ಮಳೆಗಾಲದ ಪ್ರಾರಂಭದಲ್ಲಿ ಹಾವೇರಿ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳ ಕಾಡಿನತ್ತ ಈ ಪಕ್ಷಿಗಳು ವಲಸೆ ಬರುತ್ತವೆ. ನಂತರ ಸೆಪ್ಟೆಂಬರ್-ಅಕ್ಟೋಬರ್ ಕೊನೆಯಲ್ಲಿ ತಮ್ಮ ಮೂಲಸ್ಥಾನಕ್ಕೆ ತೆರಳುತ್ತವೆ.ರಾಣೆಬೆನ್ನೂರು ಅರಣ್ಯ ಭಾಗದಲ್ಲಿ ಆಲ, ಅರಳಿ, ಪ್ಲಮ್, ಅತ್ತಿ, ಹುಣಸೆ, ಗಸಗಸಿಗಳು ಹೆಚ್ಚಾಗಿರುವುದರಿಂದ ಇತ್ತ ಕಡೆ ಅವು ವಲಸೆ ಬಂದಿವೆ.