ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಮೆರವಣಿಗೆಯನ್ನು ಹೊರಡಿಸುವಂತಿಲ್ಲ. ಪಾರಂಪರಿಕ ಗಣೇಶ ಮೂರ್ತಿ ಹಾಗೂ ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವುದು, ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು. ಸರ್ಕಾರಿ ಹಾಗೂ ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತೀ ಕನಿಷ್ಠ ಜನಸಂಖ್ಯೆಯೊಂದಿಗೆ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಜಿಲ್ಲಾಡಳಿತ, ಹತ್ತಿರದ ಸ್ಥಳೀಯ ಸಂಸ್ಥೆಗಳ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ, ಮೊಬೈಲ್ ಟ್ಯಾಂಕ್ಗಳಲ್ಲಿ, ಕೃತಕ ವಿಸರ್ಜನಾ ಟ್ಯಾಂಕರ್ಗಳಲ್ಲಿ ವಿಸರ್ಜಿಸಬೇಕು.