<p><strong>ಹಾನಗಲ್</strong>: ತಾಲ್ಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿರುವ ಶಾರದಾ ಜ್ಯುವೆಲರ್ಸ್ ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನವಾಗಿದ್ದು, ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳಿದ್ದ ಲಾಕರ್ ಸಮೇತ ಕಳ್ಳರು ಪರಾರಿಯಾಗಿದ್ದಾರೆ.</p>.<p>‘ಗ್ರಾಮದ ಮುಖ್ಯ ರಸ್ತೆಯಲ್ಲಿ ಅಣ್ಣಪ್ಪ ಭಜಂತ್ರಿ ಎಂಬುವವರು ಶಾರದಾ ಜ್ಯುವೆಲರ್ಸ್ ಚಿನ್ನದ ಅಂಗಡಿ ಇಟ್ಟುಕೊಂಡಿದ್ದಾರೆ. ಅದೇ ಅಂಗಡಿಯಲ್ಲಿ ಮೇ 16ರ ತಡರಾತ್ರಿ ಕಳ್ಳತನವಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಮುಖಗವಸ ಧರಿಸಿಕೊಂಡು ಶಟರ್ ಮುರಿದು ಅಂಗಡಿಗೆ ನುಗ್ಗಿದ್ದ ಕಳ್ಳರು, ಎಲ್ಲ ಕಡೆಯೂ ಹುಡುಕಾಡಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳಕೃತ್ಯವು ಅಂಗಡಿಯಲ್ಲಿದ್ದ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದರು.</p>.<p>‘20 ಕೆ.ಜಿ. ಬೆಳ್ಳಿ ಮತ್ತು 20 ತೊಲೆ ಬಂಗಾರದ ಆಭರಣ ಇಟ್ಟಿದ್ದ ಲಾಕರ್ ಎತ್ತಿಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ₹ 40 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನವಾಗಿರುವುದಾಗಿ ಅಂದಾಜಿಸಲಾಗಿದೆ’ ಎಂದರು.</p>.<p>ಕಳವು ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಎಸ್.ಪಿ. ಯಶೋಧಾ ವಂಟಗೋಡಿ, ಹೆಚ್ಚುವರಿ ಎಸ್.ಪಿ. ಎಲ್.ವೈ. ಶಿರಕೋಳ ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-22-202124666</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್</strong>: ತಾಲ್ಲೂಕಿನ ಚಿಕ್ಕಾಂಶಿ ಹೊಸೂರು ಗ್ರಾಮದಲ್ಲಿರುವ ಶಾರದಾ ಜ್ಯುವೆಲರ್ಸ್ ಚಿನ್ನಾಭರಣ ಅಂಗಡಿಯಲ್ಲಿ ಕಳ್ಳತನವಾಗಿದ್ದು, ಚಿನ್ನಾಭರಣ ಹಾಗೂ ಬೆಳ್ಳಿ ಸಾಮಗ್ರಿಗಳಿದ್ದ ಲಾಕರ್ ಸಮೇತ ಕಳ್ಳರು ಪರಾರಿಯಾಗಿದ್ದಾರೆ.</p>.<p>‘ಗ್ರಾಮದ ಮುಖ್ಯ ರಸ್ತೆಯಲ್ಲಿ ಅಣ್ಣಪ್ಪ ಭಜಂತ್ರಿ ಎಂಬುವವರು ಶಾರದಾ ಜ್ಯುವೆಲರ್ಸ್ ಚಿನ್ನದ ಅಂಗಡಿ ಇಟ್ಟುಕೊಂಡಿದ್ದಾರೆ. ಅದೇ ಅಂಗಡಿಯಲ್ಲಿ ಮೇ 16ರ ತಡರಾತ್ರಿ ಕಳ್ಳತನವಾಗಿದೆ’ ಎಂದು ಪೊಲೀಸರು ತಿಳಿಸಿದರು.</p>.<p>‘ಮುಖಗವಸ ಧರಿಸಿಕೊಂಡು ಶಟರ್ ಮುರಿದು ಅಂಗಡಿಗೆ ನುಗ್ಗಿದ್ದ ಕಳ್ಳರು, ಎಲ್ಲ ಕಡೆಯೂ ಹುಡುಕಾಡಿದ್ದಾರೆ. ಕೈಗೆ ಸಿಕ್ಕ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಆರೋಪಿಗಳಕೃತ್ಯವು ಅಂಗಡಿಯಲ್ಲಿದ್ದ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದರು.</p>.<p>‘20 ಕೆ.ಜಿ. ಬೆಳ್ಳಿ ಮತ್ತು 20 ತೊಲೆ ಬಂಗಾರದ ಆಭರಣ ಇಟ್ಟಿದ್ದ ಲಾಕರ್ ಎತ್ತಿಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ. ₹ 40 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಕಳ್ಳತನವಾಗಿರುವುದಾಗಿ ಅಂದಾಜಿಸಲಾಗಿದೆ’ ಎಂದರು.</p>.<p>ಕಳವು ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ಎಸ್.ಪಿ. ಯಶೋಧಾ ವಂಟಗೋಡಿ, ಹೆಚ್ಚುವರಿ ಎಸ್.ಪಿ. ಎಲ್.ವೈ. ಶಿರಕೋಳ ಅವರು ಭೇಟಿ ನೀಡಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260518-22-202124666</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>