<p><strong>ಹಾನಗಲ್:</strong> ತಾಲ್ಲೂಕಿನ ಕೂಸನೂರ ಗ್ರಾಮದಲ್ಲಿ ಖಾಸಗಿ ಶೌಚಾಲಯ ಮಲಗುಂಡಿ ಸ್ವಚ್ಚಗೊಳಿಸುವ ಕಾರ್ಯದಲ್ಲಿ ತೊಡಗಿದವರನ್ನು ಅಧಿಕಾರಿಗಳು ತಡೆದ ಘಟನೆ ಮಂಗಳವಾರ ನಡೆದಿದೆ.</p>.<p>ಗ್ರಾಮದ ಸುರೇಶ ಪೂಜಾರ ಮತ್ತು ಬಸವರಾಜ ಪೂಜಾರ ಅವರಿಗೆ ಸೇರಿದ ಶೌಚಾಲಯ ಮಲಗುಂಡಿಯನ್ನು ಇಬ್ಬರು ಕೆಲಸಗಾರರು ಯಾವುದೇ ಸುರಕ್ಷತಾ ಸಲಕರಣೆ ಬಳಸದೆ ಪಕ್ಕದ ತಿಪ್ಪೆಯಲ್ಲಿ ಸಂಗ್ರಹಿಸುವ ಕಾರ್ಯ ಮಾಡುತ್ತಿರುವ ವಿಷಯ ತಿಳಿದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದರು.</p>.<p>ಮಲ ತೆಗೆಯುವ ಕೆಲಸ ತೊಡಗಿದ ಇಬ್ಬರೂ ಕಾರ್ಮಿಕರನ್ನು ಆಡೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಇಬ್ಬರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ತಿಳಿದು ಬಂದಿದೆ ಎಂದು ತಹಶೀಲ್ದಾರ್ ರೇಣುಕಾ ಎಸ್ ತಿಳಿಸಿದ್ದಾರೆ.</p>.<p>ಮಲಗುಂಡಿ ಸ್ವಚ್ಚಗೊಳಿಸುವ ಅನಿಷ್ಟ ಪದ್ಧತಿ ನಿಷೇಧವಿದೆ. ಘಟನೆ ಕುರಿತು ಆಡೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ರೇಣುಕಾ ಎಸ್ ತಿಳಿಸಿದ್ದಾರೆ.</p>.<p>ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗಂಗಾ ಹಿರೇಮಠ, ಆಡೂರ ಪೊಲೀಸ್ ಠಾಣೆ ಪಿಎಸ್ಐ ಶರಣಪ್ಪ ಹಂಡ್ರಗಲ್, ಪಿಡಿಒ ಎಸ್.ಸಿ. ಮದ್ಲೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್:</strong> ತಾಲ್ಲೂಕಿನ ಕೂಸನೂರ ಗ್ರಾಮದಲ್ಲಿ ಖಾಸಗಿ ಶೌಚಾಲಯ ಮಲಗುಂಡಿ ಸ್ವಚ್ಚಗೊಳಿಸುವ ಕಾರ್ಯದಲ್ಲಿ ತೊಡಗಿದವರನ್ನು ಅಧಿಕಾರಿಗಳು ತಡೆದ ಘಟನೆ ಮಂಗಳವಾರ ನಡೆದಿದೆ.</p>.<p>ಗ್ರಾಮದ ಸುರೇಶ ಪೂಜಾರ ಮತ್ತು ಬಸವರಾಜ ಪೂಜಾರ ಅವರಿಗೆ ಸೇರಿದ ಶೌಚಾಲಯ ಮಲಗುಂಡಿಯನ್ನು ಇಬ್ಬರು ಕೆಲಸಗಾರರು ಯಾವುದೇ ಸುರಕ್ಷತಾ ಸಲಕರಣೆ ಬಳಸದೆ ಪಕ್ಕದ ತಿಪ್ಪೆಯಲ್ಲಿ ಸಂಗ್ರಹಿಸುವ ಕಾರ್ಯ ಮಾಡುತ್ತಿರುವ ವಿಷಯ ತಿಳಿದು ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದರು.</p>.<p>ಮಲ ತೆಗೆಯುವ ಕೆಲಸ ತೊಡಗಿದ ಇಬ್ಬರೂ ಕಾರ್ಮಿಕರನ್ನು ಆಡೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಇಬ್ಬರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ತಿಳಿದು ಬಂದಿದೆ ಎಂದು ತಹಶೀಲ್ದಾರ್ ರೇಣುಕಾ ಎಸ್ ತಿಳಿಸಿದ್ದಾರೆ.</p>.<p>ಮಲಗುಂಡಿ ಸ್ವಚ್ಚಗೊಳಿಸುವ ಅನಿಷ್ಟ ಪದ್ಧತಿ ನಿಷೇಧವಿದೆ. ಘಟನೆ ಕುರಿತು ಆಡೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ರೇಣುಕಾ ಎಸ್ ತಿಳಿಸಿದ್ದಾರೆ.</p>.<p>ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಗಂಗಾ ಹಿರೇಮಠ, ಆಡೂರ ಪೊಲೀಸ್ ಠಾಣೆ ಪಿಎಸ್ಐ ಶರಣಪ್ಪ ಹಂಡ್ರಗಲ್, ಪಿಡಿಒ ಎಸ್.ಸಿ. ಮದ್ಲೇರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>