<p><strong>ಹಾನಗಲ್</strong>: ತಗ್ಗು, ಗುಂಡಿಗಳು ಸೃಷ್ಟಿಯಾಗಿ ಸಂಚಾರಕ್ಕೆ ಸಂಚಕಾರ ತಂದಿದ್ದ ಹಾನಗಲ್ನಿಂದ ಬಂಕಾಪುರ ಹೋಗುವ ರಸ್ತೆಯ ದುರಸ್ತಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಕೈಗೊಂಡಿದೆ.</p>.<p>ಈ ರಸ್ತೆಯಲ್ಲಿ ಉಂಟಾಗಿದ್ದ ಬೃಹತ್ ಗಾತ್ರದ ಗುಂಡಿಗಳು ವಾಹನ ಸವಾರರನ್ನು ಫಜೀತಿಗೆ ಸಿಲುಕಿಸುತ್ತಿದ್ದವು. ಈ ರಸ್ತೆಯಲ್ಲಿ ನಿರಂತರವಾಗಿ ಸಂಚರಿಸುವ ಸ್ಥಳೀಯ ಜನರಿಗೆ ಇಲ್ಲಿನ ಅಧ್ವಾನ ಗೊತ್ತಿದ್ದ ಕಾರಣಕ್ಕೆ ಎಚ್ಚರಿಕೆ ವಹಿಸುತ್ತಿದ್ದರು. ಆದರೆ ಬೇರೆ ಊರುಗಳ ವಾಹನ ಸವಾರರು ಇಲ್ಲಿನ ಅಪಾಯವನ್ನು ಲೆಕ್ಕಿಸದೇ ಅನಾಹುತ ಮಾಡಿಕೊಳ್ಳುತ್ತಿದ್ದರು.</p>.<p>ರಸ್ತೆ ನಿರ್ವಹಣೆಯ ವೈಫಲ್ಯ ಸಾರ್ವಜನಿಕವಾಗಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಈ ರಸ್ತೆಯಲ್ಲಿನ ಅಪಘಾತಗಳ ಬಗ್ಗೆ ಪತ್ರಿಕೆ ವರದಿ ಪ್ರಕಟಿಸಿತ್ತು. ಶುಕ್ರವಾರದಿಂದ ರಸ್ತೆಯಲ್ಲಿನ ತಗ್ಗು, ಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು ಪಿಡಬ್ಲುಡಿ ಇಲಾಖೆ ಕೈಗೊಂಡಿದ್ದು, ಮಾಸನಕಟ್ಟಿ ಗ್ರಾಮದ ತನಕ ದುರಸ್ತಿ ಕೆಲಸ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಪಿಡಬ್ಲುಡಿ ಎಇಇ ನಾಗರಾಜ ಎಸ್., ಸದ್ಯಕ್ಕೆ ಕರಗುದರಿ ಕ್ರಾಸ್ನಿಂದ ಬೆಳಗಾಲಪೇಟೆ ಕ್ರಾಸ್ ತನಕ ರಸ್ತೆಯಲ್ಲಿನ ಗುಂಡಿಗಳಿಗೆ ಖಡಿ ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ. ತಾಲ್ಲೂಕು ಗಡಿ ತನಕ ದುರಸ್ತಿ ಕಾಮಗಾರಿ ಮುಂದುವರಿಯುತ್ತದೆ. ಸದ್ಯದಲ್ಲಿಯೇ ಈ ರಸ್ತೆಯ ದುರಸ್ತಿ ಮತ್ತು ನಿರ್ವಹಣೆಗಾಗಿ ಒಂದು ವರ್ಷದ ಅವಧಿಗೆ ಟೆಂಡರ್ ಕರೆದು ಗುತ್ತಿಗೆದಾರರನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ತಗ್ಗು, ಗುಂಡಿಗಳು ಸೃಷ್ಟಿಯಾಗಿ ಸಂಚಾರಕ್ಕೆ ಸಂಚಕಾರ ತಂದಿದ್ದ ಹಾನಗಲ್ನಿಂದ ಬಂಕಾಪುರ ಹೋಗುವ ರಸ್ತೆಯ ದುರಸ್ತಿ ಕಾರ್ಯವನ್ನು ಲೋಕೋಪಯೋಗಿ ಇಲಾಖೆ ಕೈಗೊಂಡಿದೆ.</p>.<p>ಈ ರಸ್ತೆಯಲ್ಲಿ ಉಂಟಾಗಿದ್ದ ಬೃಹತ್ ಗಾತ್ರದ ಗುಂಡಿಗಳು ವಾಹನ ಸವಾರರನ್ನು ಫಜೀತಿಗೆ ಸಿಲುಕಿಸುತ್ತಿದ್ದವು. ಈ ರಸ್ತೆಯಲ್ಲಿ ನಿರಂತರವಾಗಿ ಸಂಚರಿಸುವ ಸ್ಥಳೀಯ ಜನರಿಗೆ ಇಲ್ಲಿನ ಅಧ್ವಾನ ಗೊತ್ತಿದ್ದ ಕಾರಣಕ್ಕೆ ಎಚ್ಚರಿಕೆ ವಹಿಸುತ್ತಿದ್ದರು. ಆದರೆ ಬೇರೆ ಊರುಗಳ ವಾಹನ ಸವಾರರು ಇಲ್ಲಿನ ಅಪಾಯವನ್ನು ಲೆಕ್ಕಿಸದೇ ಅನಾಹುತ ಮಾಡಿಕೊಳ್ಳುತ್ತಿದ್ದರು.</p>.<p>ರಸ್ತೆ ನಿರ್ವಹಣೆಯ ವೈಫಲ್ಯ ಸಾರ್ವಜನಿಕವಾಗಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಈ ರಸ್ತೆಯಲ್ಲಿನ ಅಪಘಾತಗಳ ಬಗ್ಗೆ ಪತ್ರಿಕೆ ವರದಿ ಪ್ರಕಟಿಸಿತ್ತು. ಶುಕ್ರವಾರದಿಂದ ರಸ್ತೆಯಲ್ಲಿನ ತಗ್ಗು, ಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು ಪಿಡಬ್ಲುಡಿ ಇಲಾಖೆ ಕೈಗೊಂಡಿದ್ದು, ಮಾಸನಕಟ್ಟಿ ಗ್ರಾಮದ ತನಕ ದುರಸ್ತಿ ಕೆಲಸ ಮಾಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿದ ಪಿಡಬ್ಲುಡಿ ಎಇಇ ನಾಗರಾಜ ಎಸ್., ಸದ್ಯಕ್ಕೆ ಕರಗುದರಿ ಕ್ರಾಸ್ನಿಂದ ಬೆಳಗಾಲಪೇಟೆ ಕ್ರಾಸ್ ತನಕ ರಸ್ತೆಯಲ್ಲಿನ ಗುಂಡಿಗಳಿಗೆ ಖಡಿ ಹಾಕಿ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ. ತಾಲ್ಲೂಕು ಗಡಿ ತನಕ ದುರಸ್ತಿ ಕಾಮಗಾರಿ ಮುಂದುವರಿಯುತ್ತದೆ. ಸದ್ಯದಲ್ಲಿಯೇ ಈ ರಸ್ತೆಯ ದುರಸ್ತಿ ಮತ್ತು ನಿರ್ವಹಣೆಗಾಗಿ ಒಂದು ವರ್ಷದ ಅವಧಿಗೆ ಟೆಂಡರ್ ಕರೆದು ಗುತ್ತಿಗೆದಾರರನ್ನು ನೇಮಕ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>