<p><strong>ಹಾನಗಲ್:</strong> ಭೂತಪ್ಪ ದೇವಸ್ಥಾನದಲ್ಲಿ ಈ ವರ್ಷದಿಂದ ಜಾತ್ರೆ ಆರಂಭಗೊಂಡಿರುವುದು ಈ ಭಾಗದಲ್ಲಿ ಧಾರ್ಮಿಕ ವಾತಾವರಣ ಮೇಳೈಸಲು ಕಾರಣವಾಗಿದೆ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ನಾಲ್ಕರ್ ಕ್ರಾಸ್ ಸಮೀಪದ ಭೂತೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೆ ನಿಮಿತ್ತ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕೆಲವು ವರ್ಷಗಳ ಹಿಂದೆ ಬೃಹತ್ ಮರದ ಅಡಿಯಲ್ಲಿ ದೈವಾರಾಧನೆ ನಡೆಯುತ್ತಿದ್ದ ಸ್ಥಳ ಇಂದು ನಾಡಿನ ಅಸಂಖ್ಯಾತ ಭಕ್ತರ ನಂಬಿಕೆಯ ಧಾರ್ಮಿಕ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಭೂತಪ್ಪ ದೇವಸ್ಥಾನದ ಪರಿಸರವೂ ಸಾಕಷ್ಟು ಅಭಿವೃದ್ಧಿ ಕಂಡಿದೆ ಎಂದರು.</p>.<p>ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಭೂತಪ್ಪ ಸನ್ನಿಧಿಯಲ್ಲಿ ಪ್ರತಿ ವರ್ಷ ಸಾಮೂಹಿಕ ವಿವಾಹಗಳು ನಡೆಯುತ್ತಿರುವುದು ಸ್ತುತ್ಯರ್ಹ ಎಂದರು.</p>.<p>ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ’ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿವೆ. ಭಕ್ತಿ, ನಂಬಿಕೆ ಇದ್ದ ಸ್ಥಳ ಧಾರ್ಮಿಕ ಕ್ಷೇತ್ರವಾಗಿ ರೂಪುಗೊಳ್ಳುತ್ತದೆ‘ ಎಂದರು.</p>.<p>ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ‘ರಾಜ್ಯ, ಹೊರರಾಜ್ಯದ ಭಕ್ತರು ಹರಕೆ ಹೊತ್ತು ಬರುವ ಭೂತಪ್ಪ ದೇವಸ್ಥಾನ ಸರ್ಕಾರದ ಅನುದಾನವಿಲ್ಲದೆಯೂ ಸುಧಾರಣೆಗೊಂಡಿದೆ’ ಎಂದರು.</p>.<p>ಅಕ್ಕಿಆಲೂರ ವಿರಕ್ತಮಠದ ಶಿವಬಸವ ಸ್ವಾಮೀಜಿ, ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕೂಡಲ ಗುರು ಮಹೇಶ್ವರ ಸ್ವಾಮೀಜಿ, ಬಾಳೂರ ಅಡವಿಸ್ವಾಮಿ ಮಠದ ಕುಮಾರ ಸ್ವಾಮೀಜಿ ಭಾಗವಹಿಸಿದ್ದರು.</p>.<p>ದೇವಸ್ಥಾನ ಧರ್ಮದರ್ಶಿ ರಾಜಣ್ಣ ಗೌಳಿ, ಮಾಜಿ ಶಾಸಕ ಶಿವರಾಜ ಸಜ್ಜನರ, ಪ್ರಮುಖರಾದ ಸಿದ್ಧಲಿಂಗಣ್ಣ ಕಮಡೊಳ್ಳಿ, ರಾಘವೇಂದ್ರ ತಹಶೀಲ್ದಾರ್, ಚಂದ್ರಪ್ಪ ಜಾಲಗಾರ, ಟಾಕನಗೌಡ ಪಾಟೀಲ, ಕೃಷ್ಣ ಈಳಿಗೇರ, ಸುಭಾಸ ತಳವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್:</strong> ಭೂತಪ್ಪ ದೇವಸ್ಥಾನದಲ್ಲಿ ಈ ವರ್ಷದಿಂದ ಜಾತ್ರೆ ಆರಂಭಗೊಂಡಿರುವುದು ಈ ಭಾಗದಲ್ಲಿ ಧಾರ್ಮಿಕ ವಾತಾವರಣ ಮೇಳೈಸಲು ಕಾರಣವಾಗಿದೆ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ನಾಲ್ಕರ್ ಕ್ರಾಸ್ ಸಮೀಪದ ಭೂತೇಶ್ವರ ಮತ್ತು ಚೌಡೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೆ ನಿಮಿತ್ತ ಶುಕ್ರವಾರ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಕೆಲವು ವರ್ಷಗಳ ಹಿಂದೆ ಬೃಹತ್ ಮರದ ಅಡಿಯಲ್ಲಿ ದೈವಾರಾಧನೆ ನಡೆಯುತ್ತಿದ್ದ ಸ್ಥಳ ಇಂದು ನಾಡಿನ ಅಸಂಖ್ಯಾತ ಭಕ್ತರ ನಂಬಿಕೆಯ ಧಾರ್ಮಿಕ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಭೂತಪ್ಪ ದೇವಸ್ಥಾನದ ಪರಿಸರವೂ ಸಾಕಷ್ಟು ಅಭಿವೃದ್ಧಿ ಕಂಡಿದೆ ಎಂದರು.</p>.<p>ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಭೂತಪ್ಪ ಸನ್ನಿಧಿಯಲ್ಲಿ ಪ್ರತಿ ವರ್ಷ ಸಾಮೂಹಿಕ ವಿವಾಹಗಳು ನಡೆಯುತ್ತಿರುವುದು ಸ್ತುತ್ಯರ್ಹ ಎಂದರು.</p>.<p>ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿ, ’ಸಾಮೂಹಿಕ ವಿವಾಹಗಳು ಸಮಾಜಕ್ಕೆ ಮಾದರಿಯಾಗಿವೆ. ಭಕ್ತಿ, ನಂಬಿಕೆ ಇದ್ದ ಸ್ಥಳ ಧಾರ್ಮಿಕ ಕ್ಷೇತ್ರವಾಗಿ ರೂಪುಗೊಳ್ಳುತ್ತದೆ‘ ಎಂದರು.</p>.<p>ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ‘ರಾಜ್ಯ, ಹೊರರಾಜ್ಯದ ಭಕ್ತರು ಹರಕೆ ಹೊತ್ತು ಬರುವ ಭೂತಪ್ಪ ದೇವಸ್ಥಾನ ಸರ್ಕಾರದ ಅನುದಾನವಿಲ್ಲದೆಯೂ ಸುಧಾರಣೆಗೊಂಡಿದೆ’ ಎಂದರು.</p>.<p>ಅಕ್ಕಿಆಲೂರ ವಿರಕ್ತಮಠದ ಶಿವಬಸವ ಸ್ವಾಮೀಜಿ, ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕೂಡಲ ಗುರು ಮಹೇಶ್ವರ ಸ್ವಾಮೀಜಿ, ಬಾಳೂರ ಅಡವಿಸ್ವಾಮಿ ಮಠದ ಕುಮಾರ ಸ್ವಾಮೀಜಿ ಭಾಗವಹಿಸಿದ್ದರು.</p>.<p>ದೇವಸ್ಥಾನ ಧರ್ಮದರ್ಶಿ ರಾಜಣ್ಣ ಗೌಳಿ, ಮಾಜಿ ಶಾಸಕ ಶಿವರಾಜ ಸಜ್ಜನರ, ಪ್ರಮುಖರಾದ ಸಿದ್ಧಲಿಂಗಣ್ಣ ಕಮಡೊಳ್ಳಿ, ರಾಘವೇಂದ್ರ ತಹಶೀಲ್ದಾರ್, ಚಂದ್ರಪ್ಪ ಜಾಲಗಾರ, ಟಾಕನಗೌಡ ಪಾಟೀಲ, ಕೃಷ್ಣ ಈಳಿಗೇರ, ಸುಭಾಸ ತಳವಾರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>