<p>ಹಾವೇರಿ: ಇಲ್ಲಿಯ ಹಾನಗಲ್ ರಸ್ತೆಯಲ್ಲಿರುವ ವೀರಭದ್ರೇಶ್ವರ ಎಲೆಕ್ಟ್ರಾನಿಕ್ಸ್ ಅಂಗಡಿ ಎದುರು ನಿಲ್ಲಿಸಿದ್ದ ಬೈಕ್ನ ಬ್ಯಾಗ್ನಲ್ಲಿದ್ದ ₹ 3 ಲಕ್ಷ ನಗದು ಕಳ್ಳತನವಾಗಿದ್ದು, ಈ ಬಗ್ಗೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಏಪ್ರಿಲ್ 16ರಂದು ನಡೆದಿರುವ ಕಳ್ಳತನ ಬಗ್ಗೆ ಹಿರೇಲಿಂಗದಹಳ್ಳಿ ನಿವಾಸಿ ಕುಮಾರ ಸಿದ್ದಪ್ಪ ಕಾಶಂಬಿ ಅವರು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರರು ಕೆನರಾ ಬ್ಯಾಂಕ್ಗೆ ಹೋಗಿ ಚೆಕ್ ಮೂಲಕ ₹ 3 ಲಕ್ಷ ನಗದು ಪಡೆದುಕೊಂಡಿದ್ದರು. ಅದನ್ನು ತಮ್ಮ ಬೈಕ್ನ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದರು. ವೀರಭದ್ರೇಶ್ವರ ಎಲೆಕ್ಟ್ರಾನಿಕ್ಸ್ ಅಂಗಡಿ ಎದುರು ಹೋಗಿ ಬೈಕ್ ನಿಲ್ಲಿಸಿ, ಅಂಗಡಿಗೆ ಹೋಗಿದ್ದರು. ಅವರು ವಾಪಸು ಬರುವಷ್ಟರಲ್ಲಿ ನಗದು ಕಳ್ಳತನವಾಗಿದೆ. ಆರೋಪಿಗಳು ಹಿಂಬಾಲಿಸಿ ಕೃತ್ಯ ಎಸಗಿರುವ ಅನುಮಾನವಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-22-1582775362</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ಇಲ್ಲಿಯ ಹಾನಗಲ್ ರಸ್ತೆಯಲ್ಲಿರುವ ವೀರಭದ್ರೇಶ್ವರ ಎಲೆಕ್ಟ್ರಾನಿಕ್ಸ್ ಅಂಗಡಿ ಎದುರು ನಿಲ್ಲಿಸಿದ್ದ ಬೈಕ್ನ ಬ್ಯಾಗ್ನಲ್ಲಿದ್ದ ₹ 3 ಲಕ್ಷ ನಗದು ಕಳ್ಳತನವಾಗಿದ್ದು, ಈ ಬಗ್ಗೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>‘ಏಪ್ರಿಲ್ 16ರಂದು ನಡೆದಿರುವ ಕಳ್ಳತನ ಬಗ್ಗೆ ಹಿರೇಲಿಂಗದಹಳ್ಳಿ ನಿವಾಸಿ ಕುಮಾರ ಸಿದ್ದಪ್ಪ ಕಾಶಂಬಿ ಅವರು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ದೂರುದಾರರು ಕೆನರಾ ಬ್ಯಾಂಕ್ಗೆ ಹೋಗಿ ಚೆಕ್ ಮೂಲಕ ₹ 3 ಲಕ್ಷ ನಗದು ಪಡೆದುಕೊಂಡಿದ್ದರು. ಅದನ್ನು ತಮ್ಮ ಬೈಕ್ನ ಬ್ಯಾಗ್ನಲ್ಲಿ ಇಟ್ಟುಕೊಂಡಿದ್ದರು. ವೀರಭದ್ರೇಶ್ವರ ಎಲೆಕ್ಟ್ರಾನಿಕ್ಸ್ ಅಂಗಡಿ ಎದುರು ಹೋಗಿ ಬೈಕ್ ನಿಲ್ಲಿಸಿ, ಅಂಗಡಿಗೆ ಹೋಗಿದ್ದರು. ಅವರು ವಾಪಸು ಬರುವಷ್ಟರಲ್ಲಿ ನಗದು ಕಳ್ಳತನವಾಗಿದೆ. ಆರೋಪಿಗಳು ಹಿಂಬಾಲಿಸಿ ಕೃತ್ಯ ಎಸಗಿರುವ ಅನುಮಾನವಿದೆ’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-22-1582775362</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>