ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ವಕೀಲನ ಬಂಧನ

Last Updated 9 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಆಸ್ತಿ ವ್ಯಾಜ್ಯಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಡೆಸುತ್ತಿದ್ದೇನೆ’ ಎಂದು ಸುಳ್ಳು ಹೇಳಿ ಸಾರ್ವಜನಿಕರಿಗೆ ವಂಚಿಸುತ್ತಿದ್ದ ನಕಲಿ ವಕೀಲನನ್ನು ವಕೀಲರೇ ಹಿಡಿದು ಸೋಮವಾರ ಪೊಲೀಸರಿಗೆ ಒಪ್ಪಿಸಿದ್ದಾರೆ.

ವಕೀಲರಂತೆ ಕಪ್ಪುಕೋಟುಧರಿಸಿ, ನಗರದ ಮೇಯೊಹಾಲ್‌ ಕೋರ್ಟ್‌ ಆವರಣದಲ್ಲಿ ಸಾರ್ವಜನಿಕರನ್ನು ಸಂಪರ್ಕಿಸಿ, ವಂಚಿಸಲು ಸಂಚು ಹಾಕುತ್ತಿದ್ದ ಸೂರ್ಯಪ್ರಕಾಶ್ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಈತನ ನಡೆಯಿಂದ ಅನುಮಾನಗೊಂಡ ವಕೀಲರು ಕೋರ್ಟ್ ಆವರಣದಲ್ಲಿಯೇ ಹಿಡಿದು ಪ್ರಶ್ನಿಸಿದಾಗ, ತಾನು ವಕೀಲ ಅಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾನೆ.

ವಕೀಲರು ನೀಡಿದ ದೂರಿನ ಅನ್ವಯ, ಅಶೋಕನಗರ ಪೊಲೀಸರು ಸೂರ್ಯಪ್ರಕಾಶನ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT