<p><strong>ಹಾವೇರಿ</strong>: ‘ಮಠದ ಆಸ್ತಿಯನ್ನು ಮಾರಾಟ ಮಾಡಿದ ಆರೋಪದಡಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿರುವ ಕುಮಾರೇಶ್ವರ ವಿರಕ್ತಮಠದ ಪೀಠಾಧಿಪತಿ ವಿರುದ್ಧ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ (66) ವಿರುದ್ಧ ಹಾನಗಲ್ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಾಗಿದೆ.</p>.<p>ಹುಬ್ಬಳ್ಳಿ ಮೂರುಸಾವಿರ ಮಠದ ಸ್ವಾಮೀಜಿಯೂ ಆದ ಪೀಠಾಧಿಪತಿ ಅವರು ಮಠದ ಹೆಸರಿನಲ್ಲಿದ್ದ ಆಸ್ತಿಯನ್ನು ಅಕ್ರಮ ಮಾರಿ, ಬಂದ ಹಣವನ್ನು ಸ್ವಂತಕ್ಕೆ ಬಳಸಿಕೊಂಡು ನಂಬಿಕೆದ್ರೋಹ ಎಸಗಿದ್ದಾರೆ’ ಎಂಬ ದೂರು ನೀಡಲಾಗಿತ್ತು. </p>.<p>ಮಠದ ಆಸ್ತಿ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಭಕ್ತರ ಪರವಾಗಿ ಹಾನಗಲ್ ತಾಲ್ಲೂಕಿನ ಹೊಸಳ್ಳಿ ಗ್ರಾಮದ ರವೀಂದ್ರ ಶಿವಮೂರ್ತೆಪ್ಪ ಚಿಕ್ಕೇರಿ (50) ಅವರು ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು.</p>.<p>ವಿಚಾರಣೆ ನಡೆಸಿದ್ದ ನ್ಯಾಯಾಲಯ, ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಅದರಂತೆ, ಕುಮಾರ ಸ್ವಾಮಿ ಉರುಫ್ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.</p>.<div><blockquote>ನ್ಯಾಯಾಲಯದ ನಿರ್ದೇಶನದಂತೆ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ದಾಖಲೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು </blockquote><span class="attribution">– ಯಶೋಧಾ ವಂಟಗೋಡಿ, ಜಿಲ್ಲಾ ಎಸ್.ಪಿ.</span></div>.<div><blockquote>ಮಠದ ಆಸ್ತಿ ಮಾರಾಟ ಸಂಬಂಧ ಯಾವುದೇ ತನಿಖೆಗೂ ಸಿದ್ಧ. ಪೂರಕ ದಾಖಲೆಗಳಿವೆ. ತನಿಖೆಯಿಂದ ಸತ್ಯಾಂಶ ತಿಳಿಯಲಿದೆ. ಕೆಲವರು ಆಸ್ತಿ ವಿಚಾರವಾಗಿ ತಪ್ಪು ಮಾಹಿತಿ ನೀಡುತ್ತಿದ್ದಾರೆ </blockquote><span class="attribution">– ಕುಮಾರ ಸ್ವಾಮಿ, ಹಾನಗಲ್ ಕುಮಾರೇಶ್ವರ ವಿರಕ್ತಮಠ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ‘ಮಠದ ಆಸ್ತಿಯನ್ನು ಮಾರಾಟ ಮಾಡಿದ ಆರೋಪದಡಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿರುವ ಕುಮಾರೇಶ್ವರ ವಿರಕ್ತಮಠದ ಪೀಠಾಧಿಪತಿ ವಿರುದ್ಧ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ (66) ವಿರುದ್ಧ ಹಾನಗಲ್ ಠಾಣೆಯಲ್ಲಿ ಸೋಮವಾರ ಎಫ್ಐಆರ್ ದಾಖಲಾಗಿದೆ.</p>.<p>ಹುಬ್ಬಳ್ಳಿ ಮೂರುಸಾವಿರ ಮಠದ ಸ್ವಾಮೀಜಿಯೂ ಆದ ಪೀಠಾಧಿಪತಿ ಅವರು ಮಠದ ಹೆಸರಿನಲ್ಲಿದ್ದ ಆಸ್ತಿಯನ್ನು ಅಕ್ರಮ ಮಾರಿ, ಬಂದ ಹಣವನ್ನು ಸ್ವಂತಕ್ಕೆ ಬಳಸಿಕೊಂಡು ನಂಬಿಕೆದ್ರೋಹ ಎಸಗಿದ್ದಾರೆ’ ಎಂಬ ದೂರು ನೀಡಲಾಗಿತ್ತು. </p>.<p>ಮಠದ ಆಸ್ತಿ ರಕ್ಷಣೆಗಾಗಿ ಹೋರಾಟ ನಡೆಸುತ್ತಿರುವ ಭಕ್ತರ ಪರವಾಗಿ ಹಾನಗಲ್ ತಾಲ್ಲೂಕಿನ ಹೊಸಳ್ಳಿ ಗ್ರಾಮದ ರವೀಂದ್ರ ಶಿವಮೂರ್ತೆಪ್ಪ ಚಿಕ್ಕೇರಿ (50) ಅವರು ನ್ಯಾಯಾಲಯದಲ್ಲಿ ಖಾಸಗಿ ಮೊಕದ್ದಮೆ ಹೂಡಿದ್ದರು.</p>.<p>ವಿಚಾರಣೆ ನಡೆಸಿದ್ದ ನ್ಯಾಯಾಲಯ, ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು. ಅದರಂತೆ, ಕುಮಾರ ಸ್ವಾಮಿ ಉರುಫ್ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.</p>.<div><blockquote>ನ್ಯಾಯಾಲಯದ ನಿರ್ದೇಶನದಂತೆ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ. ದಾಖಲೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು </blockquote><span class="attribution">– ಯಶೋಧಾ ವಂಟಗೋಡಿ, ಜಿಲ್ಲಾ ಎಸ್.ಪಿ.</span></div>.<div><blockquote>ಮಠದ ಆಸ್ತಿ ಮಾರಾಟ ಸಂಬಂಧ ಯಾವುದೇ ತನಿಖೆಗೂ ಸಿದ್ಧ. ಪೂರಕ ದಾಖಲೆಗಳಿವೆ. ತನಿಖೆಯಿಂದ ಸತ್ಯಾಂಶ ತಿಳಿಯಲಿದೆ. ಕೆಲವರು ಆಸ್ತಿ ವಿಚಾರವಾಗಿ ತಪ್ಪು ಮಾಹಿತಿ ನೀಡುತ್ತಿದ್ದಾರೆ </blockquote><span class="attribution">– ಕುಮಾರ ಸ್ವಾಮಿ, ಹಾನಗಲ್ ಕುಮಾರೇಶ್ವರ ವಿರಕ್ತಮಠ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>