ಸಲ್ಲಿಕೆ ಆದ ಎಲ್ಲ ಅರ್ಜಿಗಳನ್ನು ರಾಜ್ಯ ಸಮಿತಿಗೆ ಕಳಿಸಿ ಅಲ್ಲಿಂದ ಆಯ್ಕೆ ಅಂತಿಮಗೊಳ್ಳಲಿದೆ. ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ
– ಅರುಣಕುಮಾರ ಪೂಜಾರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ
‘ಸಂಘಟನಾ ಚತುರನಿಗೆ ಮಣೆ’
‘ಬಿಜೆಪಿ ತಾಲ್ಲೂಕು ಘಟಕದ ಹೊಸ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿವೆ. ಅಧ್ಯಕ್ಷ ಸ್ಥಾನಕ್ಕೆ ಹೆಚ್ಚು ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತಗೊಂಡಿವೆ. ಈಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನಕ್ಕೆ 19 ಆಕಾಂಕ್ಷಿತರು ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದರು. ಈಗ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಅದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಕೆಯಾಗಿವೆ’ ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ತಿಳಿಸಿದರು. ಒಟ್ಟಿನಲ್ಲಿ ಕ್ಷೇತ್ರದಲ್ಲಿ ಪಕ್ಷ ಸಂಘಟಿತವಾಗಬೇಕು. ಎರಡು ಬಾರಿ ಎದುರಾದ ವಿಧಾನಸಭೆ ಚುನಾವಣೆ ಸೋಲನ್ನು ಈ ಸಲ ಲೋಕಸಭೆ ಚುನಾವಣೆ ಮೂಲಕ ಮರೆಯುವಂತಾಗಬೇಕು. ಹಿರಿಯರು ಸೇರಿಕೊಂಡು ಚರ್ಚಿಸಿ ಸಂಘಟನಾ ಚತುರ ಯೋಗ್ಯರನ್ನು ಆಯ್ಕೆ ಮಾಡುತ್ತೇವೆ ಎಂದು ಹೇಳಿದರು.