<p><strong>ಹಾವೇರಿ:</strong> ‘ದೇಶದಲ್ಲಿ ಲಕ್ಷಕ್ಕೂ ಹೆಚ್ಚು ಕಾಲೇಜುಗಳಿದ್ದು, ಪ್ರತಿ ವರ್ಷ ಕೋಟಿಗೂ ಅಧಿಕ ಪದವೀಧರರು ವ್ಯಾಸಂಗ ಮುಗಿಸಿ ಹೊರಬರುತ್ತಿದ್ದಾರೆ. ಅದರಲ್ಲಿ ಶೇ 22.6ರಷ್ಟು ಪದವೀಧರರಿಗೆ ಮಾತ್ರ ಉದ್ಯೋಗ ನೀಡಬಹುದಾಗಿದೆ’ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>ನಗರದ ಡಾ. ಬಿ.ಆರ್. ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕುಶಲ ಅಭಿವೃಧ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಯುವನಿಧಿ ಅಭ್ಯರ್ಥಿಗಳಿಗೆ ಸೋಮವಾರ ಆಯೋಜಿಸಿದ್ದ ‘ಅರಿವು’ ಉದ್ಯೋಗಾವಕಾಶಗಳ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಎಲ್ಲರೂ ಉದ್ಯೋಗವೇ ಬೇಕೆಂದು ಕುಳಿತರೆ ಕಷ್ಟ. ಯುವಜನತೆ, ಜ್ಞಾನದ ಜೊತೆಗೆ ಕುಶಲಗಳನ್ನು ರೂಢಿಸಿಕೊಳ್ಳಬೇಕು. ಕೈಗಾರಿಕೆಗಳಿಗೆ ಬೇಕಾದ ಕುಶಲಗಳನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು’ ಎಂದರು.</p>.<p>‘ಕಠಿಣ ಪರಿಶ್ರಮ ಹಾಗೂ ಇಚ್ಛಾಶಕ್ತಿಯಿಂದ ಏನನ್ನಾದರೂ ಸಾಧಿಸಬಹುದು. ಸಮಯಕ್ಕೆ ಬಹಳ ಮಹತ್ವವಿದೆ. ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಮಾಡಿದರೆ ಯಶಸ್ಸು ಸಾಧ್ಯವಾಗುತ್ತದೆ. ದುಡಿಯುವ ಮನಸ್ಸು ಹಾಗೂ ಸಾಧಿಸುವ ಛಲವಿದ್ದರೆ ಧೈರ್ಯದಿಂದ ಮುನ್ನುಗ್ಗಬೇಕು. ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಕೃಷಿ, ತೋಟಗಾರಿಕೆ, ಹಣ್ಣು, ತರಕಾರಿ, ಹಾಲು ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಸಂಸ್ಕರಣೆಗೆ ಹೆಚ್ಚಿನ ಆದ್ಯತೆಯಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು, ಉದ್ಯಮ ಆರಂಭಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಕಾರ್ಯಾಗಾರ ಉದ್ಘಾಟಿಸಿದ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ, ‘ಶಾಲಾ ಹಂತದಿಂದಲೇ ಮಕ್ಕಳಿಗೆ ಕುಶಲಗಳನ್ನು ಕಲಿಸಲು ಪೋಷಕರು ಒತ್ತು ನೀಡಬೇಕು. ಯುವಜನತೆ ಸಹ ಆಧುನಿಕತೆಗೆ ತಕ್ಕ ಕುಶಲಗಳನ್ನು ಕಲಿತು ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ. ಹಿರೇಮಠ ಅವರು ಅಧ್ಯಕ್ಷತೆ ವಹಿಸಿದ್ದರು.</p>.<p>ಜಿ.ಪಂ. ಸಿಇಒ ರುಚಿ ಬಿಂದಲ್, ಜಿಲ್ಲಾ ಕುಶಲ ಅಭಿವೃದ್ಧಿ ಇಲಾಖೆ ಅಧಿಕಾರಿ ಸೋನಾಲಿ ಕ್ಷೀರಸಾಗರ, ಎಂ.ಎಂ. ಮೈದೂರ, ಶಂಭನಗೌಡ ಪಾಟೀಲ, ಸುಭಾಸ ಮಜ್ಜಗಿ, ಚೇತನಕುಮಾರ ಮೊಹತೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ‘ದೇಶದಲ್ಲಿ ಲಕ್ಷಕ್ಕೂ ಹೆಚ್ಚು ಕಾಲೇಜುಗಳಿದ್ದು, ಪ್ರತಿ ವರ್ಷ ಕೋಟಿಗೂ ಅಧಿಕ ಪದವೀಧರರು ವ್ಯಾಸಂಗ ಮುಗಿಸಿ ಹೊರಬರುತ್ತಿದ್ದಾರೆ. ಅದರಲ್ಲಿ ಶೇ 22.6ರಷ್ಟು ಪದವೀಧರರಿಗೆ ಮಾತ್ರ ಉದ್ಯೋಗ ನೀಡಬಹುದಾಗಿದೆ’ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.</p>.<p>ನಗರದ ಡಾ. ಬಿ.ಆರ್. ಅಂಬೇಡ್ಕರ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕುಶಲ ಅಭಿವೃಧ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಹಯೋಗದಲ್ಲಿ ಯುವನಿಧಿ ಅಭ್ಯರ್ಥಿಗಳಿಗೆ ಸೋಮವಾರ ಆಯೋಜಿಸಿದ್ದ ‘ಅರಿವು’ ಉದ್ಯೋಗಾವಕಾಶಗಳ ಮಾಹಿತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.</p>.<p>‘ಎಲ್ಲರೂ ಉದ್ಯೋಗವೇ ಬೇಕೆಂದು ಕುಳಿತರೆ ಕಷ್ಟ. ಯುವಜನತೆ, ಜ್ಞಾನದ ಜೊತೆಗೆ ಕುಶಲಗಳನ್ನು ರೂಢಿಸಿಕೊಳ್ಳಬೇಕು. ಕೈಗಾರಿಕೆಗಳಿಗೆ ಬೇಕಾದ ಕುಶಲಗಳನ್ನು ಯುವಜನತೆ ಮೈಗೂಡಿಸಿಕೊಳ್ಳಬೇಕು’ ಎಂದರು.</p>.<p>‘ಕಠಿಣ ಪರಿಶ್ರಮ ಹಾಗೂ ಇಚ್ಛಾಶಕ್ತಿಯಿಂದ ಏನನ್ನಾದರೂ ಸಾಧಿಸಬಹುದು. ಸಮಯಕ್ಕೆ ಬಹಳ ಮಹತ್ವವಿದೆ. ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಮಾಡಿದರೆ ಯಶಸ್ಸು ಸಾಧ್ಯವಾಗುತ್ತದೆ. ದುಡಿಯುವ ಮನಸ್ಸು ಹಾಗೂ ಸಾಧಿಸುವ ಛಲವಿದ್ದರೆ ಧೈರ್ಯದಿಂದ ಮುನ್ನುಗ್ಗಬೇಕು. ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು’ ಎಂದು ಹೇಳಿದರು.</p>.<p>‘ಕೃಷಿ, ತೋಟಗಾರಿಕೆ, ಹಣ್ಣು, ತರಕಾರಿ, ಹಾಲು ಸೇರಿದಂತೆ ವಿವಿಧ ಆಹಾರ ಪದಾರ್ಥಗಳ ಸಂಸ್ಕರಣೆಗೆ ಹೆಚ್ಚಿನ ಆದ್ಯತೆಯಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು, ಉದ್ಯಮ ಆರಂಭಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು’ ಎಂದು ತಿಳಿಸಿದರು.</p>.<p>ಕಾರ್ಯಾಗಾರ ಉದ್ಘಾಟಿಸಿದ ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ, ‘ಶಾಲಾ ಹಂತದಿಂದಲೇ ಮಕ್ಕಳಿಗೆ ಕುಶಲಗಳನ್ನು ಕಲಿಸಲು ಪೋಷಕರು ಒತ್ತು ನೀಡಬೇಕು. ಯುವಜನತೆ ಸಹ ಆಧುನಿಕತೆಗೆ ತಕ್ಕ ಕುಶಲಗಳನ್ನು ಕಲಿತು ಅವಕಾಶಗಳನ್ನು ಸೂಕ್ತವಾಗಿ ಬಳಸಿಕೊಳ್ಳಬೇಕು’ ಎಂದರು.</p>.<p>ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಂ. ಹಿರೇಮಠ ಅವರು ಅಧ್ಯಕ್ಷತೆ ವಹಿಸಿದ್ದರು.</p>.<p>ಜಿ.ಪಂ. ಸಿಇಒ ರುಚಿ ಬಿಂದಲ್, ಜಿಲ್ಲಾ ಕುಶಲ ಅಭಿವೃದ್ಧಿ ಇಲಾಖೆ ಅಧಿಕಾರಿ ಸೋನಾಲಿ ಕ್ಷೀರಸಾಗರ, ಎಂ.ಎಂ. ಮೈದೂರ, ಶಂಭನಗೌಡ ಪಾಟೀಲ, ಸುಭಾಸ ಮಜ್ಜಗಿ, ಚೇತನಕುಮಾರ ಮೊಹತೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>