<p><strong>ಹಾವೇರಿ:</strong> ನಗರದ ಸಿದ್ಧರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಆಯೋಜಿಸಿರುವ ಎರಡು ದಿನಗಳ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯಕಾರಣಿ ಸಭೆಯನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಅವರು ಶನಿವಾರ ಉದ್ಘಾಟಿಸಿದರು.</p>.<p>ಉದ್ಘಾಟನಾ ಬಳಿಕ ಮಾತನಾಡಿದ ಬಾಲಕೃಷ್ಣ, ‘ಎಬಿವಿಪಿ, ಕಳೆದ 76 ವರ್ಷಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವುದರ ಮೂಲಕ ದೇಶ ಕಟ್ಟುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ’ ಎಂದರು.</p>.<p>‘ಭಾರತದ ಬಗ್ಗೆ ವಿದೇಶಿಗರು ಈ ಹಿಂದೆ ಮಾತನಾಡುತ್ತಿದ್ದ ಶೈಲಿ ಹಾಗೂ ಇಂದಿನ ಭಾರತದ ಬಗ್ಗೆ ಮಾತನಾಡುತ್ತಿರುವ ಶೈಲಿ ಸಂಪೂರ್ಣ ಬದಲಾಗಿವೆ. ಜಗತ್ತಿನಲ್ಲಿ ಭಾರತದ ಗೌರವ ಹೆಚ್ಚುತ್ತಿದೆ’ ಎಂದರು.</p>.<p>ರಾಜ್ಯ ಘಟಕದ ಕಾರ್ಯದರ್ಶಿ ಸಚಿನ ಕುಳಗೇರಿ, ‘ವಿದ್ಯಾರ್ಥಿ ಸಮುದಾಯಕ್ಕೆ ಅನ್ಯಾಯವಾದಾಗ ಮೊದಲು ನೆನಪಿಗೆ ಬರುವುದು ಎಬಿವಿಪಿ. ವಸತಿ ನಿಲಯ, ಬಸ್, ಸರ್ಕಾರಿ ಕಾಲೇಜುಗಳ ಸಮಸ್ಯೆ, ವಿದ್ಯಾರ್ಥಿ ವೇತನ ಸಮಸ್ಯೆಗಳ ಕುರಿತು ನಿರಂತರವಾಗಿ ಹೋರಾಟ ಮಾಡುವ ಅಗತ್ಯವಿದೆ’ ಎಂದು ಹೇಳಿದರು.</p>.<p>ರಾಜ್ಯ ಘಟಕದ ಉಪಾಧ್ಯಕ್ಷ ವಿನಾಯಕ ಸಿಂಗ ರಜಪೂತ, ದಕ್ಷಿಣ ಮಧ್ಯ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ ಶಿವುಕುಮಾರ, ಗಂಗಾಧರ ಹಂಜಗಿ ಇದ್ದರು.</p>.<p>ಎರಡು ದಿನಗಳ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ನಗರದ ಸಿದ್ಧರಾಮೇಶ್ವರ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಆಯೋಜಿಸಿರುವ ಎರಡು ದಿನಗಳ ಕರ್ನಾಟಕ ಉತ್ತರ ಪ್ರಾಂತದ ರಾಜ್ಯ ಕಾರ್ಯಕಾರಣಿ ಸಭೆಯನ್ನು ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಾಲಕೃಷ್ಣ ಅವರು ಶನಿವಾರ ಉದ್ಘಾಟಿಸಿದರು.</p>.<p>ಉದ್ಘಾಟನಾ ಬಳಿಕ ಮಾತನಾಡಿದ ಬಾಲಕೃಷ್ಣ, ‘ಎಬಿವಿಪಿ, ಕಳೆದ 76 ವರ್ಷಗಳಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವುದರ ಮೂಲಕ ದೇಶ ಕಟ್ಟುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದೆ’ ಎಂದರು.</p>.<p>‘ಭಾರತದ ಬಗ್ಗೆ ವಿದೇಶಿಗರು ಈ ಹಿಂದೆ ಮಾತನಾಡುತ್ತಿದ್ದ ಶೈಲಿ ಹಾಗೂ ಇಂದಿನ ಭಾರತದ ಬಗ್ಗೆ ಮಾತನಾಡುತ್ತಿರುವ ಶೈಲಿ ಸಂಪೂರ್ಣ ಬದಲಾಗಿವೆ. ಜಗತ್ತಿನಲ್ಲಿ ಭಾರತದ ಗೌರವ ಹೆಚ್ಚುತ್ತಿದೆ’ ಎಂದರು.</p>.<p>ರಾಜ್ಯ ಘಟಕದ ಕಾರ್ಯದರ್ಶಿ ಸಚಿನ ಕುಳಗೇರಿ, ‘ವಿದ್ಯಾರ್ಥಿ ಸಮುದಾಯಕ್ಕೆ ಅನ್ಯಾಯವಾದಾಗ ಮೊದಲು ನೆನಪಿಗೆ ಬರುವುದು ಎಬಿವಿಪಿ. ವಸತಿ ನಿಲಯ, ಬಸ್, ಸರ್ಕಾರಿ ಕಾಲೇಜುಗಳ ಸಮಸ್ಯೆ, ವಿದ್ಯಾರ್ಥಿ ವೇತನ ಸಮಸ್ಯೆಗಳ ಕುರಿತು ನಿರಂತರವಾಗಿ ಹೋರಾಟ ಮಾಡುವ ಅಗತ್ಯವಿದೆ’ ಎಂದು ಹೇಳಿದರು.</p>.<p>ರಾಜ್ಯ ಘಟಕದ ಉಪಾಧ್ಯಕ್ಷ ವಿನಾಯಕ ಸಿಂಗ ರಜಪೂತ, ದಕ್ಷಿಣ ಮಧ್ಯ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ ಶಿವುಕುಮಾರ, ಗಂಗಾಧರ ಹಂಜಗಿ ಇದ್ದರು.</p>.<p>ಎರಡು ದಿನಗಳ ಸಭೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>