<p>ಹಾವೇರಿ: ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದುರ್ಗಾ ದೌಡ್ ಪಥಸಂಚಲನವು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಜರುಗಿತು. ಜನರು, ಕೈಯಲ್ಲಿ ಕತ್ತಿ ಹಿಡಿದು ಪಥಸಂಚಲನದಲ್ಲಿ ಪಾಲ್ಗೊಂಡರು.</p>.<p>ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಹಾಗೂ ಬಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ದುರ್ಗಾ ದೌಡ್ ಪಥಸಂಚಲನದಲ್ಲಿ ನಗರದ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.</p>.<p>ನಗರದ ದ್ಯಾಮವ್ವದೇವಿ ದೇವಸ್ಥಾನದ ಆವರಣದಿಂದ ಶುರುವಾದ ಪಥ ಸಂಚಲನಕ್ಕೆ ಹರಸೂರು ಬಣ್ಣದಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.</p>.<p>ಶ್ವೇತ ವಸ್ತ್ರ, ಕೇಸರಿ ಪೇಟಾ ಹಾಗೂ ಶಾಲು ಧರಿಸಿದ್ದ ಜನರು, ಕೈಯಲ್ಲಿ ಕತ್ತಿ ಹಿಡಿದು ಪಥಸಂಚಲನದಲ್ಲಿ ಹೆಜ್ಜೆ ಹಾಕಿದರು. ಪಥಸಂಚಲನದುದ್ದಕ್ಕೂ ‘ಜೈ ಶಿವಾಜಿ’ ಸೇರಿದಂತೆ ಹಲವು ಘೋಷಣೆಗಳನ್ನು ಕೂಗಿದರು.</p>.<p>ಸುಭಾಷ ವೃತ್ತ, ಡಾ. ಬಿ.ಆರ್.ಅಂಬೇಡ್ಕರ ವೃತ್ತ, ಮೇಲಿನ ಪೇಟೆ, ದ್ಯಾಮವ್ವನಗುಡಿ ಪಾದಗಟ್ಟಿ, ಎಂ.ಜಿ. ರಸ್ತೆ, ಮಹಾತ್ಮಾ ಗಾಂಧಿ ವೃತ್ತದ ಮೂಲಕ ಸಾಗಿದ ಪಥಸಂಚಲನ, ರಾಮದೇವರ ಮಂದಿರದಲ್ಲಿ ಸಮಾಪ್ತಗೊಂಡಿತು.</p>.<p>ರಾಮದೇವರ ಗುಡಿಯಲ್ಲಿ ಶಸ್ತ್ರಾಸ್ತ್ರ ಪೂಜೆ ನೆರವೇರಿತು. ವಿಎಚ್ಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಅನಿಲ ಹಲವಾಗಿಲ, ಭಜರಂಗದಳ ತಾಲ್ಲೂಕು ಸಂಯೋಜಕ ಸಂತೋಷ ನೂರಂದೇವರಮಠ, ಪ್ರವೀಣ ಗಾಣಿಗೇರ, ಶರಣಬಸಪ್ಪ ದೊಡ್ಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾವೇರಿ: ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದುರ್ಗಾ ದೌಡ್ ಪಥಸಂಚಲನವು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಜರುಗಿತು. ಜನರು, ಕೈಯಲ್ಲಿ ಕತ್ತಿ ಹಿಡಿದು ಪಥಸಂಚಲನದಲ್ಲಿ ಪಾಲ್ಗೊಂಡರು.</p>.<p>ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಹಾಗೂ ಬಜರಂಗದಳದ ವತಿಯಿಂದ ಹಮ್ಮಿಕೊಂಡಿದ್ದ ದುರ್ಗಾ ದೌಡ್ ಪಥಸಂಚಲನದಲ್ಲಿ ನಗರದ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.</p>.<p>ನಗರದ ದ್ಯಾಮವ್ವದೇವಿ ದೇವಸ್ಥಾನದ ಆವರಣದಿಂದ ಶುರುವಾದ ಪಥ ಸಂಚಲನಕ್ಕೆ ಹರಸೂರು ಬಣ್ಣದಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಚಾಲನೆ ನೀಡಿದರು.</p>.<p>ಶ್ವೇತ ವಸ್ತ್ರ, ಕೇಸರಿ ಪೇಟಾ ಹಾಗೂ ಶಾಲು ಧರಿಸಿದ್ದ ಜನರು, ಕೈಯಲ್ಲಿ ಕತ್ತಿ ಹಿಡಿದು ಪಥಸಂಚಲನದಲ್ಲಿ ಹೆಜ್ಜೆ ಹಾಕಿದರು. ಪಥಸಂಚಲನದುದ್ದಕ್ಕೂ ‘ಜೈ ಶಿವಾಜಿ’ ಸೇರಿದಂತೆ ಹಲವು ಘೋಷಣೆಗಳನ್ನು ಕೂಗಿದರು.</p>.<p>ಸುಭಾಷ ವೃತ್ತ, ಡಾ. ಬಿ.ಆರ್.ಅಂಬೇಡ್ಕರ ವೃತ್ತ, ಮೇಲಿನ ಪೇಟೆ, ದ್ಯಾಮವ್ವನಗುಡಿ ಪಾದಗಟ್ಟಿ, ಎಂ.ಜಿ. ರಸ್ತೆ, ಮಹಾತ್ಮಾ ಗಾಂಧಿ ವೃತ್ತದ ಮೂಲಕ ಸಾಗಿದ ಪಥಸಂಚಲನ, ರಾಮದೇವರ ಮಂದಿರದಲ್ಲಿ ಸಮಾಪ್ತಗೊಂಡಿತು.</p>.<p>ರಾಮದೇವರ ಗುಡಿಯಲ್ಲಿ ಶಸ್ತ್ರಾಸ್ತ್ರ ಪೂಜೆ ನೆರವೇರಿತು. ವಿಎಚ್ಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಅನಿಲ ಹಲವಾಗಿಲ, ಭಜರಂಗದಳ ತಾಲ್ಲೂಕು ಸಂಯೋಜಕ ಸಂತೋಷ ನೂರಂದೇವರಮಠ, ಪ್ರವೀಣ ಗಾಣಿಗೇರ, ಶರಣಬಸಪ್ಪ ದೊಡ್ಡಮನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>