<p><strong>ಬ್ಯಾಡಗಿ</strong>: ಪಟ್ಟಣದ ಮುಖ್ಯರಸ್ತೆಯ ಮೂಲಕ ಹಾಯ್ದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿಯಲ್ಲಿ ಬರುವ ಅಂಗಡಿಗಳ ತೆರವು ಕಾರ್ಯಾಚರಣೆ ಮೇ 24ರವರೆಗೂ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.</p>.<p>ಮುಖ್ಯರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಪರಿವರ್ತಿಸುವ ಉದ್ದೇಶದಿಂದ ಅದಕ್ಕೆ ಬೇಕಾಗುವ 1,050 ಮೀಟರ್ ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದೆ. ಕೆಲ ಕಟ್ಟಡ ಮಾಲೀಕರು ಸ್ವಯಂ ಪ್ರೇರಣೆಯಿಂದ ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲದೆ ಚೌಡೇಶ್ವರಿ ದೇವಸ್ಥಾನ ತೆರವಿಗೆ ಕಾಲಾವಕಾಶ ನೀಡಲಾಗಿದೆ.</p>.<p>ಇನ್ನೂ ಕೆಲವು ಬೃಹತ್ ಕಟ್ಟಡಗಳ ತೆರವು ಕಾರ್ಯ ನಿಧಾನ ಗತಿಯಲ್ಲಿ ಸಾಗಿದೆ. ಹೀಗಾಗಿ ಮುಖ್ಯ ರಸ್ತೆಯಲ್ಲಿನ ಕಟ್ಟಡಗಳ ಅವಶೇಷ ತೆಗೆಯವ ಕಾರ್ಯ ಭರದಿಂದ ಸಾಗಿದ್ದು, ಅದನ್ನು ಆಶ್ತಯ ಕಾಲೊನಿಗೆ ತೆರಳುವ ರಸ್ತೆ ಬದಿ ಗುಂಡಿಗೆ ಹಾಕಲಾಗುತ್ತಿದೆ.</p>.<p>ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಪಟ್ಟಣದ ಮುಖ್ಯ ರಸ್ತೆಯ ಅಂಗಡಿಗಳ ತೆರವು ಕಾರ್ಯದ ಪ್ರಗತಿಯನ್ನು ಸ್ವತ: ವೀಕ್ಷಿಸಿದರು.</p>.<p>‘ಭೂಸ್ವಾಧೀನಕ್ಕೆ ಅಗತ್ಯವಿರುವ ಇನ್ನುಳಿದ ಕಟ್ಟಡಗಳನ್ನು ಸೋಮವಾರದೊಳಗೆ ತೆರವುಗೊಳಿಸಬೇಕು ಎಂದು ಭೂಮಾಲಿಕರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನವ ಮಾಹಿತಿ ಲಭ್ಯವಾಗಿದೆ. ರಸ್ತೆ ಮಧ್ಯದಿಂದ ರಸ್ತೆಯ ಎರಡೂ ಬದಿಗೂ ತಲಾ 33 ಅಡಿ ಜಾಗೆ ತೆರವುಗೊಳಿಸಿದ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಕೊಳ್ಳುತ್ತಿದ್ದಾರೆ.</p>.<p>ಹೀಗಾಗಿ ಇನ್ನೂ ತೆರವು ಕಾರ್ಯಾಚರಣೆ ಮುಂದುವರೆದಿದೆ. ಜೊತೆಗೆ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಪ್ರಜಾವಾಣಿಗೆ ಮಾಹಿತಿ ನೀಡಿದರು.</p>.<p>ಡಿಪಿಆರ್ ಸಿದ್ಧತೆ: ಮುಖ್ಯರಸ್ತೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಕೊಳ್ಳಲು ಸರ್ಕಾರ ₹ 13 ಕೋಟಿ ಹಣವನ್ನು ಎಪಿಎಂಸಿಯಿಂದ ಒದಗಿಸಿದೆ.</p>.<p>ಈ ಹಿನ್ನೆಲೆಯಲ್ಲಿ ಒಳಚರಂಡಿ, 24x7 ಕುಡಿಯುವ ನೀರಿನ ವ್ಯವಸ್ಥೆ, ರಸ್ತೆಯ ಎರಡೂ ಬದಿಗೂ ಪ್ಲಾಟ್ ಫಾರ್ಂ, ಚರಂಡಿ ನಿರ್ಮಾಣ ಹಾಗೂ ದೊಡ್ಡ ಸಿಡಿಗಳ ನಿರ್ಮಾಣದ ಯೋಜನೆಯ ಸಿದ್ದತೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.</p>.<p>ಈಗಾಗಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಒಂದು ಸುತ್ತಿನ ಸಭೆ ನಡೆದಿದ್ದು, ಇನ್ನೊಂದು ಸಭೆ ನಡೆಸಿ ಅಂತಿಮ ರೂಪಕ್ಕೆ ಬರಬೇಕಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.</p>.<p>ಪಟ್ಟಣದ ಕೆಲ ನಿವಾಸಿಗಳು ಜಿಲ್ಲೆಯಲ್ಲಿಯೇ ಅತ್ಯತ್ತಮ ರಸ್ತೆ ನಿರ್ಮಾಣ ಮಾಡಬೇಕು, ಮೆಣಸಿಣಕಾಯಿಗೆ ಸಂಬಂಧಿಸಿದ ವೃತ್ತಗಳನ್ನು ನಿರ್ಮಿಸಿ ಲೈಟ್ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-22-946861851</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ಯಾಡಗಿ</strong>: ಪಟ್ಟಣದ ಮುಖ್ಯರಸ್ತೆಯ ಮೂಲಕ ಹಾಯ್ದು ಹೋಗಿರುವ ಸೊರಬ–ಗಜೇಂದ್ರಗಡ ರಾಜ್ಯ ಹೆದ್ದಾರಿಯಲ್ಲಿ ಬರುವ ಅಂಗಡಿಗಳ ತೆರವು ಕಾರ್ಯಾಚರಣೆ ಮೇ 24ರವರೆಗೂ ಮುಂದುವರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.</p>.<p>ಮುಖ್ಯರಸ್ತೆಯನ್ನು ಚತುಷ್ಪಥ ರಸ್ತೆಯಾಗಿ ಪರಿವರ್ತಿಸುವ ಉದ್ದೇಶದಿಂದ ಅದಕ್ಕೆ ಬೇಕಾಗುವ 1,050 ಮೀಟರ್ ಭೂಸ್ವಾಧೀನ ಪ್ರಕ್ರಿಯೆ ಅಂತಿಮ ಘಟ್ಟಕ್ಕೆ ತಲುಪಿದೆ. ಕೆಲ ಕಟ್ಟಡ ಮಾಲೀಕರು ಸ್ವಯಂ ಪ್ರೇರಣೆಯಿಂದ ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಅಲ್ಲದೆ ಚೌಡೇಶ್ವರಿ ದೇವಸ್ಥಾನ ತೆರವಿಗೆ ಕಾಲಾವಕಾಶ ನೀಡಲಾಗಿದೆ.</p>.<p>ಇನ್ನೂ ಕೆಲವು ಬೃಹತ್ ಕಟ್ಟಡಗಳ ತೆರವು ಕಾರ್ಯ ನಿಧಾನ ಗತಿಯಲ್ಲಿ ಸಾಗಿದೆ. ಹೀಗಾಗಿ ಮುಖ್ಯ ರಸ್ತೆಯಲ್ಲಿನ ಕಟ್ಟಡಗಳ ಅವಶೇಷ ತೆಗೆಯವ ಕಾರ್ಯ ಭರದಿಂದ ಸಾಗಿದ್ದು, ಅದನ್ನು ಆಶ್ತಯ ಕಾಲೊನಿಗೆ ತೆರಳುವ ರಸ್ತೆ ಬದಿ ಗುಂಡಿಗೆ ಹಾಕಲಾಗುತ್ತಿದೆ.</p>.<p>ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಪಟ್ಟಣದ ಮುಖ್ಯ ರಸ್ತೆಯ ಅಂಗಡಿಗಳ ತೆರವು ಕಾರ್ಯದ ಪ್ರಗತಿಯನ್ನು ಸ್ವತ: ವೀಕ್ಷಿಸಿದರು.</p>.<p>‘ಭೂಸ್ವಾಧೀನಕ್ಕೆ ಅಗತ್ಯವಿರುವ ಇನ್ನುಳಿದ ಕಟ್ಟಡಗಳನ್ನು ಸೋಮವಾರದೊಳಗೆ ತೆರವುಗೊಳಿಸಬೇಕು ಎಂದು ಭೂಮಾಲಿಕರಿಗೆ ಎಚ್ಚರಿಕೆ ನೀಡಿದ್ದಾರೆ ಎನ್ನವ ಮಾಹಿತಿ ಲಭ್ಯವಾಗಿದೆ. ರಸ್ತೆ ಮಧ್ಯದಿಂದ ರಸ್ತೆಯ ಎರಡೂ ಬದಿಗೂ ತಲಾ 33 ಅಡಿ ಜಾಗೆ ತೆರವುಗೊಳಿಸಿದ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಕೊಳ್ಳುತ್ತಿದ್ದಾರೆ.</p>.<p>ಹೀಗಾಗಿ ಇನ್ನೂ ತೆರವು ಕಾರ್ಯಾಚರಣೆ ಮುಂದುವರೆದಿದೆ. ಜೊತೆಗೆ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಪ್ರಜಾವಾಣಿಗೆ ಮಾಹಿತಿ ನೀಡಿದರು.</p>.<p>ಡಿಪಿಆರ್ ಸಿದ್ಧತೆ: ಮುಖ್ಯರಸ್ತೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಕೊಳ್ಳಲು ಸರ್ಕಾರ ₹ 13 ಕೋಟಿ ಹಣವನ್ನು ಎಪಿಎಂಸಿಯಿಂದ ಒದಗಿಸಿದೆ.</p>.<p>ಈ ಹಿನ್ನೆಲೆಯಲ್ಲಿ ಒಳಚರಂಡಿ, 24x7 ಕುಡಿಯುವ ನೀರಿನ ವ್ಯವಸ್ಥೆ, ರಸ್ತೆಯ ಎರಡೂ ಬದಿಗೂ ಪ್ಲಾಟ್ ಫಾರ್ಂ, ಚರಂಡಿ ನಿರ್ಮಾಣ ಹಾಗೂ ದೊಡ್ಡ ಸಿಡಿಗಳ ನಿರ್ಮಾಣದ ಯೋಜನೆಯ ಸಿದ್ದತೆಯಲ್ಲಿ ಅಧಿಕಾರಿಗಳು ತೊಡಗಿದ್ದಾರೆ.</p>.<p>ಈಗಾಗಲೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಒಂದು ಸುತ್ತಿನ ಸಭೆ ನಡೆದಿದ್ದು, ಇನ್ನೊಂದು ಸಭೆ ನಡೆಸಿ ಅಂತಿಮ ರೂಪಕ್ಕೆ ಬರಬೇಕಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.</p>.<p>ಪಟ್ಟಣದ ಕೆಲ ನಿವಾಸಿಗಳು ಜಿಲ್ಲೆಯಲ್ಲಿಯೇ ಅತ್ಯತ್ತಮ ರಸ್ತೆ ನಿರ್ಮಾಣ ಮಾಡಬೇಕು, ಮೆಣಸಿಣಕಾಯಿಗೆ ಸಂಬಂಧಿಸಿದ ವೃತ್ತಗಳನ್ನು ನಿರ್ಮಿಸಿ ಲೈಟ್ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-22-946861851</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>