗೆ ಕ್ಷಮಾಪಣೆ ಪತ್ರ ಬರೆದ ಸಂತತಿಗಳಿಂದ ಪಠ್ಯ ಪುಸ್ತಕ ಪರಿಷ್ಕರಣೆ ಒಪ್ಪುವುದಿಲ್ಲ. ದೇಶಕ್ಕಾಗಿ ಶ್ರಮಿಸಿದ, ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರ ಸಂತತಿಗಳು ನಾವು. ಗಾಂಧಿ, ಭಗತ್ ಸಿಂಗ್, ಅಂಬೇಡ್ಕರ್, ಕುವೆಂಪು, ಮೈಲಾರ ಮಹದೇವಪ್ಪ ಸೇರಿದಂತೆ ಅನೇಕರ ವಿಚಾರಗಳು, ಚಿಂತನೆಗಳು ನಮಗೆ ಆದರ್ಶವಾಗಿವೆ ಎಂದರು.