<p><strong>ಹಾವೇರಿ:</strong> ನೆರೆ ಸಂತ್ರಸ್ತರ ಮನವಿಯಂತೆ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾದ ‘ಬಿ’ ವರ್ಗದ ಮನೆಗಳ ದುರಸ್ತಿಗೆ ಪರಿಹಾರ ನೀಡುವ ಮಾನದಂಡವನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ಎ ಮತ್ತು ಬಿ ವರ್ಗದ ಮನೆಗಳನ್ನು ಪೂರ್ಣ ಕೆಡವಿ ಪುನರ್ ನಿರ್ಮಾಣ ಮಾಡುವುದಾದರೆ ₹5 ಲಕ್ಷ ಪರಿಹಾರ ಹಾಗೂ ಬಿ ವರ್ಗದ ಮನೆಗಳನ್ನು ಪೂರ್ಣವಾಗಿ ಕೆಡವದೆ ದುರಸ್ತಿ ಮಾಡಿಕೊಳ್ಳುವುದಾದರೆ ₹3 ಲಕ್ಷ ಪರಿಹಾರ ಪಾವತಿಸಲು ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.</p>.<p>ಭಾಗಶಃ ಹಾನಿಗೊಳಗಾದ ಮನೆಗಳನ್ನು ಪೂರ್ಣ ನೆಲಸಮ ಮಾಡಿ ತಳಪಾಯ ಹಂತದಿಂದಲೇ ನಿರ್ಮಿಸಬೇಕಾದಲ್ಲಿ ₹5 ಲಕ್ಷ ಅನುದಾನ ಸಾಕಾಗುವುದಿಲ್ಲ. ಇದಕ್ಕೆ ₹10 ಲಕ್ಷದಿಂದ ₹20 ಲಕ್ಷ ಅನುದಾನ ಬೇಕಾಗುತ್ತದೆ. ಈ ಕಾರಣದಿಂದ ಹಾನಿಗೊಳಗಾದ ಭಾಗವನ್ನು ಮಾತ್ರ ಪುನರ್ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂಬ ಕೆಲವು ಫಲಾನುಭವಿಗಳು ಮನವಿ ಮಾಡಿಕೊಂಡಿದ್ದರು. ಮನವಿಗೆ ಸ್ಪಂದಿಸಿದ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.</p>.<p>ಹೊಸ ಮಾರ್ಗಸೂಚಿಯಂತೆ ‘ಎ’ ಮತ್ತು ‘ಬಿ’ ವರ್ಗದ ಮನೆಗಳನ್ನು ಪೂರ್ಣವಾಗಿ ಕೆಡವಿ ಹಾಗೂ ಪುನರ್ ನಿರ್ಮಾಣ ಮಾಡುವಂತಹ ಮನೆಗಳಿಗೆ ₹5 ಲಕ್ಷ ಪರಿಹಾರವನ್ನು ನಾಲ್ಕು ಹಂತವಾರು (ತಳಪಾಯ, ಕಿಟಕಿ, ಚಾವಣಿ ಮತ್ತು ಪೂರ್ಣ) ಫೋಟೋಗಳನ್ನು ಕಡ್ಡಾಯವಾಗಿ ಜಿಪಿಎಸ್ ಮುಖಾಂತರ ಅಳವಡಿಸಿದ ನಂತರ ಪಾವತಿಸಲಾಗುವುದು. ಭಾಗಶಃ ಹಾನಿಗೀಡಾದ ಮನೆಗಳಿಗೆ ದುರಸ್ತಿ ಕಾರ್ಯ ಇತ್ಯಾದಿಗಳನ್ನು ಕೈಗೊಳ್ಳುವ ಸಲುವಾಗಿ ₹3 ಲಕ್ಷ ಪರಿಹಾರವನ್ನು ಎರಡು ಹಂತಗಳಲ್ಲಿ ಪಾವತಿಸಲಾಗುವುದು.<br />‘ಸಿ’ ವರ್ಗದ ಮನೆಗಳ ಪರಿಹಾರದ ಮೊತ್ತ ₹50 ಸಾವಿರಗಳಾಗಿದ್ದು, ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ನೆರೆ ಸಂತ್ರಸ್ತರ ಮನವಿಯಂತೆ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾದ ‘ಬಿ’ ವರ್ಗದ ಮನೆಗಳ ದುರಸ್ತಿಗೆ ಪರಿಹಾರ ನೀಡುವ ಮಾನದಂಡವನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ.</p>.<p>ಎ ಮತ್ತು ಬಿ ವರ್ಗದ ಮನೆಗಳನ್ನು ಪೂರ್ಣ ಕೆಡವಿ ಪುನರ್ ನಿರ್ಮಾಣ ಮಾಡುವುದಾದರೆ ₹5 ಲಕ್ಷ ಪರಿಹಾರ ಹಾಗೂ ಬಿ ವರ್ಗದ ಮನೆಗಳನ್ನು ಪೂರ್ಣವಾಗಿ ಕೆಡವದೆ ದುರಸ್ತಿ ಮಾಡಿಕೊಳ್ಳುವುದಾದರೆ ₹3 ಲಕ್ಷ ಪರಿಹಾರ ಪಾವತಿಸಲು ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.</p>.<p>ಭಾಗಶಃ ಹಾನಿಗೊಳಗಾದ ಮನೆಗಳನ್ನು ಪೂರ್ಣ ನೆಲಸಮ ಮಾಡಿ ತಳಪಾಯ ಹಂತದಿಂದಲೇ ನಿರ್ಮಿಸಬೇಕಾದಲ್ಲಿ ₹5 ಲಕ್ಷ ಅನುದಾನ ಸಾಕಾಗುವುದಿಲ್ಲ. ಇದಕ್ಕೆ ₹10 ಲಕ್ಷದಿಂದ ₹20 ಲಕ್ಷ ಅನುದಾನ ಬೇಕಾಗುತ್ತದೆ. ಈ ಕಾರಣದಿಂದ ಹಾನಿಗೊಳಗಾದ ಭಾಗವನ್ನು ಮಾತ್ರ ಪುನರ್ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಮಾಡಿಕೊಡಬೇಕು ಎಂಬ ಕೆಲವು ಫಲಾನುಭವಿಗಳು ಮನವಿ ಮಾಡಿಕೊಂಡಿದ್ದರು. ಮನವಿಗೆ ಸ್ಪಂದಿಸಿದ ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ ಎಂದು ತಿಳಿಸಿದ್ದಾರೆ.</p>.<p>ಹೊಸ ಮಾರ್ಗಸೂಚಿಯಂತೆ ‘ಎ’ ಮತ್ತು ‘ಬಿ’ ವರ್ಗದ ಮನೆಗಳನ್ನು ಪೂರ್ಣವಾಗಿ ಕೆಡವಿ ಹಾಗೂ ಪುನರ್ ನಿರ್ಮಾಣ ಮಾಡುವಂತಹ ಮನೆಗಳಿಗೆ ₹5 ಲಕ್ಷ ಪರಿಹಾರವನ್ನು ನಾಲ್ಕು ಹಂತವಾರು (ತಳಪಾಯ, ಕಿಟಕಿ, ಚಾವಣಿ ಮತ್ತು ಪೂರ್ಣ) ಫೋಟೋಗಳನ್ನು ಕಡ್ಡಾಯವಾಗಿ ಜಿಪಿಎಸ್ ಮುಖಾಂತರ ಅಳವಡಿಸಿದ ನಂತರ ಪಾವತಿಸಲಾಗುವುದು. ಭಾಗಶಃ ಹಾನಿಗೀಡಾದ ಮನೆಗಳಿಗೆ ದುರಸ್ತಿ ಕಾರ್ಯ ಇತ್ಯಾದಿಗಳನ್ನು ಕೈಗೊಳ್ಳುವ ಸಲುವಾಗಿ ₹3 ಲಕ್ಷ ಪರಿಹಾರವನ್ನು ಎರಡು ಹಂತಗಳಲ್ಲಿ ಪಾವತಿಸಲಾಗುವುದು.<br />‘ಸಿ’ ವರ್ಗದ ಮನೆಗಳ ಪರಿಹಾರದ ಮೊತ್ತ ₹50 ಸಾವಿರಗಳಾಗಿದ್ದು, ಇದರಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>