<p><strong>ರಟ್ಟೀಹಳ್ಳಿ:</strong> ದೇವಸ್ಥಾನದ ವಿಚಾರವಾಗಿ ತಾಲ್ಲೂಕಿನ ಹಿರೇಯಡಚಿ-ಕ್ಯಾತನಕೇರಿ ಗ್ರಾಮಗಳ ಜನರ ನಡುವೆ ಗುರುವಾರ ಗುಂಪು ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ಹಾಗೂ ಹಲ್ಲೆಯಿಂದಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p>.<p>ಎರಡೂ ಗ್ರಾಮಗಳ ನಡುವಿನ ಗುಡ್ಡದ ಪ್ರದೇಶದಲ್ಲಿ ದುರ್ಗಮ್ಮ ದೇವಸ್ಥಾನವಿದೆ. ಇದು ತಮ್ಮೂರಿನ ದೇವಸ್ಥಾನವೆಂದು ಹಿರೇಯಡಚಿ ಗ್ರಾಮಸ್ಥರು, ದೇವಸ್ಥಾನ ನಿರ್ಮಾಣಕ್ಕೆ ಮುಂದಾಗಿದ್ದರು.</p>.<p>ಅದಕ್ಕೆ ವಿರೋಧ ವ್ಯಕ್ತಪಡಿಸಿದ ಕ್ಯಾತನಕೇರಿ ಗ್ರಾಮಸ್ಥರು, ದೇವಸ್ಥಾನ ತಮ್ಮೂರಿನದ್ದು ಎಂದು ಹೇಳಿ ಗಲಾಟೆ ಮಾಡಿದೆ.</p>.<p>ಗುಡ್ಡದ ಒಂದು ಬದಿಯಿಂದ ಹಿರೇಯಡಚಿ ಹಾಗೂ ಇನ್ನೊಂದು ಬದಿಯಿಂದ ಕ್ಯಾತನಕೇರಿ ಗ್ರಾಮಸ್ಥರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಗುಡ್ಡದ ಜಾಗದಲ್ಲಿ ನಿಲ್ಲಿಸಿದ್ದ 25ಕ್ಕೂ ಹೆಚ್ಚು ಬೈಕ್ಗಳನ್ನು ಜಖಂಗೊಳಿಸಿದ್ದಾರೆ. ಗಲಾಟೆಯ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.</p>.<p>ಮಾಹಿತಿ ತಿಳಿದ ಹಿರೇಕೆರೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆಗೆ ಕಾರಣ ಎನ್ನಲಾದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.</p>.<p>‘ದೇವಸ್ಥಾನ ವಿಚಾರವಾಗಿ ಎರಡೂ ಗ್ರಾಮಗಳ ನಡುವೆ ಹಲವು ವರ್ಷಗಳಿಂದ ಜಗಳವಿದೆ. ಇದೇ ಜಗಳ ಗುರುವಾರ ವಿಕೋಪಕ್ಕೆ ಹೋಗಿ, ದೊಡ್ಡ ಗಲಾಟೆ ಆಗಿದೆ. ಒಬ್ಬರನ್ನೊಬ್ಬರು ಬೆನ್ನಟ್ಟಿ ಹೋಗಿ ಹಲ್ಲೆ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಟ್ಟೀಹಳ್ಳಿ:</strong> ದೇವಸ್ಥಾನದ ವಿಚಾರವಾಗಿ ತಾಲ್ಲೂಕಿನ ಹಿರೇಯಡಚಿ-ಕ್ಯಾತನಕೇರಿ ಗ್ರಾಮಗಳ ಜನರ ನಡುವೆ ಗುರುವಾರ ಗುಂಪು ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ಹಾಗೂ ಹಲ್ಲೆಯಿಂದಾಗಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p>.<p>ಎರಡೂ ಗ್ರಾಮಗಳ ನಡುವಿನ ಗುಡ್ಡದ ಪ್ರದೇಶದಲ್ಲಿ ದುರ್ಗಮ್ಮ ದೇವಸ್ಥಾನವಿದೆ. ಇದು ತಮ್ಮೂರಿನ ದೇವಸ್ಥಾನವೆಂದು ಹಿರೇಯಡಚಿ ಗ್ರಾಮಸ್ಥರು, ದೇವಸ್ಥಾನ ನಿರ್ಮಾಣಕ್ಕೆ ಮುಂದಾಗಿದ್ದರು.</p>.<p>ಅದಕ್ಕೆ ವಿರೋಧ ವ್ಯಕ್ತಪಡಿಸಿದ ಕ್ಯಾತನಕೇರಿ ಗ್ರಾಮಸ್ಥರು, ದೇವಸ್ಥಾನ ತಮ್ಮೂರಿನದ್ದು ಎಂದು ಹೇಳಿ ಗಲಾಟೆ ಮಾಡಿದೆ.</p>.<p>ಗುಡ್ಡದ ಒಂದು ಬದಿಯಿಂದ ಹಿರೇಯಡಚಿ ಹಾಗೂ ಇನ್ನೊಂದು ಬದಿಯಿಂದ ಕ್ಯಾತನಕೇರಿ ಗ್ರಾಮಸ್ಥರು ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ. ಗುಡ್ಡದ ಜಾಗದಲ್ಲಿ ನಿಲ್ಲಿಸಿದ್ದ 25ಕ್ಕೂ ಹೆಚ್ಚು ಬೈಕ್ಗಳನ್ನು ಜಖಂಗೊಳಿಸಿದ್ದಾರೆ. ಗಲಾಟೆಯ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.</p>.<p>ಮಾಹಿತಿ ತಿಳಿದ ಹಿರೇಕೆರೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಲಾಟೆಗೆ ಕಾರಣ ಎನ್ನಲಾದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.</p>.<p>‘ದೇವಸ್ಥಾನ ವಿಚಾರವಾಗಿ ಎರಡೂ ಗ್ರಾಮಗಳ ನಡುವೆ ಹಲವು ವರ್ಷಗಳಿಂದ ಜಗಳವಿದೆ. ಇದೇ ಜಗಳ ಗುರುವಾರ ವಿಕೋಪಕ್ಕೆ ಹೋಗಿ, ದೊಡ್ಡ ಗಲಾಟೆ ಆಗಿದೆ. ಒಬ್ಬರನ್ನೊಬ್ಬರು ಬೆನ್ನಟ್ಟಿ ಹೋಗಿ ಹಲ್ಲೆ ಮಾಡಿದ್ದಾರೆ. ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು, ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>