<p><strong>ಹಾವೇರಿ:</strong> ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತಿದ್ದಂತೆ, ಜಿಲ್ಲೆಯಲ್ಲಿ ‘ಕೈ’ ಪಕ್ಷದ ಚಟುವಟಿಕೆಗಳು ಚುರುಕುಗೊಂಡಿವೆ. ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಸ್ಥಾನ ಪಡೆಯಲು ಜಿಲ್ಲೆಯ ಶಾಸಕರ ನಡುವೆ ತೆರೆಮರೆಯಲ್ಲಿ ಪೈಪೋಟಿ ಶುರುವಾಗಿದೆ.</p>.<p>ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ನಂತರ ‘ಬಿಜೆಪಿ ಮುಕ್ತ ಹಾವೇರಿ ಜಿಲ್ಲೆ’ ಮಾಡಿರುವ ಹುಮ್ಮಸ್ಸಿನಲ್ಲಿರುವ ಶಾಸಕರು, ಅದೇ ಕಾರಣ ಮುಂದಿಟ್ಟುಕೊಂಡು ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಲು ಸಜ್ಜಾಗಿದ್ದಾರೆ.</p>.<p>ಬಿಜೆಪಿ ಭದ್ರಕೋಟೆ ಎನಿಸಿಕೊಂಡಿದ್ದ ಶಿಗ್ಗಾವಿ ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಬಾವುಟ ಹಾರಿದೆ. ಪಕ್ಷದ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಗೆಲುವಿನ ನಗೆ ಬೀರಿದ್ದಾರೆ. ‘ನಮ್ಮ ತಂತ್ರಗಳಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ’ ಎಂದು ಹೇಳಿಕೊಳ್ಳುತ್ತಿರುವ ಶಾಸಕರು, ಸಚಿವ ಸ್ಥಾನ ತಮ್ಮದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.</p>.<p>ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿದ್ದರು. ಶಿಗ್ಗಾವಿಯಲ್ಲಿ ಮಾತ್ರ ಬಿಜೆಪಿಯ ಬಸವರಾಜ ಬೊಮ್ಮಾಯಿ ವಿಜಯಶಾಲಿಯಾಗಿದ್ದರು. ಆದರೆ, ಶಿಗ್ಗಾವಿ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮೆರೆದಿದೆ. ಇದೇ ಕಾರಣ ಮುಂದಿಟ್ಟುಕೊಂಡು ಸಚಿವ ಸ್ಥಾನ ಪಡೆಯಲು ಶಾಸಕರು ಮುಂದಾಗಿದ್ದಾರೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಹಾವೇರಿ ಜಿಲ್ಲೆಯ ಯಾವುದೇ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಜೊತೆಗೆ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಹ ಬೇರೆ ಜಿಲ್ಲೆಯವರು. ಹಾವೇರಿ ಜಿಲ್ಲೆಯ ಶಾಸಕರೇ ಸಚಿವರಾದರೆ, ಸ್ಥಳೀಯರಿಗೆ ಅನುಕೂಲವಾಗುವುದಾಗಿ ಪಕ್ಷದ ಮುಖಂಡರು ಹೇಳುತ್ತಿದ್ದಾರೆ.</p>.<p>‘ಶಿಗ್ಗಾವಿ ಗೆಲುವಿನ ಮೂಲಕ ಹಾವೇರಿ ಜಿಲ್ಲೆಯ ಶಕ್ತಿ ಪ್ರದರ್ಶನ ಮಾಡಿದ್ದೇವೆ. ಈ ಬಾರಿ ಜಿಲ್ಲೆಗೆ ಸಚಿವ ಸ್ಥಾನ ಬೇಕು ಎಂದು ವರಿಷ್ಠರಿಗೆ ಮನವಿ ಮಾಡಲಾಗಿದೆ. ಜೊತೆಗೆ, ಸಚಿವ ಸ್ಥಾನ ಪಡೆಯಲು ಪಟ್ಟು ಹಿಡಿಯಲು ಸಜ್ಜಾಗಿದ್ದೇವೆ’ ಎಂದು ಪಕ್ಷದ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಳೆದ ಬಾರಿ ಜಾತಿ ಹಾಗೂ ಸಮುದಾಯದ ಲೆಕ್ಕಾಚಾರದಲ್ಲಿ ಸಚಿವ ಸ್ಥಾನ ನೀಡಲಾಗಿತ್ತು. ಹೀಗಾಗಿ, ಹಾವೇರಿಗೆ ಸಚಿವ ಸ್ಥಾನ ಸಿಗಲಿಲ್ಲ. ಪಕ್ಷದ ತೀರ್ಮಾನವೆಂಬ ಕಾರಣಕ್ಕೆ ಶಾಸಕರು ಸುಮ್ಮನಾಗಿದ್ದರು. ಆದರೆ, ಈ ಬಾರಿ ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದೇವೆ. ಹಕ್ಕಿನ ರೂಪದಲ್ಲಿ ಸಚಿವ ಸ್ಥಾನ ಕೇಳಲು ಶಾಸಕರು ತಯಾರಾಗಿದ್ದಾರೆ’ ಎಂದು ಹೇಳಿದರು.</p>.<p>ಐವರ ನಡುವೆ ತೀವ್ರ ಪೈಪೋಟಿ: ಶಾಸಕರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಶ್ರೀನಿವಾಸ್ ಮಾನೆ, ಪ್ರಕಾಶ ಕೋಳಿವಾಡ, ಯು.ಬಿ. ಬಣಕಾರ ನಡುವೆ ಸಚಿವ ಸ್ಥಾನಕ್ಕಾಗಿ ಪೈಪೋಟಿಯಿದೆ.</p>.<p>ಒಂದು ಬಾರಿ ಸಚಿವ ಸ್ಥಾನ ನಿಭಾಯಿಸಿದ ಅನುಭವ ಹಾಗೂ ಹಿರಿಯ ಶಾಸಕರೆಂಬ ಕಾರಣ ಮುಂದಿಟ್ಟುಕೊಂಡು ಬಸವರಾಜ ಶಿವಣ್ಣನವರ ಅವರು ಸಚಿವ ಸ್ಥಾನ ಕೇಳಲು ಸಜ್ಜಾಗಿದ್ದಾರೆ. ಇದೇ ಕಾರಣ ಬಳಸಿ ರುದ್ರಪ್ಪ ಲಮಾಣಿ ಅವರು ಸಹ ಮಂತ್ರಿ ಸ್ಥಾನ ಪಡೆಯಲು ಮುಂದಾಗಿದ್ದಾರೆ.</p>.<p>ಬಿಜೆಪಿಯ ಸಿ.ಎಂ. ಉದಾಸಿ ನಿಧನದಿಂದಾಗಿ ನಡೆದಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಶ್ರೀನಿಮಾಸ್ ಮಾನೆ ಅವರು ಸಚಿವರಾಗಲು ಪ್ರಯತ್ನಿಸುತ್ತಿದ್ದಾರೆ.</p>.<p>ತಮ್ಮ ಕ್ಷೇತ್ರದ (ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ) ಮುಖಂಡ ಯಾಸೀರ ಅಹಮದ್ ಖಾನ್ ಪಠಾಣ ಅವರನ್ನು ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲಿಸುವಲ್ಲಿ ಮಾನೆ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದೇ ಕಾರಣ ಮುಂದಿಟ್ಟುಕೊಂಡು ಅವರು ಸಚಿವರಾಗುವ ಸಾಧ್ಯತೆ ಹೆಚ್ಚಿದೆ.</p>.<p>ರಾಣೆಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ ಕೋಳಿವಾಡ ಹಾಗೂ ಹಿರೇಕೆರೂರು ಕ್ಷೇತ್ರದ ಶಾಸಕ ಯು.ಬಿ.ಬಣಕಾರ ಅವರು ಸಹ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸುವ ಸಾಧ್ಯತೆ ಇದೆ. ಹೊಸದಾಗಿ ಶಾಸಕರಾಗಿರುವ ಪಠಾಣ ಸಹ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟರೂ ಆಶ್ಚರ್ಯವಿಲ್ಲ.</p>.<p>ಸಚಿವ ಸ್ಥಾನ ನೀಡಿದರೆ ಕೈ ಭದ್ರ: ‘ಹಾವೇರಿ ಜಿಲ್ಲೆ, ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ನ ಭದ್ರಕೋಟೆಯಾಗಿದೆ. ಮುಂಬರುವ ಸಾರ್ವತ್ರಿಕ ಚುನಾವಣೆ ಹಾಗೂ ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಕೈ ಭದ್ರವಾಗಬೇಕಾದರೆ, ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಒತ್ತಾಯಿಸುತ್ತಿದ್ದಾರೆ.</p>.<p>‘ಎಲ್ಲ ಪಕ್ಷಗಳ ರೀತಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಒಳ ಜಗಳವಿದೆ. ಆದರೆ, ಚುನಾವಣೆ ಬಂದಾಗ ಎಲ್ಲರೂ ಒಗ್ಗಟ್ಟಾಗಿ ಎದುರಿಸುತ್ತೇವೆ. ಇದರ ಪರಿಣಾಮವಾಗಿಯೇ ಶಿಗ್ಗಾವಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈಗ ಸಚಿವ ಸ್ಥಾನ ಪಡೆಯಲು ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಲಿದ್ದೇವೆ. ಯಾರಾದರೂ ಆಗಲಿ ಜಿಲ್ಲೆಯ ಶಾಸಕರು ಸಚಿವರಾಗಲಿ ಎಂಬುದಾಗಿ ವರಿಷ್ಠರನ್ನು ಒತ್ತಾಯಿಸಲಿದ್ದೇವೆ’ ಎಂದು ಮುಖಂಡರೊಬ್ಬರು ಹೇಳಿದರು.</p>.<p> <strong>ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಜಿಲ್ಲೆಗೆ ಸಚಿವ ಸ್ಥಾನದ ಅಗತ್ಯತೆಯಿದೆ. ಈ ಬಗ್ಗೆ ಪಕ್ಷದ ವರಿಷ್ಠರ ಎದುರು ಮನವಿ ಮಾಡುತ್ತೇವೆ </strong></p><p><strong>-ಸಂಜೀವಕುಮಾರ ನೀರಲಗಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ</strong></p>.<p> <strong>‘ನಿಯೋಗದಿಂದ ಭೇಟಿ’</strong> </p><p>‘ರಾಜ್ಯ ಸರ್ಕಾರದಲ್ಲಿ ಸದ್ಯದ ಸಚಿವ ಸಂಪುಟ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಮಯ ಬಂದರೆ ಹಾವೇರಿ ಜಿಲ್ಲೆಯಿಂದ ನಿಯೋಗದಲ್ಲಿ ತೆರಳಿ ವರಿಷ್ಠರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಮುಖಂಡರು ತಿಳಿಸಿದ್ದಾರೆ. ‘ಜಿಲ್ಲೆಯ ಜನರು ಕಾಂಗ್ರೆಸ್ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ನಿರೀಕ್ಷೆಯನ್ನು ಉಳಿಸಿಕೊಳ್ಳಲು ಸಚಿವ ಸ್ಥಾನದ ಅಗತ್ಯತೆಯಿದೆ. ಜೊತೆಗೆ ಸ್ಥಳೀಯ ಶಾಸಕರನ್ನೇ ಜಿಲ್ಲಾ ಉಸ್ತುವಾರಿ ಸಚಿವ ಮಾಡಬೇಕೆಂಬ ಆಗ್ರಹವೂ ಜನರಿಂದ ಕೇಳಿಬರುತ್ತಿವೆ. ಈ ಎಲ್ಲ ಅಂಶಗಳನ್ನು ವರಿಷ್ಠರಿಗೆ ತಿಳಿಸಲಾಗುವುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತಿದ್ದಂತೆ, ಜಿಲ್ಲೆಯಲ್ಲಿ ‘ಕೈ’ ಪಕ್ಷದ ಚಟುವಟಿಕೆಗಳು ಚುರುಕುಗೊಂಡಿವೆ. ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಸಚಿವ ಸ್ಥಾನ ಪಡೆಯಲು ಜಿಲ್ಲೆಯ ಶಾಸಕರ ನಡುವೆ ತೆರೆಮರೆಯಲ್ಲಿ ಪೈಪೋಟಿ ಶುರುವಾಗಿದೆ.</p>.<p>ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ನಂತರ ‘ಬಿಜೆಪಿ ಮುಕ್ತ ಹಾವೇರಿ ಜಿಲ್ಲೆ’ ಮಾಡಿರುವ ಹುಮ್ಮಸ್ಸಿನಲ್ಲಿರುವ ಶಾಸಕರು, ಅದೇ ಕಾರಣ ಮುಂದಿಟ್ಟುಕೊಂಡು ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಲು ಸಜ್ಜಾಗಿದ್ದಾರೆ.</p>.<p>ಬಿಜೆಪಿ ಭದ್ರಕೋಟೆ ಎನಿಸಿಕೊಂಡಿದ್ದ ಶಿಗ್ಗಾವಿ ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಬಾವುಟ ಹಾರಿದೆ. ಪಕ್ಷದ ಅಭ್ಯರ್ಥಿ ಯಾಸೀರ ಅಹಮದ್ ಖಾನ್ ಪಠಾಣ ಗೆಲುವಿನ ನಗೆ ಬೀರಿದ್ದಾರೆ. ‘ನಮ್ಮ ತಂತ್ರಗಳಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ’ ಎಂದು ಹೇಳಿಕೊಳ್ಳುತ್ತಿರುವ ಶಾಸಕರು, ಸಚಿವ ಸ್ಥಾನ ತಮ್ಮದಾಗಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ.</p>.<p>ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯ ಆರು ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು ಗೆದ್ದಿದ್ದರು. ಶಿಗ್ಗಾವಿಯಲ್ಲಿ ಮಾತ್ರ ಬಿಜೆಪಿಯ ಬಸವರಾಜ ಬೊಮ್ಮಾಯಿ ವಿಜಯಶಾಲಿಯಾಗಿದ್ದರು. ಆದರೆ, ಶಿಗ್ಗಾವಿ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮೆರೆದಿದೆ. ಇದೇ ಕಾರಣ ಮುಂದಿಟ್ಟುಕೊಂಡು ಸಚಿವ ಸ್ಥಾನ ಪಡೆಯಲು ಶಾಸಕರು ಮುಂದಾಗಿದ್ದಾರೆ.</p>.<p>ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಹಾವೇರಿ ಜಿಲ್ಲೆಯ ಯಾವುದೇ ಶಾಸಕರಿಗೆ ಸಚಿವ ಸ್ಥಾನ ಸಿಕ್ಕಿಲ್ಲ. ಜೊತೆಗೆ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸಹ ಬೇರೆ ಜಿಲ್ಲೆಯವರು. ಹಾವೇರಿ ಜಿಲ್ಲೆಯ ಶಾಸಕರೇ ಸಚಿವರಾದರೆ, ಸ್ಥಳೀಯರಿಗೆ ಅನುಕೂಲವಾಗುವುದಾಗಿ ಪಕ್ಷದ ಮುಖಂಡರು ಹೇಳುತ್ತಿದ್ದಾರೆ.</p>.<p>‘ಶಿಗ್ಗಾವಿ ಗೆಲುವಿನ ಮೂಲಕ ಹಾವೇರಿ ಜಿಲ್ಲೆಯ ಶಕ್ತಿ ಪ್ರದರ್ಶನ ಮಾಡಿದ್ದೇವೆ. ಈ ಬಾರಿ ಜಿಲ್ಲೆಗೆ ಸಚಿವ ಸ್ಥಾನ ಬೇಕು ಎಂದು ವರಿಷ್ಠರಿಗೆ ಮನವಿ ಮಾಡಲಾಗಿದೆ. ಜೊತೆಗೆ, ಸಚಿವ ಸ್ಥಾನ ಪಡೆಯಲು ಪಟ್ಟು ಹಿಡಿಯಲು ಸಜ್ಜಾಗಿದ್ದೇವೆ’ ಎಂದು ಪಕ್ಷದ ಮುಖಂಡರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಳೆದ ಬಾರಿ ಜಾತಿ ಹಾಗೂ ಸಮುದಾಯದ ಲೆಕ್ಕಾಚಾರದಲ್ಲಿ ಸಚಿವ ಸ್ಥಾನ ನೀಡಲಾಗಿತ್ತು. ಹೀಗಾಗಿ, ಹಾವೇರಿಗೆ ಸಚಿವ ಸ್ಥಾನ ಸಿಗಲಿಲ್ಲ. ಪಕ್ಷದ ತೀರ್ಮಾನವೆಂಬ ಕಾರಣಕ್ಕೆ ಶಾಸಕರು ಸುಮ್ಮನಾಗಿದ್ದರು. ಆದರೆ, ಈ ಬಾರಿ ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದೇವೆ. ಹಕ್ಕಿನ ರೂಪದಲ್ಲಿ ಸಚಿವ ಸ್ಥಾನ ಕೇಳಲು ಶಾಸಕರು ತಯಾರಾಗಿದ್ದಾರೆ’ ಎಂದು ಹೇಳಿದರು.</p>.<p>ಐವರ ನಡುವೆ ತೀವ್ರ ಪೈಪೋಟಿ: ಶಾಸಕರಾದ ಬಸವರಾಜ ಶಿವಣ್ಣನವರ, ರುದ್ರಪ್ಪ ಲಮಾಣಿ, ಶ್ರೀನಿವಾಸ್ ಮಾನೆ, ಪ್ರಕಾಶ ಕೋಳಿವಾಡ, ಯು.ಬಿ. ಬಣಕಾರ ನಡುವೆ ಸಚಿವ ಸ್ಥಾನಕ್ಕಾಗಿ ಪೈಪೋಟಿಯಿದೆ.</p>.<p>ಒಂದು ಬಾರಿ ಸಚಿವ ಸ್ಥಾನ ನಿಭಾಯಿಸಿದ ಅನುಭವ ಹಾಗೂ ಹಿರಿಯ ಶಾಸಕರೆಂಬ ಕಾರಣ ಮುಂದಿಟ್ಟುಕೊಂಡು ಬಸವರಾಜ ಶಿವಣ್ಣನವರ ಅವರು ಸಚಿವ ಸ್ಥಾನ ಕೇಳಲು ಸಜ್ಜಾಗಿದ್ದಾರೆ. ಇದೇ ಕಾರಣ ಬಳಸಿ ರುದ್ರಪ್ಪ ಲಮಾಣಿ ಅವರು ಸಹ ಮಂತ್ರಿ ಸ್ಥಾನ ಪಡೆಯಲು ಮುಂದಾಗಿದ್ದಾರೆ.</p>.<p>ಬಿಜೆಪಿಯ ಸಿ.ಎಂ. ಉದಾಸಿ ನಿಧನದಿಂದಾಗಿ ನಡೆದಿದ್ದ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಾಗೂ ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಶ್ರೀನಿಮಾಸ್ ಮಾನೆ ಅವರು ಸಚಿವರಾಗಲು ಪ್ರಯತ್ನಿಸುತ್ತಿದ್ದಾರೆ.</p>.<p>ತಮ್ಮ ಕ್ಷೇತ್ರದ (ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ) ಮುಖಂಡ ಯಾಸೀರ ಅಹಮದ್ ಖಾನ್ ಪಠಾಣ ಅವರನ್ನು ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲಿಸುವಲ್ಲಿ ಮಾನೆ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಇದೇ ಕಾರಣ ಮುಂದಿಟ್ಟುಕೊಂಡು ಅವರು ಸಚಿವರಾಗುವ ಸಾಧ್ಯತೆ ಹೆಚ್ಚಿದೆ.</p>.<p>ರಾಣೆಬೆನ್ನೂರು ಕ್ಷೇತ್ರದ ಶಾಸಕ ಪ್ರಕಾಶ ಕೋಳಿವಾಡ ಹಾಗೂ ಹಿರೇಕೆರೂರು ಕ್ಷೇತ್ರದ ಶಾಸಕ ಯು.ಬಿ.ಬಣಕಾರ ಅವರು ಸಹ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸುವ ಸಾಧ್ಯತೆ ಇದೆ. ಹೊಸದಾಗಿ ಶಾಸಕರಾಗಿರುವ ಪಠಾಣ ಸಹ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟರೂ ಆಶ್ಚರ್ಯವಿಲ್ಲ.</p>.<p>ಸಚಿವ ಸ್ಥಾನ ನೀಡಿದರೆ ಕೈ ಭದ್ರ: ‘ಹಾವೇರಿ ಜಿಲ್ಲೆ, ಸದ್ಯದ ಸ್ಥಿತಿಯಲ್ಲಿ ಕಾಂಗ್ರೆಸ್ನ ಭದ್ರಕೋಟೆಯಾಗಿದೆ. ಮುಂಬರುವ ಸಾರ್ವತ್ರಿಕ ಚುನಾವಣೆ ಹಾಗೂ ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಕೈ ಭದ್ರವಾಗಬೇಕಾದರೆ, ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಒತ್ತಾಯಿಸುತ್ತಿದ್ದಾರೆ.</p>.<p>‘ಎಲ್ಲ ಪಕ್ಷಗಳ ರೀತಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ಒಳ ಜಗಳವಿದೆ. ಆದರೆ, ಚುನಾವಣೆ ಬಂದಾಗ ಎಲ್ಲರೂ ಒಗ್ಗಟ್ಟಾಗಿ ಎದುರಿಸುತ್ತೇವೆ. ಇದರ ಪರಿಣಾಮವಾಗಿಯೇ ಶಿಗ್ಗಾವಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಈಗ ಸಚಿವ ಸ್ಥಾನ ಪಡೆಯಲು ಎಲ್ಲರೂ ಒಗ್ಗಟ್ಟಿನಿಂದ ಪ್ರಯತ್ನಿಸಲಿದ್ದೇವೆ. ಯಾರಾದರೂ ಆಗಲಿ ಜಿಲ್ಲೆಯ ಶಾಸಕರು ಸಚಿವರಾಗಲಿ ಎಂಬುದಾಗಿ ವರಿಷ್ಠರನ್ನು ಒತ್ತಾಯಿಸಲಿದ್ದೇವೆ’ ಎಂದು ಮುಖಂಡರೊಬ್ಬರು ಹೇಳಿದರು.</p>.<p> <strong>ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಜಿಲ್ಲೆಗೆ ಸಚಿವ ಸ್ಥಾನದ ಅಗತ್ಯತೆಯಿದೆ. ಈ ಬಗ್ಗೆ ಪಕ್ಷದ ವರಿಷ್ಠರ ಎದುರು ಮನವಿ ಮಾಡುತ್ತೇವೆ </strong></p><p><strong>-ಸಂಜೀವಕುಮಾರ ನೀರಲಗಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ</strong></p>.<p> <strong>‘ನಿಯೋಗದಿಂದ ಭೇಟಿ’</strong> </p><p>‘ರಾಜ್ಯ ಸರ್ಕಾರದಲ್ಲಿ ಸದ್ಯದ ಸಚಿವ ಸಂಪುಟ ಚೆನ್ನಾಗಿದೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಮಯ ಬಂದರೆ ಹಾವೇರಿ ಜಿಲ್ಲೆಯಿಂದ ನಿಯೋಗದಲ್ಲಿ ತೆರಳಿ ವರಿಷ್ಠರಿಗೆ ಮನವಿ ಸಲ್ಲಿಸಲಾಗುವುದು’ ಎಂದು ಮುಖಂಡರು ತಿಳಿಸಿದ್ದಾರೆ. ‘ಜಿಲ್ಲೆಯ ಜನರು ಕಾಂಗ್ರೆಸ್ ಮೇಲೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ನಿರೀಕ್ಷೆಯನ್ನು ಉಳಿಸಿಕೊಳ್ಳಲು ಸಚಿವ ಸ್ಥಾನದ ಅಗತ್ಯತೆಯಿದೆ. ಜೊತೆಗೆ ಸ್ಥಳೀಯ ಶಾಸಕರನ್ನೇ ಜಿಲ್ಲಾ ಉಸ್ತುವಾರಿ ಸಚಿವ ಮಾಡಬೇಕೆಂಬ ಆಗ್ರಹವೂ ಜನರಿಂದ ಕೇಳಿಬರುತ್ತಿವೆ. ಈ ಎಲ್ಲ ಅಂಶಗಳನ್ನು ವರಿಷ್ಠರಿಗೆ ತಿಳಿಸಲಾಗುವುದು’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>