ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಜುಲೈ 7ರಂದು ಬೆಳಿಗ್ಗೆ 7.30ಕ್ಕೆ ಷಷ್ಠಿಪೂರ್ತಿ ಪೂಜಾ ಕಾರ್ಯಕ್ರಮ, ಬೆಳಿಗ್ಗೆ 10.30ಕ್ಕೆ ಧನ್ಯೋಸ್ಮಿ ಗ್ರಂಥ ಬಿಡುಗಡೆ ಮತ್ತು ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೊಣವಿನಕೆರೆಯ ಕಾಡಸಿದ್ಧೇಶ್ವರಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ವಹಿಸಲಿದ್ದಾರೆ. ಸಿಂದಗಿ ಮಠದಲ್ಲಿ ಧಾರ್ಮಿಕ ಅಧ್ಯಯನ ಮಾಡಿದ 60 ವರ್ಷ ಮೇಲ್ಪಟ್ಟ ಹಿರಿಯರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭ ‘ಭಕ್ತಿಯ ಕುಸುಮಾಂಜಲಿ’ ಧ್ವನಿಸುರುಳಿ ಬಿಡುಗಡೆಯಾಗಲಿದೆ ಎಂದು ಹೇಳಿದರು.