<p><strong>ಹಿರೇಕೆರೂರ:</strong> ‘ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳನ್ನು ಹೆಚ್ಚಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.</p>.<p>ತಾಲ್ಲೂಕಿನ ಹಂಸಭಾವಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಹಾಗೂ ಗ್ರಾಮೀಣಾಭಿವೃದ್ಧಿ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ದತ್ತು ಸಮಿತಿ ವತಿಯಿಂದ ಈಚೆಗೆ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಿ ಹೋಗುವ ಸ್ಥಿತಿಗೆ ತಲುಪಿವೆ. ಸೌಹಾರ್ದ ಸಹಕಾರಿ ಸಂಘವು ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿ ಪಡಿಸುವ ಮುಂದಾಳತ್ವ ವಹಿಸಿರುವುದು ಶ್ಲಾಘನೀಯ’ ಎಂದರು.</p>.<p>ದತ್ತು ಸಮಿತಿ ಅಧ್ಯಕ್ಷ ಹೂವಪ್ಪ ರಾಗಿಕೊಪ್ಪ, ‘ಸಂಘವು ಸರ್ಕಾರಿ ಶಾಲೆ ದತ್ತು ಪಡೆದು ಗುಣಮಟ್ಟದ ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ಮುಂದಾಗಿದೆ’ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಮಡಿವಾಳರ, ಫಿಎಲ್ಡಿ ಬ್ಯಾಂಕ್ ನಿರ್ದೇಶಕ ಷಣ್ಮುಖಯ್ಯ ಮಳೆಮಠ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮೃತ್ಯುಂಜಯ ಬಾಸೂರ, ದತ್ತು ಸಮಿತಿ ನಿರ್ದೇಶಕ ಮೋಹನ್ ಗೌಡ ಪಾಟೀಲ, ಡಾ.ಶಿವಕುಮಾರ ಭರಮ್ಮಣ್ಣನವರ, ದೈಹಿಕ ಶಿಕ್ಷಣ ಪರೀವಿಕ್ಷಕ ಎಸ್.ಟಿ . ಲಮಾಣಿ, ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಕೆರೂರ:</strong> ‘ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳನ್ನು ಹೆಚ್ಚಿಸುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.</p>.<p>ತಾಲ್ಲೂಕಿನ ಹಂಸಭಾವಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆ ಹಾಗೂ ಗ್ರಾಮೀಣಾಭಿವೃದ್ಧಿ ವಿವಿಧೋದ್ದೇಶಗಳ ಸೌಹಾರ್ದ ಸಹಕಾರಿ ದತ್ತು ಸಮಿತಿ ವತಿಯಿಂದ ಈಚೆಗೆ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಖಾಸಗಿ ಶಾಲೆಗಳ ಹಾವಳಿಯಿಂದ ಸರ್ಕಾರಿ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚಿ ಹೋಗುವ ಸ್ಥಿತಿಗೆ ತಲುಪಿವೆ. ಸೌಹಾರ್ದ ಸಹಕಾರಿ ಸಂಘವು ಸರ್ಕಾರಿ ಶಾಲೆ ದತ್ತು ಪಡೆದು ಅಭಿವೃದ್ಧಿ ಪಡಿಸುವ ಮುಂದಾಳತ್ವ ವಹಿಸಿರುವುದು ಶ್ಲಾಘನೀಯ’ ಎಂದರು.</p>.<p>ದತ್ತು ಸಮಿತಿ ಅಧ್ಯಕ್ಷ ಹೂವಪ್ಪ ರಾಗಿಕೊಪ್ಪ, ‘ಸಂಘವು ಸರ್ಕಾರಿ ಶಾಲೆ ದತ್ತು ಪಡೆದು ಗುಣಮಟ್ಟದ ಶಿಕ್ಷಣ ಹಾಗೂ ಸಮಗ್ರ ಅಭಿವೃದ್ಧಿಗೆ ಮುಂದಾಗಿದೆ’ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಮಡಿವಾಳರ, ಫಿಎಲ್ಡಿ ಬ್ಯಾಂಕ್ ನಿರ್ದೇಶಕ ಷಣ್ಮುಖಯ್ಯ ಮಳೆಮಠ, ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮೃತ್ಯುಂಜಯ ಬಾಸೂರ, ದತ್ತು ಸಮಿತಿ ನಿರ್ದೇಶಕ ಮೋಹನ್ ಗೌಡ ಪಾಟೀಲ, ಡಾ.ಶಿವಕುಮಾರ ಭರಮ್ಮಣ್ಣನವರ, ದೈಹಿಕ ಶಿಕ್ಷಣ ಪರೀವಿಕ್ಷಕ ಎಸ್.ಟಿ . ಲಮಾಣಿ, ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>