<p>ಹಾನಗಲ್: ಮುಸ್ಲಿಂ ಸಮುದಾಯದಿಂದ ಬುಧವಾರ ಪಟ್ಟಣದಲ್ಲಿ ನಡೆಯಬೇಕಿದ್ದ ಮೌನ ಮೆರವಣಿಗೆಯನ್ನು ಮುಂದೂಡಲಾಗಿದೆ ಎಂದು ಅಂಜುಮನ್ ಇಸ್ಲಾಂ ಹಾನಗಲ್ ಕಮೀಟಿ ಅಧ್ಯಕ್ಷ ನಜೀರ್ಅಹ್ಮದ್ ಸವಣೂರ ಹೇಳಿದರು.</p>.<p>ಗೋವು ರಾಷ್ಟ್ರೀಯ ಪ್ರಾಣಿ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ಮೌನ ಮೆರವಣಿಗೆ ಮೂಲಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ಉದ್ದೇಶಿಸಿದ್ದ ಮೆರವಣಿಗೆಯನ್ನು ಜೂನ್ 6 ರಂದು ಶನಿವಾರ ನಿಗದಿ ಮಾಡಲಾಗಿದೆ ಎಂದು ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>ಜೂನ್ 3ರಂದು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಇದೆ. ಹೀಗಾಗಿ ಪೊಲೀಸ್ ಇಲಾಖೆ ಸೂಚನೆ ಮೇರೆಗೆ ಮೌನ ಮೆರವಣಿಗೆಯ ದಿನವನ್ನು ಮುಂದೂಡಲಾಗಿದೆ ಎಂದರು.</p>.<p>ಮಂಗಳವಾರ ತಾಲ್ಲೂಕಿನ ಎಲ್ಲ ಅಂಜುಮನ್ ಕಮೀಟಿ ಪದಾಧಿಕಾರಿಗಳು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ಧೇವೆ. ಜೂ 6 ರಂದು ಶನಿವಾರ ಬೆಳಿಗ್ಗೆ ಕಾಶ್ಮೀರಿ ದರ್ಗಾ ಆವರಣದಿಂದ ಮುಖ್ಯ ರಸ್ತೆಯ ಮೂಲಕ ತಹಶೀಲ್ದಾರ್ ಕಚೇರಿ ತನಕ ಮೌನ ಮೆರವಣಿಗೆ ನಡೆಯಲಿದೆ. ಮುಸ್ಲಿಂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನಜೀರ್ಅಹ್ಮದ್ ಸವಣೂರ ಹೇಳಿದರು.</p>.<p>ಅಕ್ಕಿಆಲೂರ ಅಂಜುಮನ್ ಕಮೀಟಿ ಕಾರ್ಯದರ್ಶಿ ಯಾಸೀರ್ಅರಾಫತ್ ಮಕಾಂದಾರ್, ಹಾನಗಲ್ ಕಮೀಟಿಯ ನೀಸಾರ್ಅಹ್ಮದ್ ಗೌಂಡಿ, ನೀಸಾರ್ ಖಾಜಿ, ಅಬ್ದುಲ್ರೆಹಮಾನ್ ನರೇಗಲ್, ಖುರ್ಷಿದ್ ಹುಲ್ಲತ್ತಿ, ಮುನೀರ್ಅಹ್ಮದ್ ಪಾಳಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-22-1709036436</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾನಗಲ್: ಮುಸ್ಲಿಂ ಸಮುದಾಯದಿಂದ ಬುಧವಾರ ಪಟ್ಟಣದಲ್ಲಿ ನಡೆಯಬೇಕಿದ್ದ ಮೌನ ಮೆರವಣಿಗೆಯನ್ನು ಮುಂದೂಡಲಾಗಿದೆ ಎಂದು ಅಂಜುಮನ್ ಇಸ್ಲಾಂ ಹಾನಗಲ್ ಕಮೀಟಿ ಅಧ್ಯಕ್ಷ ನಜೀರ್ಅಹ್ಮದ್ ಸವಣೂರ ಹೇಳಿದರು.</p>.<p>ಗೋವು ರಾಷ್ಟ್ರೀಯ ಪ್ರಾಣಿ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಬೇಕು ಎಂಬ ಬೇಡಿಕೆಯನ್ನು ಇಟ್ಟುಕೊಂಡು ಮೌನ ಮೆರವಣಿಗೆ ಮೂಲಕ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲು ಉದ್ದೇಶಿಸಿದ್ದ ಮೆರವಣಿಗೆಯನ್ನು ಜೂನ್ 6 ರಂದು ಶನಿವಾರ ನಿಗದಿ ಮಾಡಲಾಗಿದೆ ಎಂದು ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ತಿಳಿಸಿದರು.</p>.<p>ಜೂನ್ 3ರಂದು ಬುಧವಾರ ರಾಜ್ಯದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ಇದೆ. ಹೀಗಾಗಿ ಪೊಲೀಸ್ ಇಲಾಖೆ ಸೂಚನೆ ಮೇರೆಗೆ ಮೌನ ಮೆರವಣಿಗೆಯ ದಿನವನ್ನು ಮುಂದೂಡಲಾಗಿದೆ ಎಂದರು.</p>.<p>ಮಂಗಳವಾರ ತಾಲ್ಲೂಕಿನ ಎಲ್ಲ ಅಂಜುಮನ್ ಕಮೀಟಿ ಪದಾಧಿಕಾರಿಗಳು ಸಭೆ ಸೇರಿ ಈ ನಿರ್ಣಯ ಕೈಗೊಂಡಿದ್ಧೇವೆ. ಜೂ 6 ರಂದು ಶನಿವಾರ ಬೆಳಿಗ್ಗೆ ಕಾಶ್ಮೀರಿ ದರ್ಗಾ ಆವರಣದಿಂದ ಮುಖ್ಯ ರಸ್ತೆಯ ಮೂಲಕ ತಹಶೀಲ್ದಾರ್ ಕಚೇರಿ ತನಕ ಮೌನ ಮೆರವಣಿಗೆ ನಡೆಯಲಿದೆ. ಮುಸ್ಲಿಂ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ನಜೀರ್ಅಹ್ಮದ್ ಸವಣೂರ ಹೇಳಿದರು.</p>.<p>ಅಕ್ಕಿಆಲೂರ ಅಂಜುಮನ್ ಕಮೀಟಿ ಕಾರ್ಯದರ್ಶಿ ಯಾಸೀರ್ಅರಾಫತ್ ಮಕಾಂದಾರ್, ಹಾನಗಲ್ ಕಮೀಟಿಯ ನೀಸಾರ್ಅಹ್ಮದ್ ಗೌಂಡಿ, ನೀಸಾರ್ ಖಾಜಿ, ಅಬ್ದುಲ್ರೆಹಮಾನ್ ನರೇಗಲ್, ಖುರ್ಷಿದ್ ಹುಲ್ಲತ್ತಿ, ಮುನೀರ್ಅಹ್ಮದ್ ಪಾಳಾ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-22-1709036436</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>