<p><strong>ಹಾವೇರಿ: </strong>ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮೀಣ ಪ್ರದೇಶಗಳಲ್ಲಿ ದ್ರವತ್ಯಾಜ್ಯ ನಿರ್ವಹಣೆಯ ಕುರಿತು ವ್ಯಾಪಕವಾದ ಜಾಗೃತಿ ಮೂಡಿಸಲು ಹಾಗೂ ಗ್ರಾಮಗಳಲ್ಲಿ ದ್ರವತ್ಯಾಜ್ಯ ನಿರ್ವಹಣೆಯ ವಿಧಾನಗಳನ್ನು ಉತ್ತೇಜಿಸುವ ಸಲುವಾಗಿ ಜೂನ್ 5ರಿಂದ ಜೂನ್ 19ರವರೆಗೆ ‘ಸ್ವಚ್ಛ ಗ್ರಾಮ- ಸ್ವಚ್ಛ ಪರಿಸರ’ ಎಂಬ ಹೆಸರಿನಡಿ ಸ್ವಚ್ಛತಾ ಪಾಕ್ಷಿಕ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ರಮೇಶ ದೇಸಾಯಿ ತಿಳಿಸಿದ್ದಾರೆ.</p>.<p>ಈ ಕುರಿತು ಜಾಗೃತಿ ಮೂಡಿಸಲು ಸ್ಪರ್ಧೆಗಾಗಿ ಕಿರುಚಿತ್ರ ನಿರ್ಮಾಣ, ಯಶೋಗಾಥೆ (ಲೇಖನ) ಹಾಗೂ ಉತ್ತಮ ಮಾದರಿಗಳನ್ನು ಬಹುಮಾನಕ್ಕೆ ಆಹ್ವಾನಿಸಲಾಗಿದೆ. ಆಯ್ಕೆಯಾದವರಿಗೆ₹15 ಸಾವಿರ, ₹10 ಸಾವಿರ ಹಾಗೂ ₹5 ಸಾವಿರವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ನೀಡಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಗೆ ನಾಮನಿರ್ದೇಶನ ಮಾಡಲಾಗುವುದು. ರಾಜ್ಯ ಮಟ್ಟದಲ್ಲಿ ಈ ಮೂರು ವಿಭಾಗಕ್ಕೆ ಕ್ರಮವಾಗಿ ₹50 ಸಾವಿರ, ₹40 ಸಾವಿರ ಹಾಗೂ ₹30 ಸಾವಿರ ಪುರಸ್ಕಾರದ ಬಹುಮಾನವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.</p>.<p>ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಜೂನ್ 5ರಿಂದ ಅರ್ಜಿ ಪಡೆಯಬಹುದು. ಜೂನ್ 20ರೊಳಗೆ ಕಿರುಚಿತ್ರ ಸಿ.ಡಿ, ಸೂಕ್ತ ಛಾಯಾಚಿತ್ರದೊಂದಿಗೆ ಯಶೋಗಾಥೆ ( ಲೇಖನ) ಮತ್ತು ವಿನೂತನವಾಗಿ ದ್ರವ ತ್ಯಾಜ್ಯ ನಿರ್ವಹಣೆ ಮಾದರಿಗಳೊಂದಿಗೆ ನಿಗಧಿತ ಅರ್ಜಿ ಭರ್ತಿ ಮಾಡಿ ಖುದ್ದಾಗಿ ಅಥವಾ ಹಾವೇರಿ ಜಿಲ್ಲಾ ಪಂಚಾಯಿತಿ ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕು. ಸ್ವೀಕೃತವಾದ ಅರ್ಜಿಗಳನ್ನು ಜೂನ್ 28ರೊಳಗೆ ಮೌಲ್ಯಮಾಪನ ಮಾಡಿ ಜೂನ್ 30ರಂದು ಆಯ್ಕೆಯಾದವರನ್ನು ಘೋಷಣೆ ಮಾಡಲಾಗುವುದು. ಜುಲೈ 6ರೊಳಗಾಗಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.</p>.<p>ಕಿರುಚಿತ್ರ, ಲೇಖನ ಹಾಗೂ ಮಾದರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯಾಲಯ, ದೇವಗಿರಿ-581110, ಇ–ಮೇಲ್ ವಿಳಾಸ: cleangreehaveri@gmail.com. ಮಾಹಿತಿಗಾಗಿ 08375-249031 ಸಂಪರ್ಕಿಸಲು ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗ್ರಾಮೀಣ ಪ್ರದೇಶಗಳಲ್ಲಿ ದ್ರವತ್ಯಾಜ್ಯ ನಿರ್ವಹಣೆಯ ಕುರಿತು ವ್ಯಾಪಕವಾದ ಜಾಗೃತಿ ಮೂಡಿಸಲು ಹಾಗೂ ಗ್ರಾಮಗಳಲ್ಲಿ ದ್ರವತ್ಯಾಜ್ಯ ನಿರ್ವಹಣೆಯ ವಿಧಾನಗಳನ್ನು ಉತ್ತೇಜಿಸುವ ಸಲುವಾಗಿ ಜೂನ್ 5ರಿಂದ ಜೂನ್ 19ರವರೆಗೆ ‘ಸ್ವಚ್ಛ ಗ್ರಾಮ- ಸ್ವಚ್ಛ ಪರಿಸರ’ ಎಂಬ ಹೆಸರಿನಡಿ ಸ್ವಚ್ಛತಾ ಪಾಕ್ಷಿಕ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ರಮೇಶ ದೇಸಾಯಿ ತಿಳಿಸಿದ್ದಾರೆ.</p>.<p>ಈ ಕುರಿತು ಜಾಗೃತಿ ಮೂಡಿಸಲು ಸ್ಪರ್ಧೆಗಾಗಿ ಕಿರುಚಿತ್ರ ನಿರ್ಮಾಣ, ಯಶೋಗಾಥೆ (ಲೇಖನ) ಹಾಗೂ ಉತ್ತಮ ಮಾದರಿಗಳನ್ನು ಬಹುಮಾನಕ್ಕೆ ಆಹ್ವಾನಿಸಲಾಗಿದೆ. ಆಯ್ಕೆಯಾದವರಿಗೆ₹15 ಸಾವಿರ, ₹10 ಸಾವಿರ ಹಾಗೂ ₹5 ಸಾವಿರವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ನೀಡಲಾಗುವುದು. ರಾಜ್ಯ ಮಟ್ಟದ ಸ್ಪರ್ಧೆಗೆ ನಾಮನಿರ್ದೇಶನ ಮಾಡಲಾಗುವುದು. ರಾಜ್ಯ ಮಟ್ಟದಲ್ಲಿ ಈ ಮೂರು ವಿಭಾಗಕ್ಕೆ ಕ್ರಮವಾಗಿ ₹50 ಸಾವಿರ, ₹40 ಸಾವಿರ ಹಾಗೂ ₹30 ಸಾವಿರ ಪುರಸ್ಕಾರದ ಬಹುಮಾನವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.</p>.<p>ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಜೂನ್ 5ರಿಂದ ಅರ್ಜಿ ಪಡೆಯಬಹುದು. ಜೂನ್ 20ರೊಳಗೆ ಕಿರುಚಿತ್ರ ಸಿ.ಡಿ, ಸೂಕ್ತ ಛಾಯಾಚಿತ್ರದೊಂದಿಗೆ ಯಶೋಗಾಥೆ ( ಲೇಖನ) ಮತ್ತು ವಿನೂತನವಾಗಿ ದ್ರವ ತ್ಯಾಜ್ಯ ನಿರ್ವಹಣೆ ಮಾದರಿಗಳೊಂದಿಗೆ ನಿಗಧಿತ ಅರ್ಜಿ ಭರ್ತಿ ಮಾಡಿ ಖುದ್ದಾಗಿ ಅಥವಾ ಹಾವೇರಿ ಜಿಲ್ಲಾ ಪಂಚಾಯಿತಿ ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕು. ಸ್ವೀಕೃತವಾದ ಅರ್ಜಿಗಳನ್ನು ಜೂನ್ 28ರೊಳಗೆ ಮೌಲ್ಯಮಾಪನ ಮಾಡಿ ಜೂನ್ 30ರಂದು ಆಯ್ಕೆಯಾದವರನ್ನು ಘೋಷಣೆ ಮಾಡಲಾಗುವುದು. ಜುಲೈ 6ರೊಳಗಾಗಿ ವಿಜೇತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.</p>.<p>ಕಿರುಚಿತ್ರ, ಲೇಖನ ಹಾಗೂ ಮಾದರಿಗಳನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಕಾರ್ಯಾಲಯ, ದೇವಗಿರಿ-581110, ಇ–ಮೇಲ್ ವಿಳಾಸ: cleangreehaveri@gmail.com. ಮಾಹಿತಿಗಾಗಿ 08375-249031 ಸಂಪರ್ಕಿಸಲು ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>