ಎರಡು ವರ್ಷಗಳಿಂದ ಕೋವಿಡ್-19 ಸೋಂಕಿನಿಂದ ಉಂಟಾಗಿರುವ ತೊಂದರೆಗಳು ನಮಗೆಲ್ಲ ಬದುಕಿನ ಪಾಠ ಕಲಿಸಿವೆ. ಕಾರ್ಮಿಕ ಸಂಘಟನೆಯವರು, ಅಧಿಕಾರಿ ವರ್ಗ ಸೇರಿದಂತೆ ಪ್ರತಿಯೊಬ್ಬರೂ ತಮ್ಮ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನ್ಯಾಯೋಚಿತವಾಗಿ ನಿರ್ವಹಿಸಬೇಕು. ಮನುಕುಲದ ಒಳಿತಿಗಾಗಿ ಶ್ರಮಿಸಬೇಕು. ಜನಸ್ನೇಹಿ ವಾತಾವರಣ ನಿರ್ಮಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.