<p>ಹಾವೇರಿ: ಬೈಕ್ನಲ್ಲಿ ಡ್ರಾಪ್ ಕೇಳಿ 1 ಕಿ.ಮೀ.ವರೆಗೂ ಪ್ರಯಾಣಿಸಿ ಸವಾರನ ಚಿನ್ನದ ಸರ ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ಗಿರೀಶ ಎಂಬುವವರು ಕಳ್ಳತನದ ಬಗ್ಗೆ ದೂರು ನೀಡಿದ್ದಾರೆ. 50 ವರ್ಷದ ಅಪರಿಚಿತನ ವಿರುದ್ಧ ಎಫ್ಐ ಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರ ಗಿರೀಶ್, ಮೇ 20ರಂದು ಮೋಟೆಬೆನ್ನೂರಿನಿಂದ ಅರಬಗೊಂಡ ರಸ್ತೆಯಲ್ಲಿ ಬೈಕ್ನಲ್ಲಿ ಹೊರಟಿದ್ದರು. ಮಾರ್ಗಮಧ್ಯೆ ಕೈ ಮಾಡಿದ್ದ ಆರೋಪಿ, ಬೈಕ್ನಲ್ಲಿ ಡ್ರಾಪ್ ಕೇಳಿದ್ದ. ಅದಕ್ಕೆ ಒಪ್ಪಿದ್ದ ದೂರುದಾರ, ಆತನನ್ನು ಹತ್ತಿಸಿಕೊಂಡು ಮುಂದಕ್ಕೆ ಹೊರಟಿದ್ದರು. 1 ಕಿ.ಮೀ.ನಷ್ಟು ದೂರಕ್ಕೆ ಹೋಗುತ್ತಿದ್ದಂತೆ ಆರೋಪಿ ಬೈಕ್ ನಿಲ್ಲಿಸಿದ್ದ. ಅಲ್ಲಿಯೇ ಇಳಿಯುವುದಾಗಿ ಹೇಳಿದ್ದ’ ಎಂದು ತಿಳಿಸಿದರು.</p>.<p>‘ಬೈಕ್ನಿಂದ ಇಳಿಯುವ ಸಂದರ್ಭದಲ್ಲಿ ದೂರುದಾರರ ಕೊರಳಿಗೆ ಕೆಂಪು ಬಣ್ಣದ ಔಷಧಿಯೊಂದನ್ನು ಹಚ್ಚಿದ್ದ ಆರೋಪಿ, ಗಮನ ಬೇರೆಡೆ ಸೆಳೆದು ₹ 1.50 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕತ್ತರಿಸಿಟ್ಟುಕೊಂಡಿದ್ದ. ನಂತರ, ಸ್ಥಳದಿಂದ ಹೊರಟು ಹೋಗಿದ್ದ. ಕೆಲ ಹೊತ್ತಿನ ನಂತರ, ದೂರುದಾರರಿಗೆ ಕಳ್ಳತನ ವಿಷಯ ಗೊತ್ತಾಗಿದೆ. ಬಳಿಕವೇ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-22-1981190754</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಬೈಕ್ನಲ್ಲಿ ಡ್ರಾಪ್ ಕೇಳಿ 1 ಕಿ.ಮೀ.ವರೆಗೂ ಪ್ರಯಾಣಿಸಿ ಸವಾರನ ಚಿನ್ನದ ಸರ ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಬ್ಯಾಡಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುವ ಗಿರೀಶ ಎಂಬುವವರು ಕಳ್ಳತನದ ಬಗ್ಗೆ ದೂರು ನೀಡಿದ್ದಾರೆ. 50 ವರ್ಷದ ಅಪರಿಚಿತನ ವಿರುದ್ಧ ಎಫ್ಐ ಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರ ಗಿರೀಶ್, ಮೇ 20ರಂದು ಮೋಟೆಬೆನ್ನೂರಿನಿಂದ ಅರಬಗೊಂಡ ರಸ್ತೆಯಲ್ಲಿ ಬೈಕ್ನಲ್ಲಿ ಹೊರಟಿದ್ದರು. ಮಾರ್ಗಮಧ್ಯೆ ಕೈ ಮಾಡಿದ್ದ ಆರೋಪಿ, ಬೈಕ್ನಲ್ಲಿ ಡ್ರಾಪ್ ಕೇಳಿದ್ದ. ಅದಕ್ಕೆ ಒಪ್ಪಿದ್ದ ದೂರುದಾರ, ಆತನನ್ನು ಹತ್ತಿಸಿಕೊಂಡು ಮುಂದಕ್ಕೆ ಹೊರಟಿದ್ದರು. 1 ಕಿ.ಮೀ.ನಷ್ಟು ದೂರಕ್ಕೆ ಹೋಗುತ್ತಿದ್ದಂತೆ ಆರೋಪಿ ಬೈಕ್ ನಿಲ್ಲಿಸಿದ್ದ. ಅಲ್ಲಿಯೇ ಇಳಿಯುವುದಾಗಿ ಹೇಳಿದ್ದ’ ಎಂದು ತಿಳಿಸಿದರು.</p>.<p>‘ಬೈಕ್ನಿಂದ ಇಳಿಯುವ ಸಂದರ್ಭದಲ್ಲಿ ದೂರುದಾರರ ಕೊರಳಿಗೆ ಕೆಂಪು ಬಣ್ಣದ ಔಷಧಿಯೊಂದನ್ನು ಹಚ್ಚಿದ್ದ ಆರೋಪಿ, ಗಮನ ಬೇರೆಡೆ ಸೆಳೆದು ₹ 1.50 ಲಕ್ಷ ಮೌಲ್ಯದ ಚಿನ್ನದ ಸರವನ್ನು ಕತ್ತರಿಸಿಟ್ಟುಕೊಂಡಿದ್ದ. ನಂತರ, ಸ್ಥಳದಿಂದ ಹೊರಟು ಹೋಗಿದ್ದ. ಕೆಲ ಹೊತ್ತಿನ ನಂತರ, ದೂರುದಾರರಿಗೆ ಕಳ್ಳತನ ವಿಷಯ ಗೊತ್ತಾಗಿದೆ. ಬಳಿಕವೇ ಠಾಣೆಗೆ ಬಂದು ದೂರು ನೀಡಿದ್ದಾರೆ’ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-22-1981190754</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>