ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಮಯದಲ್ಲಿ ಗರ್ಭಿಣಿ, ಬಾಣಂತಿ ಮತ್ತು ಮಕ್ಕಳಿಗೆ ಆಹಾರ ಧಾನ್ಯಗಳನ್ನು ಮನೆ–ಮನೆಗೆ ತೆರಳಿ ವಿತರಿಸುವುದು, ಮಕ್ಕಳ ತೂಕ ತಪಾಸಣೆಗೆ ಅಂಗನವಾಡಿಗೆ ಕರೆತರುವುದು ಮುಂತಾದ ಕೆಲಸಗಳನ್ನು ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸಿದ್ದಾರೆ. ಆದರೆ, ಮಾಸ್ಕ್, ಸ್ಯಾನಿಟೈಸರ್ ಮುಂತಾದ ಸುರಕ್ಷತಾ ಸಾಧನಗಳನ್ನು ಒದಗಿಸದೆ ಅಧಿಕಾರಿಗಳು ಜೀವದ ಜತೆ ಚೆಲ್ಲಾಟವಾಡಿದ್ದಾರೆ’ ಎಂದು ದೂರಿದರು.