<p><strong>ಹಾವೇರಿ: </strong>ಪ್ರಸಕ್ತ ಮುಂಗಾರು ಹಂಗಾಮಿಗೆ ಹಾವೇರಿ ಜಿಲ್ಲೆಗೆ ಅಗತ್ಯವಾಗಿರುವ 6,000 ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿಸಚಿವ ಬಸವರಾಜ ಬೊಮ್ಮಾಯಿ ಅವರು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಮನವಿ ಮಾಡಿದ್ದಾರೆ.</p>.<p>ಹಾವೇರಿ ಕೃಷಿ ಪ್ರಧಾನ ಜಿಲ್ಲೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂಗಾರು ಹಂಗಾಮಿನಲ್ಲಿ ಹಾವೇರಿಗೆ ಈ ಬಾರಿ ಕೇವಲ 2,635 ಮೆಟ್ರಿಕ್ ಟನ್ ಡಿಎಪಿ ಗೊಬ್ಬರ ಹಂಚಿಕೆ ಆಗಿರುತ್ತದೆ. ಬಿತ್ತನೆ ಸಮಯದಲ್ಲಿ ಡಿಎಪಿ ರಸಗೊಬ್ಬರದ ಅವಶ್ಯಕತೆ ಹೆಚ್ಚಾಗಿರುತ್ತದೆ. ಹೀಗಾಗಿ ಜಿಲ್ಲೆಗೆ 40 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.</p>.<p>ನ್ಯಾಷನಲ್ ಫರ್ಟಿಲೈಜರ್ ಸಂಸ್ಥೆಯು ಹೊರದೇಶದಿಂದ ಗುಜರಾತಿನ ಬಿಫಾವ ಬಂದರು ಮೂಲಕ 40,000 ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಆಮದು ಮಾಡಿಕೊಂಡಿದೆ. ಇದರಲ್ಲಿ ಹಾವೇರಿ ಜಿಲ್ಲೆಗೆ 6000 ಮೆಟ್ರಿಕ್ ಟನ್ ಗೊಬ್ಬರ ಹಂಚಿಕೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಬೊಮ್ಮಾಯಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಪ್ರಸಕ್ತ ಮುಂಗಾರು ಹಂಗಾಮಿಗೆ ಹಾವೇರಿ ಜಿಲ್ಲೆಗೆ ಅಗತ್ಯವಾಗಿರುವ 6,000 ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿಸಚಿವ ಬಸವರಾಜ ಬೊಮ್ಮಾಯಿ ಅವರು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ಅವರಿಗೆ ಮನವಿ ಮಾಡಿದ್ದಾರೆ.</p>.<p>ಹಾವೇರಿ ಕೃಷಿ ಪ್ರಧಾನ ಜಿಲ್ಲೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಮುಂಗಾರು ಹಂಗಾಮಿನಲ್ಲಿ ಹಾವೇರಿಗೆ ಈ ಬಾರಿ ಕೇವಲ 2,635 ಮೆಟ್ರಿಕ್ ಟನ್ ಡಿಎಪಿ ಗೊಬ್ಬರ ಹಂಚಿಕೆ ಆಗಿರುತ್ತದೆ. ಬಿತ್ತನೆ ಸಮಯದಲ್ಲಿ ಡಿಎಪಿ ರಸಗೊಬ್ಬರದ ಅವಶ್ಯಕತೆ ಹೆಚ್ಚಾಗಿರುತ್ತದೆ. ಹೀಗಾಗಿ ಜಿಲ್ಲೆಗೆ 40 ಸಾವಿರ ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.</p>.<p>ನ್ಯಾಷನಲ್ ಫರ್ಟಿಲೈಜರ್ ಸಂಸ್ಥೆಯು ಹೊರದೇಶದಿಂದ ಗುಜರಾತಿನ ಬಿಫಾವ ಬಂದರು ಮೂಲಕ 40,000 ಮೆಟ್ರಿಕ್ ಟನ್ ಡಿಎಪಿ ರಸಗೊಬ್ಬರವನ್ನು ಆಮದು ಮಾಡಿಕೊಂಡಿದೆ. ಇದರಲ್ಲಿ ಹಾವೇರಿ ಜಿಲ್ಲೆಗೆ 6000 ಮೆಟ್ರಿಕ್ ಟನ್ ಗೊಬ್ಬರ ಹಂಚಿಕೆ ಮಾಡುವಂತೆ ನಿರ್ದೇಶನ ನೀಡಬೇಕೆಂದು ಬೊಮ್ಮಾಯಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>