<p><strong>ಹಾನಗಲ್ (ಹಾವೇರಿ ಜಿಲ್ಲೆ); </strong>ಇಲ್ಲಿನ ತಾಲ್ಲೂಕು ಆಸ್ಪತ್ರೆಯ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಔಷಧಿ ಸಾಮಗ್ರಿಗಳು ಸುಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.</p><p>ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕೀಟ್ ಕಾರಣ ಎಂದು ಹೇಳಲಾಗಿದೆ.</p><p>ಹಾನಗಲ್ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸುಮಾರು ಎರಡು ತಾಸು ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. </p><p>ಸುಮಾರು ₹ 40 ಲಕ್ಷ ಮೌಲ್ಯದ ಔಷಧಿ , ಮಾತ್ರೆಗಳು ಹಾಗೂ ₹ 50 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳು ಸೇರಿದಂತೆ ಸುಮಾರು ₹1 ಕೋಟಿ ಮೊತ್ತದಷ್ಟು ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ.</p><p>ಆಸ್ಪತ್ರೆ ಎರಡನೇ ಮಹಡಿಯಲ್ಲಿ ಔಷಧ ಮತ್ತು ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು. ಈ ಭಾಗದಲ್ಲಿ ಬೆಂಕಿ ಹತ್ತಿಕೊಂಡಿತ್ತು.</p><p>ಮೊದಲಿಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಆಸ್ಪತ್ರೆ ಸಿಬ್ಬಂದಿ ಒಳ ರೋಗಿಗಳನ್ನು ಸುರಕ್ಷಿತವಾಗಿ ಹೊರಗೆ ಕಳಿಸಿದ್ದಾರೆ. ಔಷಧಿ ವಿಭಾಗದ ಪಕ್ಕದಲ್ಲಿ ಸಂಗ್ರಹಿತ ಆಕ್ಸಿಜನ್ ಸಿಲಿಂಡರ್ ಗಳನ್ನು ತೆರವು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾನಗಲ್ (ಹಾವೇರಿ ಜಿಲ್ಲೆ); </strong>ಇಲ್ಲಿನ ತಾಲ್ಲೂಕು ಆಸ್ಪತ್ರೆಯ ಕಟ್ಟಡದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಮೌಲ್ಯದ ಔಷಧಿ ಸಾಮಗ್ರಿಗಳು ಸುಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ.</p><p>ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕೀಟ್ ಕಾರಣ ಎಂದು ಹೇಳಲಾಗಿದೆ.</p><p>ಹಾನಗಲ್ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸ್ಥಳಕ್ಕೆ ಬೇಟಿ ನೀಡಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸುಮಾರು ಎರಡು ತಾಸು ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. </p><p>ಸುಮಾರು ₹ 40 ಲಕ್ಷ ಮೌಲ್ಯದ ಔಷಧಿ , ಮಾತ್ರೆಗಳು ಹಾಗೂ ₹ 50 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳು ಸೇರಿದಂತೆ ಸುಮಾರು ₹1 ಕೋಟಿ ಮೊತ್ತದಷ್ಟು ಹಾನಿಯಾಗಿರುವ ಬಗ್ಗೆ ಅಂದಾಜಿಸಲಾಗಿದೆ.</p><p>ಆಸ್ಪತ್ರೆ ಎರಡನೇ ಮಹಡಿಯಲ್ಲಿ ಔಷಧ ಮತ್ತು ಸಾಮಗ್ರಿಗಳನ್ನು ಸಂಗ್ರಹಿಸಲಾಗಿತ್ತು. ಈ ಭಾಗದಲ್ಲಿ ಬೆಂಕಿ ಹತ್ತಿಕೊಂಡಿತ್ತು.</p><p>ಮೊದಲಿಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಆಸ್ಪತ್ರೆ ಸಿಬ್ಬಂದಿ ಒಳ ರೋಗಿಗಳನ್ನು ಸುರಕ್ಷಿತವಾಗಿ ಹೊರಗೆ ಕಳಿಸಿದ್ದಾರೆ. ಔಷಧಿ ವಿಭಾಗದ ಪಕ್ಕದಲ್ಲಿ ಸಂಗ್ರಹಿತ ಆಕ್ಸಿಜನ್ ಸಿಲಿಂಡರ್ ಗಳನ್ನು ತೆರವು ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>