<p> ಹಾನಗಲ್: ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ರೈತ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ<br> ಬುಧವಾರ ರೈತ ಸಂಘದಿಂದ ಪ್ರತಿಭಟನೆ ನಡೆಯಿತು.</p>.<p>ತಾಲ್ಲೂಕಿನಲ್ಲಿ ಈ ವರ್ಷದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರು ಭಾಗವಹಿಸಿದ್ದರು. ಮೃತರ ಭಾವಚಿತ್ರ ಇಟ್ಟುಕೊಂಡು ಪ್ರತಿಭಟಿಸಿದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ಈ ವರ್ಷದಲ್ಲಿ ತಾಲ್ಲೂಕಿನಲ್ಲಿ ಒಟ್ಟು 9 ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಎರಡು ತಿಂಗಳ ಅವಧಿಯಲ್ಲಿ 3 ಆತ್ಮಹತ್ಯೆ ನಡೆದಿವೆ. ಪ್ರಕೃತಿ ವೈಪರಿತ್ಯದ ಕಾರಣಕ್ಕಾಗಿ ಬೆಳೆ ಹಾನಿ ಅನುಭವಿಸಿ ಸಾಲದಲ್ಲಿ ಸಿಲುಕಿರುವ ರೈತರಿಗೆ ಬ್ಯಾಂಕ್ಗಳು ಕಿರುಕುಳ ನೀಡಬಾರದು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಪ್ರಮುಖರಾದ ರುದ್ರಪ್ಪ ಹಣ್ಣಿ, ಸೋಮಣ್ಣ ಜಡೆಗೊಂಡರ, ಎಂ.ಎಂ.ಬಡಗಿ, ಶಣ್ಮುಖ ಅಂದಲಗಿ, ಶಿವಕುಮಾರ ಹಣ್ಣಿ, ವೀರೇಶ ಬಾಳಂಬೀಡ, ಜಗದೀಶ ಬಂಗಿ, ಮೂಖಯ್ಯ ಗುರುಲಿಂಗಮ್ಮನವರ ಅಜ್ಜನಗೌಡ ಕರೆಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p> ಹಾನಗಲ್: ಆತ್ಮಹತ್ಯೆಗೆ ಶರಣಾದ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ರೈತ ಆತ್ಮಹತ್ಯೆ ತಡೆಯುವ ನಿಟ್ಟಿನಲ್ಲಿ ಸರ್ಕಾರ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿ<br> ಬುಧವಾರ ರೈತ ಸಂಘದಿಂದ ಪ್ರತಿಭಟನೆ ನಡೆಯಿತು.</p>.<p>ತಾಲ್ಲೂಕಿನಲ್ಲಿ ಈ ವರ್ಷದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರು ಭಾಗವಹಿಸಿದ್ದರು. ಮೃತರ ಭಾವಚಿತ್ರ ಇಟ್ಟುಕೊಂಡು ಪ್ರತಿಭಟಿಸಿದರು.</p>.<p>ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ಈ ವರ್ಷದಲ್ಲಿ ತಾಲ್ಲೂಕಿನಲ್ಲಿ ಒಟ್ಟು 9 ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಎರಡು ತಿಂಗಳ ಅವಧಿಯಲ್ಲಿ 3 ಆತ್ಮಹತ್ಯೆ ನಡೆದಿವೆ. ಪ್ರಕೃತಿ ವೈಪರಿತ್ಯದ ಕಾರಣಕ್ಕಾಗಿ ಬೆಳೆ ಹಾನಿ ಅನುಭವಿಸಿ ಸಾಲದಲ್ಲಿ ಸಿಲುಕಿರುವ ರೈತರಿಗೆ ಬ್ಯಾಂಕ್ಗಳು ಕಿರುಕುಳ ನೀಡಬಾರದು ಎಂದು ಆಗ್ರಹಿಸಿದರು.</p>.<p>ರೈತ ಸಂಘದ ಪ್ರಮುಖರಾದ ರುದ್ರಪ್ಪ ಹಣ್ಣಿ, ಸೋಮಣ್ಣ ಜಡೆಗೊಂಡರ, ಎಂ.ಎಂ.ಬಡಗಿ, ಶಣ್ಮುಖ ಅಂದಲಗಿ, ಶಿವಕುಮಾರ ಹಣ್ಣಿ, ವೀರೇಶ ಬಾಳಂಬೀಡ, ಜಗದೀಶ ಬಂಗಿ, ಮೂಖಯ್ಯ ಗುರುಲಿಂಗಮ್ಮನವರ ಅಜ್ಜನಗೌಡ ಕರೆಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>