<p>ಹಾನಗಲ್: ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ದಿನಾಚರಣೆ ನಡೆಯಿತು. ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಸಂಘದ ಮಹಿಳಾ ನೌಕರರು ಆಯೋಜಿಸಿದ್ದ ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ 150 ಮಹಿಳೆಯರು ತಪಾಸಣೆಗೆ ಒಳಗಾದರು. ಹುಬ್ಬಳ್ಳಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯವರು ಆರೋಗ್ಯ ತಪಾಸಣೆ ಕೈಗೊಂಡರು. ಡಾ.ಮಂಜುನಾಥ, ಜಗದೀಶ ಇದ್ದರು.</p>.<p>ಈ ವೇಳೆ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ ಕರಿಗಾರ, ಸರ್ಕಾರಿ ನೌಕರರ ಹಿತ ಕಾಪಾಡುವಲ್ಲಿ ನೌಕರರ ಸಂಘ ಅತ್ಯಂತ ಕಾಳಜಿಯಿಂದ ಕೆಲಸ ಮಾಡುತ್ತಿದ್ದು, ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಮಹಿಳಾ ನೌಕರರು ಸಂಘಟಿತರಾಗಿ ಆರೋಗ್ಯ ಶಿಬಿರನ್ನು ನಡೆಸುತ್ತಿರುವುದು ನಿಜಕ್ಕೂ ಮಾದರಿ. ಸರ್ಕಾರಿ ನೌಕರರು ಒಟ್ಟಾಗಿ ನಮ್ಮ ಪಾಲಿನ ಸೇವೆ ಮಾಡುವುದರ ಜೊತೆಗೆ ಸರ್ಕಾದಿಂದ ನಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗೋಣ. ನೌಕರರ ಹಿತವೇ ಸಂಘದ ಮೂಲ ಉದ್ದೇಶ ಎಂದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗುರುನಾಥ ಗವಾಣಿಕರ ಮಾತನಾಡಿ, ಸರ್ಕಾರಿ ನೌಕರರೆಂದರೆ ಕೇವಲ ತಮ್ಮ ಪಾಲಿನ ಕೆಲಸಕ್ಕೆ ಸೀಮಿತರಲ್ಲ. ಸಕಾಲಿಕವಾಗಿ ಮತ್ತು ಸಮಯ ಸಂದರ್ಭಕ್ಕೆ ಇತರ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅಗತ್ಯವೂ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ಶಿಬಿರದ ಮೂಲಕ ತಾಲ್ಲೂಕಿನಲ್ಲಿ ಮಹಿಳಾ ನೌಕರರು ಉತ್ತಮ ಸೇವಾ ಕಾರ್ಯ ಕೈಗೊಂಡಿದ್ದಾರೆ ಎಂದರು.</p>.<p>ಪ್ರಾಧ್ಯಾಪಕಿ ಯಮುನಾ ಕೋಣೆಸರ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಂಗಮ್ಮ ಹಿರೇಮಠ, ಕೆ.ಆರ್.ಪಾಟೀಲ, ವೈದ್ಯಾಧಿಕಾರಿ ಡಾ.ಅನ್ನಪೂರ್ಣ ಮುಂದಿನಮನಿ, ಶಿಕ್ಷಕಿ ಅನಿತಾ ಕಿತ್ತೂರ, ಆರೋಗ್ಯ ಸಂರಕ್ಷಣಾಧಿಕಾರಿ ಮಿನಾಕ್ಷಿ ಪಾಟೀಲ, ಪ್ರಮುಖರಾದ ಶ್ವೇತಾ ಜಗ್ಗಲ, ಸಾವಿತ್ರಿ ಉಪಾಧ್ಯಾ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-22-467802318</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾನಗಲ್: ಇಲ್ಲಿನ ಸರ್ಕಾರಿ ನೌಕರರ ಸಂಘದ ಸಭಾಂಗಣದಲ್ಲಿ ಶುಕ್ರವಾರ ಮಹಿಳಾ ದಿನಾಚರಣೆ ನಡೆಯಿತು. ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಸಂಘದ ಮಹಿಳಾ ನೌಕರರು ಆಯೋಜಿಸಿದ್ದ ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ 150 ಮಹಿಳೆಯರು ತಪಾಸಣೆಗೆ ಒಳಗಾದರು. ಹುಬ್ಬಳ್ಳಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯವರು ಆರೋಗ್ಯ ತಪಾಸಣೆ ಕೈಗೊಂಡರು. ಡಾ.ಮಂಜುನಾಥ, ಜಗದೀಶ ಇದ್ದರು.</p>.<p>ಈ ವೇಳೆ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ ಕರಿಗಾರ, ಸರ್ಕಾರಿ ನೌಕರರ ಹಿತ ಕಾಪಾಡುವಲ್ಲಿ ನೌಕರರ ಸಂಘ ಅತ್ಯಂತ ಕಾಳಜಿಯಿಂದ ಕೆಲಸ ಮಾಡುತ್ತಿದ್ದು, ಎಲ್ಲರ ಸಹಕಾರ ಅಗತ್ಯ ಎಂದರು.</p>.<p>ಮಹಿಳಾ ನೌಕರರು ಸಂಘಟಿತರಾಗಿ ಆರೋಗ್ಯ ಶಿಬಿರನ್ನು ನಡೆಸುತ್ತಿರುವುದು ನಿಜಕ್ಕೂ ಮಾದರಿ. ಸರ್ಕಾರಿ ನೌಕರರು ಒಟ್ಟಾಗಿ ನಮ್ಮ ಪಾಲಿನ ಸೇವೆ ಮಾಡುವುದರ ಜೊತೆಗೆ ಸರ್ಕಾದಿಂದ ನಮ್ಮ ಹಕ್ಕುಗಳನ್ನು ಪಡೆಯಲು ಮುಂದಾಗೋಣ. ನೌಕರರ ಹಿತವೇ ಸಂಘದ ಮೂಲ ಉದ್ದೇಶ ಎಂದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಗುರುನಾಥ ಗವಾಣಿಕರ ಮಾತನಾಡಿ, ಸರ್ಕಾರಿ ನೌಕರರೆಂದರೆ ಕೇವಲ ತಮ್ಮ ಪಾಲಿನ ಕೆಲಸಕ್ಕೆ ಸೀಮಿತರಲ್ಲ. ಸಕಾಲಿಕವಾಗಿ ಮತ್ತು ಸಮಯ ಸಂದರ್ಭಕ್ಕೆ ಇತರ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಅಗತ್ಯವೂ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ಶಿಬಿರದ ಮೂಲಕ ತಾಲ್ಲೂಕಿನಲ್ಲಿ ಮಹಿಳಾ ನೌಕರರು ಉತ್ತಮ ಸೇವಾ ಕಾರ್ಯ ಕೈಗೊಂಡಿದ್ದಾರೆ ಎಂದರು.</p>.<p>ಪ್ರಾಧ್ಯಾಪಕಿ ಯಮುನಾ ಕೋಣೆಸರ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗಂಗಮ್ಮ ಹಿರೇಮಠ, ಕೆ.ಆರ್.ಪಾಟೀಲ, ವೈದ್ಯಾಧಿಕಾರಿ ಡಾ.ಅನ್ನಪೂರ್ಣ ಮುಂದಿನಮನಿ, ಶಿಕ್ಷಕಿ ಅನಿತಾ ಕಿತ್ತೂರ, ಆರೋಗ್ಯ ಸಂರಕ್ಷಣಾಧಿಕಾರಿ ಮಿನಾಕ್ಷಿ ಪಾಟೀಲ, ಪ್ರಮುಖರಾದ ಶ್ವೇತಾ ಜಗ್ಗಲ, ಸಾವಿತ್ರಿ ಉಪಾಧ್ಯಾ, ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260329-22-467802318</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>