<p><strong>ಹಾನಗಲ್</strong>: ತಾಲ್ಲೂಕಿನ ನಾಲ್ಕರ ಕ್ರಾಸ್ ಸಮೀಪ ಜನವರಿಯಲ್ಲಿ ನಡೆದಿದ್ದ ಅನೈತಿಕ ಪೊಲೀಸ್ಗಿರಿ ಮತ್ತು ಸಾಮೂಹಿಕ ಅತ್ಯಾಚಾರ ಘಟನೆಯ ಸಂತ್ರಸ್ತೆಯನ್ನು ಆರೋಪಿಗಳ ಗುರುತಿಸುವ ಪ್ರಕ್ರಿಯೆಯ ತನಿಖೆಗಾಗಿ ಗುರುವಾರ ಹಾನಗಲ್ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿತ್ತು.</p><p>ಮಧ್ಯಾಹ್ನ 1 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದ ಸಂತ್ರಸ್ತೆಯೊಂದಿಗೆ ಆಕೆಯ ಪತಿ ಮತ್ತು ಸಹೋದರಿ ಇದ್ದರು. ಮಧ್ಯಾಹ್ನ 4 ಗಂಟೆಗೆ ಸಂತ್ರಸ್ತೆಯನ್ನು ಹಾವೇರಿಯ ಕೆರಿಮತ್ತಿಹಳ್ಳಿಯ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು. </p><p>ಹಾನಗಲ್ ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಗಳ ಗುರುತಿಸುವ ಪ್ರಕ್ರಿಯೆಯು ಹಾನಗಲ್ ತಹಶೀಲ್ದಾರ್ ರೇಣುಕಾ ಸಮ್ಮುಖದಲ್ಲಿ ಹಾವೇರಿ ಕಾರಾಗೃಹದಲ್ಲಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. </p><p>‘ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಈತನಕ 19 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಹಾವೇರಿ ಉಪ ಕಾರಾಗೃಹದಲ್ಲಿ ಇದ್ದಾರೆ. ಅತ್ಯಾಚಾರ ಎಸಗಿದ ಆರೋಪಿಗಳನ್ನು ಗುರುತಿಸುವ ಉದ್ದೇಶದಿಂದ ಸಂತ್ರಸ್ತೆಯನ್ನು ಕರೆಸಲಾಗಿತ್ತು’ ಎಂದು ಹೆಚ್ಚುವರಿ ಎಸ್ಪಿ ಗೋಪಾಲ್ ಸಿ. ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ತಾಲ್ಲೂಕಿನ ನಾಲ್ಕರ ಕ್ರಾಸ್ ಸಮೀಪ ಜನವರಿಯಲ್ಲಿ ನಡೆದಿದ್ದ ಅನೈತಿಕ ಪೊಲೀಸ್ಗಿರಿ ಮತ್ತು ಸಾಮೂಹಿಕ ಅತ್ಯಾಚಾರ ಘಟನೆಯ ಸಂತ್ರಸ್ತೆಯನ್ನು ಆರೋಪಿಗಳ ಗುರುತಿಸುವ ಪ್ರಕ್ರಿಯೆಯ ತನಿಖೆಗಾಗಿ ಗುರುವಾರ ಹಾನಗಲ್ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿತ್ತು.</p><p>ಮಧ್ಯಾಹ್ನ 1 ಗಂಟೆ ಹೊತ್ತಿಗೆ ಪೊಲೀಸ್ ಠಾಣೆಗೆ ಬಂದ ಸಂತ್ರಸ್ತೆಯೊಂದಿಗೆ ಆಕೆಯ ಪತಿ ಮತ್ತು ಸಹೋದರಿ ಇದ್ದರು. ಮಧ್ಯಾಹ್ನ 4 ಗಂಟೆಗೆ ಸಂತ್ರಸ್ತೆಯನ್ನು ಹಾವೇರಿಯ ಕೆರಿಮತ್ತಿಹಳ್ಳಿಯ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಯಿತು. </p><p>ಹಾನಗಲ್ ನ್ಯಾಯಾಲಯದ ಆದೇಶದ ಮೇರೆಗೆ ಆರೋಪಿಗಳ ಗುರುತಿಸುವ ಪ್ರಕ್ರಿಯೆಯು ಹಾನಗಲ್ ತಹಶೀಲ್ದಾರ್ ರೇಣುಕಾ ಸಮ್ಮುಖದಲ್ಲಿ ಹಾವೇರಿ ಕಾರಾಗೃಹದಲ್ಲಿ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ. </p><p>‘ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಈತನಕ 19 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರು ಹಾವೇರಿ ಉಪ ಕಾರಾಗೃಹದಲ್ಲಿ ಇದ್ದಾರೆ. ಅತ್ಯಾಚಾರ ಎಸಗಿದ ಆರೋಪಿಗಳನ್ನು ಗುರುತಿಸುವ ಉದ್ದೇಶದಿಂದ ಸಂತ್ರಸ್ತೆಯನ್ನು ಕರೆಸಲಾಗಿತ್ತು’ ಎಂದು ಹೆಚ್ಚುವರಿ ಎಸ್ಪಿ ಗೋಪಾಲ್ ಸಿ. ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>