ಸರ್ಕಾರ ಏಕಿರಬೇಕು?:ಮಕ್ಕಳಿಗೆ ಅ.25ರಿಂದ ಶಾಲೆ ಆರಂಭ ಮಾಡಲಾಗುತ್ತಿದ್ದು, ಬಿಸಿಯೂಟ ನೀಡಲು ಸಿದ್ಧತೆ ಆಗಿಲ್ಲ ಎಂದು ಹೇಳಿದ್ದಾರೆ. ಮಕ್ಕಳಿಗೆ ಊಟ ಕೊಡಲು ಆಗದಿದ್ದರೆ ಈ ಸರ್ಕಾರ ಯಾಕಿರಬೇಕು? ಅಂಗನವಾಡಿ ಆರಂಭ ಇಂದಿರಾ ಗಾಂಧಿ ಅವರ ಕಾರ್ಯಕ್ರಮ, ಬಿಸಿಯೂಟ ಎಸ್.ಎಂ. ಕೃಷ್ಣ ಅವರ ಸರ್ಕಾರದಲ್ಲಿ ಜಾರಿಗೆ ತಂದ ಯೋಜನೆ ಎಂದರು.