<p><strong>ಹಾವೇರಿ</strong>: ಬ್ಯಾನರ್ ತೆರವುಗೊಳಿಸುವ ವಿಚಾರವಾಗಿ ಮಾರಾಮಾರಿ ನಡೆದು ಪೌರಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ನಗರಸಭೆ ಹಾಗೂ ಪೊಲೀಸರು, ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪ ತಡೆ ಕಾಯ್ದೆ ಮತ್ತು ಸಾರ್ವಜನಿಕ ಸ್ಥಳಗಳು–ಮೈದಾನಗಳ (ಸಂರಕ್ಷಣೆ) ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದ್ದಾರೆ.</p>.<p>ಜಿಲ್ಲಾ ಕೇಂದ್ರವಾದ ಹಾವೇರಿ ನಗರದಲ್ಲಿ ಎಲ್ಲೆಂದರಲ್ಲಿ ಬ್ಯಾನರ್, ಪ್ಲೆಕ್ಸ್, ಭಿತ್ತಿಪತ್ರ ಹಾಗೂ ಇತರೆ ಫಲಕಗಳನ್ನು ಕಟ್ಟಲಾಗುತ್ತಿದೆ. ಹೋರಾಟಗಾರ ಹೊಸಮನಿ ಸಿದ್ಧಪ್ಪ ಸೇರಿದಂತೆ ಹಲವು ಮಹಾತ್ಮರ ಪ್ರತಿಮೆ ಬಳಿಯೂ ಕೆಲವರು ಅಕ್ರಮವಾಗಿ ಬ್ಯಾನರ್ ಕಟ್ಟುತ್ತಿದ್ದಾರೆ. ಇದರಿಂದ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ.</p>.<p>ಕೊರವರ ಓಣಿಯಲ್ಲಿ ಹಾಕಿದ್ದ ಜನ್ಮದಿನದ ಶುಭಾಶಯ ಕೋರುವ ಬ್ಯಾನರ್ ವಿಚಾರವಾಗಿ ನಗರಸಭೆ ಆವರಣದಲ್ಲಿ ಮಾರಾಮಾರಿ ನಡೆದಿತ್ತು. ಪೌರ ಕಾರ್ಮಿಕರ ಮೇಲೆಯೇ ಹಲ್ಲೆಯಾಗಿತ್ತು. ಈ ಪ್ರಕರಣದಲ್ಲಿ ಹಲವರು ಜೈಲುಪಾಲಾಗಿದ್ದಾರೆ. ಇಂಥ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.</p>.<p class="Subhead">ಮುದ್ರಣಕಾರರ ಸಭೆ: ಹಾವೇರಿ ಶಹರ ಠಾಣೆಯಲ್ಲಿ ‘ಹಾವೇರಿ ಮುದ್ರಣಕಾರರ ಸಂಘ’ದ ಸದಸ್ಯರ ಸಭೆಯನ್ನು ಸೋಮವಾರ ನಡೆಸಿದ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು, ಬ್ಯಾನರ್ ನಿಯಮ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದರು.</p>.<p>‘ನಗರದ ಸೌಂದರ್ಯ ಕಾಪಾಡಲು ಹಾಗೂ ಸಾರ್ವಜನಿಕರ ಆಸ್ತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪ ತಡೆ ಕಾಯ್ದೆ ಜಾರಿಗೊಳಿಸಲಾಗಿದೆ. ಈ ಕಾಯ್ದೆ ಪ್ರಕಾರ, ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಬ್ಯಾನರ್, ಪ್ಲೆಕ್ಸ್, ಭಿತ್ತಿಪತ್ರ ಪ್ರದರ್ಶಿಸಬೇಕಾದರೆ ನಗರಸಭೆಯ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಇನ್ಸ್ಪೆಕ್ಟರ್ ಮೋತಿಲಾಲ ಪವಾರ ತಿಳಿಸಿದರು.</p>.<p>‘ಅನುಮತಿ ಪಡೆಯದೇ ಅಕ್ರಮವಾಗಿ ಹಾಕುವ ಬ್ಯಾನರ್ಗಳ ಬಗ್ಗೆ ನಗರಸಭೆ ಅಧಿಕಾರಿಗಳು ದೂರು ನೀಡಬಹುದಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಲು ಅವಕಾಶವಿದೆ. ಇಂಥ ದೂರು ಆಧರಿಸಿ ಬ್ಯಾನರ್ ಹಾಕಿಸಿದ, ಮುದ್ರಿಸಿದ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲು ಕಾಯ್ದೆಯಲ್ಲಿ ಅವಕಾಶವಿದೆ’ ಎಂದು ಹೇಳಿದರು.</p>.<p>‘ಯಾವುದೇ ವ್ಯಕ್ತಿ ಬ್ಯಾನರ್, ಭಿತ್ತಿಪತ್ರ ಹಾಗೂ ಇತರೆ ಯಾವುದೇ ರೀತಿಯ ಮುದ್ರಣಕ್ಕಾಗಿ ಬಂದರೆ, ಅವರ ಬಳಿ ನಗರಸಭೆಯ ಅನುಮತಿ ಪತ್ರ ಕೇಳಬೇಕು. ಅದಾದ ನಂತರವೇ ಮುದ್ರಣ ಮಾಡಿಕೊಡಬೇಕು. ಬೇಕಾಬಿಟ್ಟಿಯಾಗಿ ಮುದ್ರಣ ಮಾಡಿಕೊಟ್ಟು ನಗರದ ಸೌಂದರ್ಯಕ್ಕೆ ಧಕ್ಕೆ ತರಬಾರದು’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ಬ್ಯಾನರ್ ತೆರವುಗೊಳಿಸುವ ವಿಚಾರವಾಗಿ ಮಾರಾಮಾರಿ ನಡೆದು ಪೌರಕಾರ್ಮಿಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ನಗರಸಭೆ ಹಾಗೂ ಪೊಲೀಸರು, ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪ ತಡೆ ಕಾಯ್ದೆ ಮತ್ತು ಸಾರ್ವಜನಿಕ ಸ್ಥಳಗಳು–ಮೈದಾನಗಳ (ಸಂರಕ್ಷಣೆ) ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿದ್ದಾರೆ.</p>.<p>ಜಿಲ್ಲಾ ಕೇಂದ್ರವಾದ ಹಾವೇರಿ ನಗರದಲ್ಲಿ ಎಲ್ಲೆಂದರಲ್ಲಿ ಬ್ಯಾನರ್, ಪ್ಲೆಕ್ಸ್, ಭಿತ್ತಿಪತ್ರ ಹಾಗೂ ಇತರೆ ಫಲಕಗಳನ್ನು ಕಟ್ಟಲಾಗುತ್ತಿದೆ. ಹೋರಾಟಗಾರ ಹೊಸಮನಿ ಸಿದ್ಧಪ್ಪ ಸೇರಿದಂತೆ ಹಲವು ಮಹಾತ್ಮರ ಪ್ರತಿಮೆ ಬಳಿಯೂ ಕೆಲವರು ಅಕ್ರಮವಾಗಿ ಬ್ಯಾನರ್ ಕಟ್ಟುತ್ತಿದ್ದಾರೆ. ಇದರಿಂದ ನಗರದ ಸೌಂದರ್ಯಕ್ಕೆ ಧಕ್ಕೆ ಬರುತ್ತಿದೆ.</p>.<p>ಕೊರವರ ಓಣಿಯಲ್ಲಿ ಹಾಕಿದ್ದ ಜನ್ಮದಿನದ ಶುಭಾಶಯ ಕೋರುವ ಬ್ಯಾನರ್ ವಿಚಾರವಾಗಿ ನಗರಸಭೆ ಆವರಣದಲ್ಲಿ ಮಾರಾಮಾರಿ ನಡೆದಿತ್ತು. ಪೌರ ಕಾರ್ಮಿಕರ ಮೇಲೆಯೇ ಹಲ್ಲೆಯಾಗಿತ್ತು. ಈ ಪ್ರಕರಣದಲ್ಲಿ ಹಲವರು ಜೈಲುಪಾಲಾಗಿದ್ದಾರೆ. ಇಂಥ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.</p>.<p class="Subhead">ಮುದ್ರಣಕಾರರ ಸಭೆ: ಹಾವೇರಿ ಶಹರ ಠಾಣೆಯಲ್ಲಿ ‘ಹಾವೇರಿ ಮುದ್ರಣಕಾರರ ಸಂಘ’ದ ಸದಸ್ಯರ ಸಭೆಯನ್ನು ಸೋಮವಾರ ನಡೆಸಿದ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು, ಬ್ಯಾನರ್ ನಿಯಮ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದರು.</p>.<p>‘ನಗರದ ಸೌಂದರ್ಯ ಕಾಪಾಡಲು ಹಾಗೂ ಸಾರ್ವಜನಿಕರ ಆಸ್ತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸ್ಥಳ ವಿರೂಪ ತಡೆ ಕಾಯ್ದೆ ಜಾರಿಗೊಳಿಸಲಾಗಿದೆ. ಈ ಕಾಯ್ದೆ ಪ್ರಕಾರ, ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಬ್ಯಾನರ್, ಪ್ಲೆಕ್ಸ್, ಭಿತ್ತಿಪತ್ರ ಪ್ರದರ್ಶಿಸಬೇಕಾದರೆ ನಗರಸಭೆಯ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಇನ್ಸ್ಪೆಕ್ಟರ್ ಮೋತಿಲಾಲ ಪವಾರ ತಿಳಿಸಿದರು.</p>.<p>‘ಅನುಮತಿ ಪಡೆಯದೇ ಅಕ್ರಮವಾಗಿ ಹಾಕುವ ಬ್ಯಾನರ್ಗಳ ಬಗ್ಗೆ ನಗರಸಭೆ ಅಧಿಕಾರಿಗಳು ದೂರು ನೀಡಬಹುದಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಲು ಅವಕಾಶವಿದೆ. ಇಂಥ ದೂರು ಆಧರಿಸಿ ಬ್ಯಾನರ್ ಹಾಕಿಸಿದ, ಮುದ್ರಿಸಿದ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಲು ಕಾಯ್ದೆಯಲ್ಲಿ ಅವಕಾಶವಿದೆ’ ಎಂದು ಹೇಳಿದರು.</p>.<p>‘ಯಾವುದೇ ವ್ಯಕ್ತಿ ಬ್ಯಾನರ್, ಭಿತ್ತಿಪತ್ರ ಹಾಗೂ ಇತರೆ ಯಾವುದೇ ರೀತಿಯ ಮುದ್ರಣಕ್ಕಾಗಿ ಬಂದರೆ, ಅವರ ಬಳಿ ನಗರಸಭೆಯ ಅನುಮತಿ ಪತ್ರ ಕೇಳಬೇಕು. ಅದಾದ ನಂತರವೇ ಮುದ್ರಣ ಮಾಡಿಕೊಡಬೇಕು. ಬೇಕಾಬಿಟ್ಟಿಯಾಗಿ ಮುದ್ರಣ ಮಾಡಿಕೊಟ್ಟು ನಗರದ ಸೌಂದರ್ಯಕ್ಕೆ ಧಕ್ಕೆ ತರಬಾರದು’ ಎಂದು ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>