<p><strong>ಹಾವೇರಿ</strong>: ‘ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಜ. 15ರಂದು ‘ಹರ ಜಾತ್ರಾ ಮಹೋತ್ಸವ – 2025’ ಹಮ್ಮಿಕೊಳ್ಳಲಾಗಿದೆ’ ಎಂದು ವಚನಾನಂದ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು’ ಎಂದು ಕೋರಿದರು.</p>.<p>‘ಕಿತ್ತೂರು ರಾಣಿ ಚನ್ನಮ್ಮ ಅವರ ದ್ವಿಶತಮಾನ ವಿಜಯೋತ್ಸವದ ನೆನಪಿನಲ್ಲಿ ಕೇಂದ್ರ ಸರ್ಕಾರವು ₹200 ನಾಣ್ಯ ಬಿಡುಗಡೆ ಮಾಡಿರುವುದು ಸಮಾಜಕ್ಕೆ ಖುಷಿ ತಂದಿದೆ. ಜಾತ್ರಾ ಮಹೋತ್ಸವದಂದು, ಚನ್ನಮ್ಮ ಅವರ ದ್ವಿಶತಮಾನ ವಿಜಯೋತ್ಸವದ ಸಮಾರೋಪ ಸಮಾರಂಭವನ್ನೂ ಹಮ್ಮಿಕೊಳ್ಳಲಾಗಿದೆ. ಈ ವರ್ಷದಿಂದ ಸಾಧಕರೊಬ್ಬರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. ಆಯ್ಕೆಗೆ ಸಮಿತಿ ರಚಿಸಲಾಗಿದ್ದು, ಸದ್ಯದಲ್ಲೇ ಹೆಸರು ಪ್ರಕಟಿಸಲಾಗುವುದು’ ಎಂದು ಹೇಳಿದರು.</p>.<p>ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ. ಬಸವರಾಜ ವೀರಾಪೂರ ಮಾತನಾಡಿ, ‘ವಚನಾನಂದ ಸ್ವಾಮೀಜಿಯವರು ಪಟ್ಟಾಧಿಕಾರ ಸ್ವೀಕರಿಸಿ 8 ವರ್ಷವಾಗಿದ್ದು, ಅಷ್ಟಮ ವಾರ್ಷಿಕ ಪೀಠಾರೋಹಣವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ’ ಎಂದರು.</p>.<p>ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೋಮನಗೌಡ ಪಾಟೀಲ ಮಾತನಾಡಿ, ‘ಮುಂದಿನ ವರ್ಷದಿಂದ ತೇರು ಎಳೆಯುವ ಮೂಲಕ ಜಾತ್ರೆ ಆಚರಿಸಲಾಗುವುದು’ ಎಂದರು.</p>.<p>ಮುಖಂಡರಾದ ಬಿ. ಶಂಕರ್, ಮಲ್ಲಿಕಾರ್ಜುನ ಹಾವೇರಿ, ಮಲ್ಲಿಕಾರ್ಜುನ ಅಂಗಡಿ, ವಸಂತಾ, ನಾಗರತ್ನಾ, ನಾಗೇಶ ಮಾಳಿ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಲ್ಲಿ ಜ. 15ರಂದು ‘ಹರ ಜಾತ್ರಾ ಮಹೋತ್ಸವ – 2025’ ಹಮ್ಮಿಕೊಳ್ಳಲಾಗಿದೆ’ ಎಂದು ವಚನಾನಂದ ಸ್ವಾಮೀಜಿ ಹೇಳಿದರು.</p>.<p>ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು’ ಎಂದು ಕೋರಿದರು.</p>.<p>‘ಕಿತ್ತೂರು ರಾಣಿ ಚನ್ನಮ್ಮ ಅವರ ದ್ವಿಶತಮಾನ ವಿಜಯೋತ್ಸವದ ನೆನಪಿನಲ್ಲಿ ಕೇಂದ್ರ ಸರ್ಕಾರವು ₹200 ನಾಣ್ಯ ಬಿಡುಗಡೆ ಮಾಡಿರುವುದು ಸಮಾಜಕ್ಕೆ ಖುಷಿ ತಂದಿದೆ. ಜಾತ್ರಾ ಮಹೋತ್ಸವದಂದು, ಚನ್ನಮ್ಮ ಅವರ ದ್ವಿಶತಮಾನ ವಿಜಯೋತ್ಸವದ ಸಮಾರೋಪ ಸಮಾರಂಭವನ್ನೂ ಹಮ್ಮಿಕೊಳ್ಳಲಾಗಿದೆ. ಈ ವರ್ಷದಿಂದ ಸಾಧಕರೊಬ್ಬರಿಗೆ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ನೀಡಲಾಗುತ್ತಿದೆ. ಆಯ್ಕೆಗೆ ಸಮಿತಿ ರಚಿಸಲಾಗಿದ್ದು, ಸದ್ಯದಲ್ಲೇ ಹೆಸರು ಪ್ರಕಟಿಸಲಾಗುವುದು’ ಎಂದು ಹೇಳಿದರು.</p>.<p>ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷ ಡಾ. ಬಸವರಾಜ ವೀರಾಪೂರ ಮಾತನಾಡಿ, ‘ವಚನಾನಂದ ಸ್ವಾಮೀಜಿಯವರು ಪಟ್ಟಾಧಿಕಾರ ಸ್ವೀಕರಿಸಿ 8 ವರ್ಷವಾಗಿದ್ದು, ಅಷ್ಟಮ ವಾರ್ಷಿಕ ಪೀಠಾರೋಹಣವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ’ ಎಂದರು.</p>.<p>ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೋಮನಗೌಡ ಪಾಟೀಲ ಮಾತನಾಡಿ, ‘ಮುಂದಿನ ವರ್ಷದಿಂದ ತೇರು ಎಳೆಯುವ ಮೂಲಕ ಜಾತ್ರೆ ಆಚರಿಸಲಾಗುವುದು’ ಎಂದರು.</p>.<p>ಮುಖಂಡರಾದ ಬಿ. ಶಂಕರ್, ಮಲ್ಲಿಕಾರ್ಜುನ ಹಾವೇರಿ, ಮಲ್ಲಿಕಾರ್ಜುನ ಅಂಗಡಿ, ವಸಂತಾ, ನಾಗರತ್ನಾ, ನಾಗೇಶ ಮಾಳಿ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>