<p><strong>ಹಾನಗಲ್: ‘</strong>ಬೆಂಗಳೂರಿನಲ್ಲಿ ಬುಧವಾರ ಕಾಲ್ತುಳಿತಕ್ಕೆ 11 ಕ್ರೀಡಾಭಿಮಾನಿಗಳು ಸಾವಿಗೀಡಾಗಿ, ಹಲವರು ಗಾಯಗೊಂಡ ದುರಂತದ ಘಟನೆಗೆ ರಾಜ್ಯ ಸರ್ಕಾರದ ನಿರ್ಲಕ್ಷವೇ ಪ್ರಮುಖ ಕಾರಣ’ ಎಂದು ಬಿಜೆಪಿ ಹಾವೇರಿ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜಶೇಖರ ಕಟ್ಟೆಗೌಡ್ರ ಆಪಾದಿಸಿದ್ದಾರೆ.</p>.<p>ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಭ್ರಮದ ಸಮಯದಲ್ಲಿ ರಾಜ್ಯದಲ್ಲಿ ಸೂತಕ ಆವರಿಸಿದೆ. ಕ್ರೀಡಾಭಿಮಾನಿಗಳ ಸಾವು, ನೋವು ಕಳವಳಕಾರಿ. ದುರಂತದ ಹೊಣೆ ಹೊತ್ತು ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಜನದಟ್ಟಣೆಗೆ ತಕ್ಕಂತೆ ಸ್ಥಳಾವಕಾಶ, ಸೂಕ್ತ ನಿರ್ವಹಣೆ, ಪೊಲೀಸ್ ಭದ್ರತೆ ಮತ್ತು ತುರ್ತು ಸೇವೆಗಳ ನಿಯೋಜನೆಗೆ ನಿರ್ಲಕ್ಷ್ಯ ವಹಿಸಲಾಗಿದೆ. ಪ್ರಚಾರದ ಗೀಳಿಗೆ ಬಿದ್ದ ರಾಜ್ಯ ಸರ್ಕಾರ ಅಮಾಯಕ ಕ್ರೀಡಾ ಪ್ರೇಮಿಗಳ ದುರ್ಮರಣಕ್ಕೆ ಕಾರಣವಾಗಿದೆ ಎಂದು ಕಟ್ಟೆಗೌಡ್ರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್: ‘</strong>ಬೆಂಗಳೂರಿನಲ್ಲಿ ಬುಧವಾರ ಕಾಲ್ತುಳಿತಕ್ಕೆ 11 ಕ್ರೀಡಾಭಿಮಾನಿಗಳು ಸಾವಿಗೀಡಾಗಿ, ಹಲವರು ಗಾಯಗೊಂಡ ದುರಂತದ ಘಟನೆಗೆ ರಾಜ್ಯ ಸರ್ಕಾರದ ನಿರ್ಲಕ್ಷವೇ ಪ್ರಮುಖ ಕಾರಣ’ ಎಂದು ಬಿಜೆಪಿ ಹಾವೇರಿ ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜಶೇಖರ ಕಟ್ಟೆಗೌಡ್ರ ಆಪಾದಿಸಿದ್ದಾರೆ.</p>.<p>ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಂಭ್ರಮದ ಸಮಯದಲ್ಲಿ ರಾಜ್ಯದಲ್ಲಿ ಸೂತಕ ಆವರಿಸಿದೆ. ಕ್ರೀಡಾಭಿಮಾನಿಗಳ ಸಾವು, ನೋವು ಕಳವಳಕಾರಿ. ದುರಂತದ ಹೊಣೆ ಹೊತ್ತು ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಜನದಟ್ಟಣೆಗೆ ತಕ್ಕಂತೆ ಸ್ಥಳಾವಕಾಶ, ಸೂಕ್ತ ನಿರ್ವಹಣೆ, ಪೊಲೀಸ್ ಭದ್ರತೆ ಮತ್ತು ತುರ್ತು ಸೇವೆಗಳ ನಿಯೋಜನೆಗೆ ನಿರ್ಲಕ್ಷ್ಯ ವಹಿಸಲಾಗಿದೆ. ಪ್ರಚಾರದ ಗೀಳಿಗೆ ಬಿದ್ದ ರಾಜ್ಯ ಸರ್ಕಾರ ಅಮಾಯಕ ಕ್ರೀಡಾ ಪ್ರೇಮಿಗಳ ದುರ್ಮರಣಕ್ಕೆ ಕಾರಣವಾಗಿದೆ ಎಂದು ಕಟ್ಟೆಗೌಡ್ರ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>