<p><strong>ಬ್ಯಾಡಗಿ: </strong>ತಾಲ್ಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ಶನಿವಾರ ಜರುಗಿದ 6ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಿವಪ್ಪ ಕುಳೇನೂರ ಚಾಲನೆ ನೀಡಿದರು.</p>.<p>ಸಮ್ಮೇಳನದ ಅಧ್ಯಕ್ಷ ಪ್ರಕಾಶ ಮನ್ನಂಗಿ ದಂಪತಿಯ ನೇತೃತ್ವದಲ್ಲಿ ತಾಯಿ ಭುವನೇಶ್ವರಿಯ ಮೆರವಣಿಗೆ ನವೋದಯ ವಿದ್ಯಾಸಂಸ್ಥೆಯ ಆವರಣದಿಂದ ಆರಂಭಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು.</p>.<p>ದಾರಿಯುದ್ದಕ್ಕೂ ಸಾಂಸ್ಕೃತಿಕ ಹಿರಿಮೆಯನ್ನು ಸಾರುವ ಜಾನಪದ ಕಲಾ ತಂಡಗಳು ಕಲೆ ಪ್ರದರ್ಶಿಸಿದವು. ಶಾಲಾ ಕಾಲೇಜು ವಿದ್ಯಾರ್ಥಿಗಳು, ಕನ್ನಡ ಪರ ಸಂಘಟನೆಗಳು ಸಾಥ್ ನೀಡಿದವು.</p>.<p>ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಸ್ವಾತಂತ್ರ್ಯ ಹೋರಾಟಗಾರ ಮಹದೇವ ಬಣಕಾರ ವಂಶಸ್ಥರಾದ ಡಾ.ಎಚ್.ಎಸ್. ಮಹದೇವ ಉದ್ಘಾಟಿಸಿದರು.<br />ಬಳಿಕ ಮಾತನಾಡಿದ ಅವರು ಎಲ್ಲರಲ್ಲಿಯೂ ಕನ್ನಡದ ಅಭಿಮಾನ ಹೆಚ್ಚಬೇಕಿದೆ ಎಂದು ಹೇಳಿದರು.</p>.<p>ಸಾನ್ನಿಧ್ಯವನ್ನು ಗುಡ್ಡದ ಆನವೇರಿಯ ಶಿವಯೋಗಿ ಸ್ವಾಮೀಜಿ ವಹಿಸಿದ್ದರು. ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಬಸವರಾಜ ಶಿವಣ್ಣನವರ, ಕಾಂಗ್ರೆಸ್ ಮುಖಂಡ ಎಸ್.ಆರ್. ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ: </strong>ತಾಲ್ಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ಶನಿವಾರ ಜರುಗಿದ 6ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಿವಪ್ಪ ಕುಳೇನೂರ ಚಾಲನೆ ನೀಡಿದರು.</p>.<p>ಸಮ್ಮೇಳನದ ಅಧ್ಯಕ್ಷ ಪ್ರಕಾಶ ಮನ್ನಂಗಿ ದಂಪತಿಯ ನೇತೃತ್ವದಲ್ಲಿ ತಾಯಿ ಭುವನೇಶ್ವರಿಯ ಮೆರವಣಿಗೆ ನವೋದಯ ವಿದ್ಯಾಸಂಸ್ಥೆಯ ಆವರಣದಿಂದ ಆರಂಭಗೊಂಡು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿತು.</p>.<p>ದಾರಿಯುದ್ದಕ್ಕೂ ಸಾಂಸ್ಕೃತಿಕ ಹಿರಿಮೆಯನ್ನು ಸಾರುವ ಜಾನಪದ ಕಲಾ ತಂಡಗಳು ಕಲೆ ಪ್ರದರ್ಶಿಸಿದವು. ಶಾಲಾ ಕಾಲೇಜು ವಿದ್ಯಾರ್ಥಿಗಳು, ಕನ್ನಡ ಪರ ಸಂಘಟನೆಗಳು ಸಾಥ್ ನೀಡಿದವು.</p>.<p>ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಸ್ವಾತಂತ್ರ್ಯ ಹೋರಾಟಗಾರ ಮಹದೇವ ಬಣಕಾರ ವಂಶಸ್ಥರಾದ ಡಾ.ಎಚ್.ಎಸ್. ಮಹದೇವ ಉದ್ಘಾಟಿಸಿದರು.<br />ಬಳಿಕ ಮಾತನಾಡಿದ ಅವರು ಎಲ್ಲರಲ್ಲಿಯೂ ಕನ್ನಡದ ಅಭಿಮಾನ ಹೆಚ್ಚಬೇಕಿದೆ ಎಂದು ಹೇಳಿದರು.</p>.<p>ಸಾನ್ನಿಧ್ಯವನ್ನು ಗುಡ್ಡದ ಆನವೇರಿಯ ಶಿವಯೋಗಿ ಸ್ವಾಮೀಜಿ ವಹಿಸಿದ್ದರು. ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಬಸವರಾಜ ಶಿವಣ್ಣನವರ, ಕಾಂಗ್ರೆಸ್ ಮುಖಂಡ ಎಸ್.ಆರ್. ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>