<p><strong>ಹಾವೇರಿ: </strong>ಆರೋಗ್ಯ ಸಮಸ್ಯೆಗಳಿಗೆ ಹೆಚ್ಚು ಹಣ ಖರ್ಚು ಮಾಡುವವರು ಗ್ರಾಮೀಣ ಪ್ರದೇಶದ ಬಡ ವರ್ಗದವರು. ಹಾಗಾಗಿ ಸರ್ಕಾರದ ಪ್ರತಿಯೊಂದು ಆರೋಗ್ಯ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶ ಜನತೆಗೆ ತಲುಪಿಸಬೇಕು ಎಂದು ಜಿಲ್ಲಾ ಪಂಚಾಯಿತಿಸಿಇಒ ರಮೇಶ ದೇಸಾಯಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಶ್ರವಣ ದಿನಾಚರಣೆ ಹಾಗೂ ಶ್ರವಣ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾನು ಜಿಲ್ಲೆಯ ಕೆಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಹಲವು ದೂರುಗಳನ್ನು ಹೇಳುತ್ತಾರೆ. ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ, ಔಷಧಗಳನ್ನು ಹೊರಗಡೆ ಬರೆದು ಕೊಡುತ್ತಾರೆ ಹಾಗೂ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಕುರಿತಂತೆ ದೂರುಗಳು ಕೇಳಿಬರುತ್ತವೆ. ಈ ರೀತಿಯ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಲ್ಪಿಸಬೇಕು ಎಂದರು.</p>.<p>ಬ್ಯಾಡಗಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಪುಟ್ಟರಾಜ ‘ವಿಶ್ವ ಶ್ರವಣ ದಿನ’ ಕುರಿತು ಮಾತನಾಡಿ, ಪ್ರಪಂಚದಲ್ಲಿ 466 ಮಿಲಿಯನ್ ಹಾಗೂ ದೇಶದಲ್ಲಿ 63 ಜನರು ಕಿವಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.</p>.<p><strong>ಕಾಯಕಲ್ಪ ಪ್ರಶಸ್ತಿ ಪ್ರದಾನ</strong></p>.<p>ಸಮಾರಂಭದಲ್ಲಿ ಆಸ್ಪತ್ರೆಗಳ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಉತ್ತಮ ಸೇವೆ ಒಳಗೊಂಡಂತೆ ಆರು ಅಂಶಗಳ ನಿರ್ವಹಣೆಯಲ್ಲಿ ಕಾಯಕಲ್ಪ ಪ್ರಶಸ್ತಿ ಪಡೆದ ಆಸ್ಪತ್ರೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ರಾಜ್ಯ ಮಟ್ಟದಲ್ಲಿ ಸಮಾಧಾನಕರ ಬಹುಮಾನ ಪಡೆದ ಬ್ಯಾಡಗಿ ತಾಲ್ಲೂಕು ಆಸ್ಪತ್ರೆಗೆ ₹1 ಲಕ್ಷ, ರಾಜ್ಯ ಮಟ್ಟದಲ್ಲಿ ‘ಸ್ವಚ್ಛ ರತ್ನ’ ಪ್ರಶಸ್ತಿಗೆ ಬಾಜನವಾದ ಬಂಕಾಪೂರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಕ್ಕಿಆಲೂರ ಸಮುದಾಯ ಆರೋಗ್ಯ ಕೇಂದ್ರ ತಲಾ ₹1 ಲಕ್ಷ, ಜಿಲ್ಲಾ ಮಟ್ಟದ ಅತ್ಯುತ್ತಮ ಆರೋಗ್ಯ ಕೇಂದ್ರ ಪ್ರಶಸ್ತಿಯನ್ನು ಪಡೆದ ಕಬ್ಬೂರ, ಕದರಮಂಡಲಗಿ, ಕಾಟೇನಹಳ್ಳಿ, ಹಾವನೂರು, ತಡಕನಹಳ್ಳಿ, ಕೋಡ ಹಾಗೂ ಶಂಕ್ರಿಪುರ ಆರೋಗ್ಯ ಕೇಂದ್ರಗಳಿಗೆ ಪ್ರಶಸ್ತಿ ವಿತರಿಸಲಾಯಿತು.<br /><br />ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಕುಶಾಲ್, ಡಾ.ಜಗದೀಶ ಪಾಟೀಲ, ಡಾ.ನೀಲೇಶ. ಡಾ.ವಿರಕ್ತಮಠ ಉಪಸ್ಥಿತರಿದ್ದರು. ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯರಾಜ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಆರೋಗ್ಯ ಸಮಸ್ಯೆಗಳಿಗೆ ಹೆಚ್ಚು ಹಣ ಖರ್ಚು ಮಾಡುವವರು ಗ್ರಾಮೀಣ ಪ್ರದೇಶದ ಬಡ ವರ್ಗದವರು. ಹಾಗಾಗಿ ಸರ್ಕಾರದ ಪ್ರತಿಯೊಂದು ಆರೋಗ್ಯ ಸೌಲಭ್ಯಗಳನ್ನು ಗ್ರಾಮೀಣ ಪ್ರದೇಶ ಜನತೆಗೆ ತಲುಪಿಸಬೇಕು ಎಂದು ಜಿಲ್ಲಾ ಪಂಚಾಯಿತಿಸಿಇಒ ರಮೇಶ ದೇಸಾಯಿ ಹೇಳಿದರು.</p>.<p>ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಶ್ರವಣ ದಿನಾಚರಣೆ ಹಾಗೂ ಶ್ರವಣ ಜಾಗೃತಿ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ನಾನು ಜಿಲ್ಲೆಯ ಕೆಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಹಲವು ದೂರುಗಳನ್ನು ಹೇಳುತ್ತಾರೆ. ವೈದ್ಯರು ಸಮಯಕ್ಕೆ ಸರಿಯಾಗಿ ಬರುವುದಿಲ್ಲ, ಔಷಧಗಳನ್ನು ಹೊರಗಡೆ ಬರೆದು ಕೊಡುತ್ತಾರೆ ಹಾಗೂ ಆಸ್ಪತ್ರೆಗಳಲ್ಲಿ ಮೂಲಸೌಕರ್ಯಗಳ ಕೊರತೆ ಕುರಿತಂತೆ ದೂರುಗಳು ಕೇಳಿಬರುತ್ತವೆ. ಈ ರೀತಿಯ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಕಲ್ಪಿಸಬೇಕು ಎಂದರು.</p>.<p>ಬ್ಯಾಡಗಿ ತಾಲ್ಲೂಕು ವೈದ್ಯಾಧಿಕಾರಿ ಡಾ.ಪುಟ್ಟರಾಜ ‘ವಿಶ್ವ ಶ್ರವಣ ದಿನ’ ಕುರಿತು ಮಾತನಾಡಿ, ಪ್ರಪಂಚದಲ್ಲಿ 466 ಮಿಲಿಯನ್ ಹಾಗೂ ದೇಶದಲ್ಲಿ 63 ಜನರು ಕಿವಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಹೇಳಿದರು.</p>.<p><strong>ಕಾಯಕಲ್ಪ ಪ್ರಶಸ್ತಿ ಪ್ರದಾನ</strong></p>.<p>ಸಮಾರಂಭದಲ್ಲಿ ಆಸ್ಪತ್ರೆಗಳ ಸ್ವಚ್ಛತೆ, ತ್ಯಾಜ್ಯ ನಿರ್ವಹಣೆ, ಉತ್ತಮ ಸೇವೆ ಒಳಗೊಂಡಂತೆ ಆರು ಅಂಶಗಳ ನಿರ್ವಹಣೆಯಲ್ಲಿ ಕಾಯಕಲ್ಪ ಪ್ರಶಸ್ತಿ ಪಡೆದ ಆಸ್ಪತ್ರೆಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<p>ರಾಜ್ಯ ಮಟ್ಟದಲ್ಲಿ ಸಮಾಧಾನಕರ ಬಹುಮಾನ ಪಡೆದ ಬ್ಯಾಡಗಿ ತಾಲ್ಲೂಕು ಆಸ್ಪತ್ರೆಗೆ ₹1 ಲಕ್ಷ, ರಾಜ್ಯ ಮಟ್ಟದಲ್ಲಿ ‘ಸ್ವಚ್ಛ ರತ್ನ’ ಪ್ರಶಸ್ತಿಗೆ ಬಾಜನವಾದ ಬಂಕಾಪೂರ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಅಕ್ಕಿಆಲೂರ ಸಮುದಾಯ ಆರೋಗ್ಯ ಕೇಂದ್ರ ತಲಾ ₹1 ಲಕ್ಷ, ಜಿಲ್ಲಾ ಮಟ್ಟದ ಅತ್ಯುತ್ತಮ ಆರೋಗ್ಯ ಕೇಂದ್ರ ಪ್ರಶಸ್ತಿಯನ್ನು ಪಡೆದ ಕಬ್ಬೂರ, ಕದರಮಂಡಲಗಿ, ಕಾಟೇನಹಳ್ಳಿ, ಹಾವನೂರು, ತಡಕನಹಳ್ಳಿ, ಕೋಡ ಹಾಗೂ ಶಂಕ್ರಿಪುರ ಆರೋಗ್ಯ ಕೇಂದ್ರಗಳಿಗೆ ಪ್ರಶಸ್ತಿ ವಿತರಿಸಲಾಯಿತು.<br /><br />ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಂದ್ರ ದೊಡ್ಡಮನಿ, ಜಿಲ್ಲಾ ನೋಡಲ್ ಅಧಿಕಾರಿ ಡಾ.ಕುಶಾಲ್, ಡಾ.ಜಗದೀಶ ಪಾಟೀಲ, ಡಾ.ನೀಲೇಶ. ಡಾ.ವಿರಕ್ತಮಠ ಉಪಸ್ಥಿತರಿದ್ದರು. ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಜಯಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯರಾಜ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>