<p><strong>ಹಾವೇರಿ</strong>: ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ–ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಆಯೋಗ ತಯಾರಿ ಶುರು ಮಾಡಿದ್ದು, ಮೊದಲ ಹಂತವಾಗಿ ಜುಲೈ 5ರಂದು ವಿದ್ಯುನ್ಮಾನ ಮತಯಂತ್ರಗಳ ಪ್ರಥಮ ಹಂತದ ಪರಿಶೀಲನಾ ಪ್ರಕ್ರಿಯೆ ಜರುಗಲಿದೆ.</p>.<p>‘ಚುನಾವಣಾ ಆಯೋಗದ ನಿರ್ದೇಶನದಂತೆ ಜುಲೈ 8ರಿಂದ 10ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರಥಮ ಹಂತದ ಪರಿಶೀಲನಾ ಕಾರ್ಯ ನಡೆಯಲಿದೆ. ಎಲ್ಲ ರಾಜಕೀಯ ಪಕ್ಷದವರು ಗುರುತಿನ ಚೀಟಿ ಸಮೇತ ಕಡ್ಡಾಯವಾಗಿ ಹಾಜರಿರಬೇಕು’ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರಘುನಂದಮೂರ್ತಿ ಕೋರಿದ್ದಾರೆ.</p>.<p>‘ಪರಿಶೀಲನಾ ಕಾರ್ಯಕ್ಕೆ ಬರುವ ರಾಜಕೀಯ ಪಕ್ಷದವರು ಪಕ್ಷದ ವತಿಯಿಂದ ನೀಡಲಾದ ಯಾವುದಾದರೂ ಒಂದು ಗುರುತಿನ ಚೀಟಿ, ಆಧಾರ, ಚುನಾವಣಾ ಗುರುತಿನ ಚೀಟಿ ಹಾಗೂ 2 ಪಾಸ್ಪೋರ್ಟ್ ಅಳತೆ ಭಾವಚಿತ್ರ ಹಾಜರುಪಡಿಸಬೇಕು’ ಎಂದು ತಿಳಿಸಿದ್ದಾರೆ.</p>.<p>‘ಪರಿಶೀಲನಾ ಕಾರ್ಯಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜುಲೈ 5ರಂದು ರಾಷ್ಟ್ರೀಯ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳ ಸಭೆ ನಡೆಯಲಿದೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ</strong>: ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ–ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಆಯೋಗ ತಯಾರಿ ಶುರು ಮಾಡಿದ್ದು, ಮೊದಲ ಹಂತವಾಗಿ ಜುಲೈ 5ರಂದು ವಿದ್ಯುನ್ಮಾನ ಮತಯಂತ್ರಗಳ ಪ್ರಥಮ ಹಂತದ ಪರಿಶೀಲನಾ ಪ್ರಕ್ರಿಯೆ ಜರುಗಲಿದೆ.</p>.<p>‘ಚುನಾವಣಾ ಆಯೋಗದ ನಿರ್ದೇಶನದಂತೆ ಜುಲೈ 8ರಿಂದ 10ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರಥಮ ಹಂತದ ಪರಿಶೀಲನಾ ಕಾರ್ಯ ನಡೆಯಲಿದೆ. ಎಲ್ಲ ರಾಜಕೀಯ ಪಕ್ಷದವರು ಗುರುತಿನ ಚೀಟಿ ಸಮೇತ ಕಡ್ಡಾಯವಾಗಿ ಹಾಜರಿರಬೇಕು’ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರಘುನಂದಮೂರ್ತಿ ಕೋರಿದ್ದಾರೆ.</p>.<p>‘ಪರಿಶೀಲನಾ ಕಾರ್ಯಕ್ಕೆ ಬರುವ ರಾಜಕೀಯ ಪಕ್ಷದವರು ಪಕ್ಷದ ವತಿಯಿಂದ ನೀಡಲಾದ ಯಾವುದಾದರೂ ಒಂದು ಗುರುತಿನ ಚೀಟಿ, ಆಧಾರ, ಚುನಾವಣಾ ಗುರುತಿನ ಚೀಟಿ ಹಾಗೂ 2 ಪಾಸ್ಪೋರ್ಟ್ ಅಳತೆ ಭಾವಚಿತ್ರ ಹಾಜರುಪಡಿಸಬೇಕು’ ಎಂದು ತಿಳಿಸಿದ್ದಾರೆ.</p>.<p>‘ಪರಿಶೀಲನಾ ಕಾರ್ಯಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜುಲೈ 5ರಂದು ರಾಷ್ಟ್ರೀಯ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳ ಸಭೆ ನಡೆಯಲಿದೆ’ ಎಂದೂ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>